ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ಬೇಡ: ಅಶೋಕ್‌

ಗ್ರಾಮವಾಸ್ತವ್ಯದಲ್ಲಿ ಅಧಿಕಾರಿಗಳಿಗೆ ಸಚಿವರ ಸೂಚನೆ

Team Udayavani, Nov 20, 2022, 7:00 AM IST

ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ಬೇಡ: ಅಶೋಕ್‌

ಮೈಸೂರು: ಸರಕಾರಿ ಜಮೀನು, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್‌ ಪ್ರಕರಣ ದಾಖಲಿಸಬಾರದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಸೂಚಿಸಿದ್ದಾರೆ.

ಎಚ್‌.ಡಿ. ಕೋಟೆ ಭೀಮ ನಕೊಲ್ಲಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಹಿಂದೆ ಸರಕಾರಿ ಜಮೀನು ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತ್ತಿತ್ತು. ಅವರ ಮೇಲೆ ಪ್ರಕರಣ ದಾಖಲಿಸುತ್ತಿದ್ದುದರಿಂದ ಜಾಮೀನಿಗಾಗಿ ಕೋರ್ಟ್‌ಗೆ ಅಲೆಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಅಂಥ ಸ್ಥಿತಿ ಇಲ್ಲ ಎಂದರು.

ಕೃಷಿ ಭೂಮಿಯಲ್ಲಿ ಕೋಳಿ ಫಾರ್ಮ್ ನಿರ್ಮಾಣಕ್ಕಾಗಿ ಭೂ ಪರಿವರ್ತನೆ ಮಾಡಲು ಸಾಕಷ್ಟು ಸಮಯ ವ್ಯರ್ಥವಾಗುತ್ತಿತ್ತು. ಈಗ ಕೋಳಿ ಸಾಕಣಿಕೆಯನ್ನೂ ಕೃಷಿ ಎಂದೇ ಪರಿಗಣಿಸಲಾಗಿದೆ. ಹಾಗೆಯೇ ಜಮೀನು ಖಾತೆ ಮಾಡಲು 30 ದಿನ ಇದ್ದ ಅವಧಿಯನ್ನು ಇಳಿಸಿ ಏಳು ದಿನಗಳಿಗೆ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಂದಿ ಸರಕಾರದಿಂದ ಪಡೆದ ಭೂಮಿಯಲ್ಲಿ ಮನೆ ಕಟ್ಟಲು ಜಿಲ್ಲಾಧಿಕಾರಿಗಳ ಹಂತದಲ್ಲೇ ಅನುಮತಿ ಪಡೆಯುವಂತೆ ಮಾಡಲಾಗಿದೆ. ಆರು ತಿಂಗಳು ಇದ್ದ ಭೂ ಪರಿವರ್ತನೆ ಅವಧಿಯನ್ನು ಏಳು ದಿನಗಳಿಗೆ ಇಳಿಸಿದ್ದು, ರೈತರ ಕೆಲಸ ಶೀಘ್ರದಲ್ಲೇ ಆಗುವಂತೆ ಮಾಡಿದ್ದೇವೆ ಎಂದು ಅಶೋಕ್‌ ಹೇಳಿದರು.

ಕಾಡಂಚಿನ ಭಾಗದಲ್ಲಿ 52 ವರ್ಷದಿಂದ ಉಳುಮೆ ಮಾಡಿದವರಿಗೆ ಹಕ್ಕು ಪತ್ರ ನೀಡಿಲ್ಲ. ಬೆಂಗಳೂರಿನಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರು ಜಿಲ್ಲೆಯ 3,060 ರೈತರಿಗೆ 2.55 ಕೋಟಿ ರೂ. ಬೆಳೆ ಹಾನಿ ಪರಿಹಾರ ನೀಡ ಲಾಗಿದೆ. 5,640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ರೂ. ಹಾಗೂ ಕೋವಿಡ್‌ನಿಂದ ಮೃತಪಟ್ಟ 3,664 ಕುಟುಂಬದವರಿಗೆ 27.35 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಈಗ ದೂರವಾಣಿ ಮೂಲಕ “ಹಲೋ ಕಂದಾಯ ಸಚಿವರೇ’ ಎಂದು ಕರೆ ಮಾಡಿ 72 ತಾಸುಗಳ ಒಳಗಾಗಿ ವೃದ್ಧಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು.

“ಅಮಾಸೆ’ಗೆ
ಹುಣ್ಣಿಮೆ ಬೆಳಕು
ಭೀಮನಕೊಲ್ಲಿ ಮಹದೇಶ್ವರ ದೇಗುಲದ ಆವರಣದಲ್ಲಿ ನಡೆದ ಸರ ಕಾರದ ವಿವಿಧ ಸೌಲಭ್ಯ ವಿತರಣ ಕಾರ್ಯಕ್ರಮದಲ್ಲಿ ಒಂದು ಕಾಲು ಕಳೆದುಕೊಂಡಿದ್ದ ವಿಶೇಷ ಚೇತನ ಅಮಾಸೆ ಎಂಬವರಿಗೆ ಸಚಿವರು ಸ್ವಹಸ್ತದಿಂದಲೇ ಕೃತಕ ಕಾಲು ಜೋಡಿಸಿ ಶುಭ ಹಾರೈಸಿದರು. ಬಳಿಕ ಸಚಿವರು ಅಮಾಸೆಯನ್ನು ವೇದಿಕೆಯಲ್ಲಿ ನಡೆದಾಡಿಸಿದರು. ಈ ವೇಳೆ ಮುಗ್ಗರಿಸಿದ ಅಮಾಸೆ ಕೆಳಗೆ ಕುಸಿದರು. ಬಳಿಕ ಸಚಿವರು ಮತ್ತೆ ಕೃತಕ ಕಾಲನ್ನು ಜೋಡಿಸಿ, ಅವರು ಆತ್ಮವಿಶ್ವಾಸದಿಂದ ನಡೆಯುವಂತೆ ಮಾಡಿದರು. ಅನಂತರ ಅವರಿಂದಲೇ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗಮನ ಸೆಳೆದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.