ಇವೆಂಟ್ ಮಾಡುವ ಹಾಗಿಲ್ಲ: ಹೊಸವರ್ಷಾಚರಣೆಗೆ ಸರಕಾರದ ಮಾರ್ಗಸೂಚಿ
Team Udayavani, Dec 21, 2021, 3:33 PM IST
ಬೆಳಗಾವಿ : ಈ ಬಾರಿಯ ಹೊಸವರ್ಷಾಚರಣೆಗೆ ಮಂಗಳವಾರ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹಿರಂಗ ಇವೆಂಟ್ ಮಾಡಲು ಅವಕಾಶ ನೀಡಿಲ್ಲ.
ಹೊಸವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಮಂಗಳವಾರ ಸಿಎಂ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಮಿತಿಯ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಿಎಂ ಸುದ್ದಿಗಾರರಿಗೆ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು.
ಸಭೆ ಮಾಡಿದ ಪ್ರಮುಖವಾದ ಉದ್ದೇಶ ಒಮಿ ಕ್ರಾನ್ ಮತ್ತು ಕೋವಿಡ್ ತಡೆಗಟ್ಟುವುದಾಗಿದೆ. ತಜ್ಞರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ, ಕೆಲವು ಕ್ರಮಗಳ ಕುರಿತು ಶಿಫಾರಸ್ಸು ಮಾಡಿದ್ದಾರೆ. ಎಂಜಿ ರೋಡ್, ಬ್ರಿಗೇಡ್ ರೋಡ್ ನಲ್ಲಿ ಬಹಿರಂಗ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಲಾಗಿದೆ. ಕ್ಲಬ್ ಗಳು, ರೆಸ್ಟೋರೆಂಟ್ ಗಳಲ್ಲಿ ವಿಶೇಷ ಇವೆಂಟ್ ಮಾಡುವ ಹಾಗೆ ಇಲ್ಲ. ಕ್ಲಬ್ ಗಳಲ್ಲಿ ಸಾಮರ್ಥ್ಯದ 50 % ಗೆ ಮಾತ್ರ ಅವಕಾಶ ಇದೆ. ಅಪಾರ್ಟ್ಮೆಂಟ್ ಗಳಲ್ಲೂ ಬಹಿರಂಗ ಆಚರಣೆಗೆ ಅವಕಾಶ ಇಲ್ಲ. ಎಲ್ಲಾ ಕ್ರಮಗಳನ್ನು ಅಪಾರ್ಟ್ಮೆಂಟ್ ಅಸೋಸಿಯೇಷನ್ ನವರೇ ಮಾಡಬೇಕು. ರಾಜ್ಯಾದ್ಯಂತ ಡಿ. 30 ರಿಂದ 2 ನೇ ಜನವರಿಗೆ ಮಾರ್ಗಸೂಚಿಗಳು ಅನ್ವಯವಾಗಲಿದೆ ಎಂದರು.
ಕ್ಲಬ್ ಗಳಲ್ಲಿ ಸಿಬ್ಬಂದಿ ಆರ್ ಟಿ-ಪಿಸಿಆರ್ ಟೆಸ್ಟ್ ಮಾಡಿಸುವುದು, ಹೊಟೇಲ್, ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಕೆಲಸ ನಿರ್ವಹಿಸುವವರು ಎರಡು ಡೋಸ್ ಕೋವಿಡ್ ಲಸಿಕೆ ಪಡೆಯುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ.
ಕ್ರಿಸ್ಮಸ್ ಬಹಿರಂಗ ಪಾರ್ಟಿಗಳಿಗೆ ಅವಕಾಶ ಇಲ್ಲ. ಚರ್ಚ್ ಒಳಗೆ ಪ್ರಾರ್ಥನೆ ಮಾಡುವುದ್ದಕ್ಕೆ ಯಾವುದೇ ತೊಂದರೆ ಇಲ್ಲ, ಸಾಮಾಜಿಕ ಅಂತರ ಪಾಲಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ