ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!


Team Udayavani, Apr 20, 2021, 7:05 AM IST

ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!

ಕುಂದಾಪುರ: ಈ ಪಂಚಾಯತ್‌ ಎರಡು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರ, ಇಬ್ಬರು ಸಂಸದರು, ಇಬ್ಬರು ಶಾಸಕರ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಊರು ಸರ್ವ ಸೌಲಭ್ಯಗಳನ್ನೂ ಹೊಂದಿರಬೇಕಿತ್ತು. ಆದರೆ ಇಲ್ಲಿನ ಜನರಿಗೆ ಏನಾದರೂ ಅನಾರೋಗ್ಯ ತಲೆದೋರಿದರೆ ತುರ್ತು ಚಿಕಿತ್ಸೆಗೆ 20-25 ಕಿ.ಮೀ. ದೂರ ಬರಬೇಕು; ಅದೂ ಸಣ್ಣ ಆಸ್ಪತ್ರೆಗೆ. ದೊಡ್ಡ ಆಸ್ಪತ್ರೆ ಆಗಬೇಕೆಂದರೆ 45 ಕಿ.ಮೀ. ದೂರ ಹೋಗಬೇಕು.

ಇದು ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರಗಳೆರಡರ ವ್ಯಾಪ್ತಿಯಲ್ಲಿ ಬರುವ ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಕೆಳಸುಂಕ, ಜಡ್ಡಿನಗದ್ದೆ, ಕೆಲಾ, ನಡಂಬೂರು, ಶ್ಯಾಮೆಹಕ್ಲು, ತೊಂಬಟ್ಟು ಭಾಗದ ಜನರ ಸಂಕಷ್ಟ.

2011ರ ಜಣಗಣತಿ ಪ್ರಕಾರ ಅಮಾಸೆಬೈಲು ಗ್ರಾಮದಲ್ಲಿ 3,593 ಪುರುಷರು, 4,000 ಮಹಿಳೆಯರು ಸೇರಿ 7,593 ಮತದಾರರಿದ್ದಾರೆ. ಇನ್ನು ಒಟ್ಟಾರೆ ಅಮಾಸೆಬೈಲು, ಮಚ್ಚಟ್ಟು, ರಟ್ಟಾಡಿ ಈ 3 ಗ್ರಾಮಗಳು ಸೇರಿ 10 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಈಗ ಇನ್ನಷ್ಟು ಹೆಚ್ಚಿದೆ. ಇಷ್ಟೊಂದು ಪ್ರಮಾಣದ ಜನಸಂಖ್ಯೆಯಿದ್ದರೂ ಇಲ್ಲಿ ಆರೋಗ್ಯ ಕೇಂದ್ರವನ್ನು ತೆರೆಯುವ ಮನಸ್ಸನ್ನು ಇಲ್ಲಿನ ಯಾವ ಜನಪ್ರತಿನಿಧಿಗಳೂ ಮಾಡಿಲ್ಲ ಎಂಬುದು ಗ್ರಾಮಸ್ಥರ ಬೇಸರ.

2 ಸಣ್ಣ ಕ್ಲಿನಿಕ್‌
10 ಸಾವಿರಕ್ಕೂ ಅಧಿಕ ಜನಸಂಖ್ಯೆಯಿರುವ 3 ಗ್ರಾಮಗಳನ್ನೊಂಡ ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರಸ್ತುತ ಅಮಾಸೆಬೈಲು ಪೇಟೆಯಲ್ಲಿ ಎರಡು ಸಣ್ಣ ಕ್ಲಿನಿಕ್‌ಗಳಿವೆ. ಅದು ಸಹ ಬೆಳಗ್ಗಿನಿಂದ ಸಂಜೆಯವರೆಗೆ ಮಾತ್ರ. ಸಮೀಪದ ಆರೋಗ್ಯ ಕೇಂದ್ರವೆಂದರೆ ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ. ಅಲ್ಲಿ ರಾತ್ರಿ ಹೊತ್ತಲ್ಲಿ ವೈದ್ಯರಿರುವುದಿಲ್ಲವಾದ್ದರಿಂದ ಆ ಸಂದರ್ಭದಲ್ಲಿ ಯಾರಿಗಾದರೂ ಅನಾರೋಗ್ಯವಾದರೆ 40-45 ಕಿ.ಮೀ. ದೂರದ ಕುಂದಾಪುರಕ್ಕೇ ಬರಬೇಕು. ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ಏರು-ತಗ್ಗಿನ ಮಣ್ಣಿನ ರಸ್ತೆಯಲ್ಲಿ ಸಂಚರಿಸುವುದೇ ಒಂದು ಸಾಹಸ. ಇನ್ನು ಆ್ಯಂಬುಲೆನ್ಸ್‌ ಅಥವಾ ಬೇರೆ ವಾಹನ ಇಲ್ಲವೇ ಯಾರನ್ನಾದರೂ ಸಹಾಯಕ್ಕಾಗಿ ಕರೆಯೋಣವೆಂದರೆ ನೆಟ್ ವರ್ಕ್ ಕೂಡ ಇಲ್ಲ!

20ಕ್ಕೂ ಹೆಚ್ಚು ಸಾವು
ನಮ್ಮೂರಿಗೊಂದು ಆಸ್ಪತ್ರೆ ಮಂಜೂರು ಮಾಡಿಸಿ ಎಂದು ಸಾಕಷ್ಟು ಬಾರಿ ಸಂಬಂಧಪಟ್ಟ ಎಲ್ಲ ಜನ ಪ್ರತಿನಿಧಿಗಳಿಗೆ, ಇಲಾಖೆಗಳಿಗೆ ಮನವಿ ಸಲ್ಲಿಸಿದ್ದೇವೆ. ಈವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹದಗೆಟ್ಟ ರಸ್ತೆ, ಹತ್ತಿರದಲ್ಲಿ ಆಸ್ಪತ್ರೆ ಇಲ್ಲದ್ದರಿಂದ ದಾರಿಯಲ್ಲೇ ಅನೇಕ ಮಂದಿ ಸಾವನ್ನಪ್ಪಿರುವ ನಿದರ್ಶನ ನಮ್ಮ ಕಣ್ಣ ಮುಂದೆಯೇ ಇದೆ. 2 ವರ್ಷಗಳ ಅವಧಿಯಲ್ಲಿಯೇ 20ಕ್ಕೂ ಹೆಚ್ಚು ಮಂದಿ ಈ ಕಾರಣದಿಂದ ಸಾವನ್ನಪ್ಪಿರಬಹುದು ಎನ್ನುತ್ತಾರೆ ಇಲ್ಲಿನ ಗ್ರಾ. ಪಂ. ಸದಸ್ಯ
ಕೃಷ್ಣ ಪೂಜಾರಿ ಅವರು.

ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಿಗೆ ಸೂಕ್ತ ಆರೋಗ್ಯ ಸೇವೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ. ಅಮಾಸೆಬೈಲಿನ ಬಗ್ಗೆಯೂ ಗಮನಹರಿಸಲಾಗುವುದು. ಮುಖ್ಯಮಂತ್ರಿಗಳ ಬಳಿಯೂ ಮಾತನಾಡಿ ಪ್ರಯತ್ನಿಸಲಾಗುವುದು.
– ಬಿ.ವೈ. ರಾಘವೇಂದ್ರ, ಸಂಸದರು

– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.