ಫಲಿತಾಂಶವಿಲ್ಲದೆ ಭಾರತ-ಚೀನಾ 14ನೇ ಸುತ್ತಿನ ಮಾತುಕತೆ ಮುಕ್ತಾಯ
Team Udayavani, Jan 13, 2022, 9:00 PM IST
ನವದೆಹಲಿ/ಬೀಜಿಂಗ್ : ಭಾರತ ಮತ್ತು ಚೀನಾ ನಡುವೆ ಬುಧವಾರ ನಡೆದ 14ನೇ ಸುತ್ತಿನ ಮಾತುಕತೆಯಲ್ಲಿ ಬಿಕ್ಕಟ್ಟು ಪರಿಹಾರ ಸೂತ್ರಗಳು ವ್ಯಕ್ತವಾಗಿಲ್ಲ. ಹೀಗಾಗಿ, ಎರಡೂ ದೇಶಗಳ ಮಿಲಿಟರಿ ಕಮಾಂಡರ್ಗಳು ಸತತ ಸಂಪರ್ಕದಲ್ಲಿದ್ದುಕೊಂಡು ಮಾತುಕತೆ ಪ್ರಕ್ರಿಯೆ ಮುಂದುವರಿಸಲು ನಿರ್ಧರಿಸಲಾಗಿದೆ.
ಚೀನಾಕ್ಕೆ ಹೊಂದಿಕೊಂಡಂತೆ ಇರುವ ಚುಶೂಲ್ನಲ್ಲಿ ನಡೆದಿದ್ದ ಮಾತುಕತೆ ವೇಳೆ, ಪೂರ್ವ ಲಡಾಖ್ನಲ್ಲಿರುವ ಪಟ್ರೋಲಿಂಗ್ ಪಾಯಿಂಟ್ 15ರಿಂದ ಸೇನೆ ವಾಪಸಾತಿ ಬಗ್ಗೆ ಪ್ರಧಾನವಾಗಿ ಚರ್ಚೆಯಾಯಿತು. ಆದರೆ, ಎರಡೂ ಕಡೆಯವರು ತಮ್ಮ ತಮ್ಮ ನಿಲುವಿಗೇ ಬದ್ಧವಾಗಿದ್ದರಿಂದ ಮಾತುಕತೆಯಲ್ಲಿ ಧನಾತ್ಮಕ ಮುಕ್ತಾಯ ಕಾಣಲಿಲ್ಲ.
ಭಾರತ ಮತ್ತು ಚೀನಾ ಸರ್ಕಾರದ ರಕ್ಷಣೆ, ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ, ಯುದ್ಧ ನಡೆದರೆ, ಭಾರತವೇ ಗೆಲ್ಲಲಿದೆ ಎಂಬ ಭೂಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಮಾತಿಗೆ ಚೀನಾದ ವಿದೇಶಾಂಗ ಇಲಾಖೆ ವಕ್ತಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಮುಖ ಹುದ್ದೆಗಳಲ್ಲಿ ಇರುವವರು ಪ್ರಚೋದನಾತ್ಮಕ ಮತ್ತು ಬಾಂಧವ್ಯಕ್ಕೆ ಧಕ್ಕೆ ತರುವ ಮಾತುಗಳನ್ನಾಡಬಾರದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪುನೀತ್ ಭಾವಚಿತ್ರದೊಂದಿಗೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ ಬಾಲಕ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ