ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ
Team Udayavani, Apr 18, 2021, 7:12 PM IST
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವ ನಡುವೆಯೇ ಸಾಮಾನ್ಯ ರೋಗಿಗಳು ಸಹ ಚಿಕಿತ್ಸೆಗಾಗಿ ಪರದಾಡುವಂತೆ ಆಗಿದೆ. ಮಹಿಳೆಯೊಬ್ಬರು ಐಸಿಯು ಬೆಡ್ ಸಿಗದ ಕಾರಣ ಆಕ್ಸಿಜನ್ ಸಿಲಿಂಡರ್ನೊಂದಿಗೆ ಆಟೋದಲ್ಲಿ ಐದಾರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗಾಡಿದ ಮನಕಲುವ ಘಟನೆ ರವಿವಾರ ನಡೆದಿದೆ.
ಇಲ್ಲಿನ ಬಸವ ನಗರದ 55 ವರ್ಷದ ಮಹಿಳೆಯೊಬ್ಬರು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಕುಟುಂಬದವರು ಕರೆದುಕೊಂಡು ಹೋಗಿದ್ದರು. ಆಗ ಐಸಿಯು ಬೆಡ್ ಖಾಲಿ ಇಲ್ಲ ಎಂದು ಹೇಳಿ ಆಸ್ಪತ್ರೆಯವರು ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಿದ್ದರು.
ನಂತರ ಐಸಿಯು ಬೆಡ್ಗಾಗಿ ಆಕ್ಸಿಜನ್ ಸಿಲಿಂಡರ್ನೊಂದಿಗೆ ಆಟೋದಲ್ಲಿ ವಾತ್ಸಲ್ಯ, ಚಿರಾಯು,
ಧನ್ವಂತರಿ, ಕ್ರಿಸ್ಟಲ್, ಇಎಸ್ಐ ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಎಲ್ಲೂ ಬೆಡ್ ಸಿಗದ ಕಾರಣ ಜಿಮ್ಸ್ ಆಸ್ಪತ್ರೆಗೆ ಆಟೋದಲ್ಲೇ ಆಕ್ಸಿಜನ್ ಸಿಲಿಂಡರ್ ಸಮೇತ ಕುಟುಂಬದವರು ಕರೆದುಕೊಂಡು ಬಂದಿದ್ದರು. ಆದರೆ, ಇಲ್ಲೂ ಬೆಡ್ಗಳು ಖಾಲಿ ಎನ್ನುವ ಕಾರಣಕ್ಕೆ ಮೂರು ಗಂಟೆಗಳ ಕಾಲ ಆಸ್ಪತ್ರೆಯ ಮುಂದೆಯೇ ಆಟೋದಲ್ಲಿ ರೋಗಿ ಪರದಾಡುವಂತೆ ಆಗಿತ್ತು.
ಇದನ್ನೂ ಓದಿ :ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ
ಆಟೋದಲ್ಲಿ ಆಕ್ಸಿಜನ್ ಸಿಲಿಂಡರ್ ಮೇಲೆ ಉಸಿರಾಡುತ್ತಿರುವ ರೋಗಿಯ ಸ್ಥಿತಿ ಕರುಣಾಜನಕವಾಗಿತ್ತು. ಮಹಿಳೆ ಕಷ್ಟ ಅನುಭವಿಸುತ್ತಿರುವ ದೃಶ್ಯ ಮನಕಲುಕುವಂತೆ ಇತ್ತು. ಕೊನೆಗೆ ಮಧ್ಯಾಹ್ನ ವೇಳೆಗೆ ಜಿಮ್ಸ್ ಆಸ್ಪತ್ರೆಯವರೇ ಐಸಿಯು ಘಟಕದಲ್ಲಿ ಮತ್ತೊಂದು ಬೆಡ್ ವ್ಯವಸ್ಥೆ ಮಾಡಿ ಒಂದೇ ಯಂತ್ರಕ್ಕೆ ಎರಡು `ಫ್ಲೋ ಮೀಟರ್’ ಅಳವಡಿಸಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್