ಮೋದಿ ಎಷ್ಟು ಸಲ ಬಂದರೂ ಕಾಂಗ್ರೆಸ್ಸೇ ಗೆಲ್ಲೋದು: ಪ್ರಿಯಾಂಕ್ ಖರ್ಗೆ

ಹೆದರುವ ಅಗತ್ಯವಿಲ್ಲ ; ಪ್ರಿಯಾಂಕ್ ಖರ್ಗೆಯವರನ್ನು ಹಾಡಿ ಹೊಗಳಿದ ಸಿದ್ದರಾಮಯ್ಯ

Team Udayavani, Feb 8, 2023, 3:20 PM IST

1-sada-dad

ವಾಡಿ: ಪ್ರಧಾನಿ ನರೇಂದ್ರ ಮೋದಿ ಅವರಾಗಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಲಿ, ಅಥವಾ ಅಮಿತ್ ಶಾ ಆಗಲಿ ಯಾರು ಎಷ್ಟು ಸಲ ಬಂದು ಹೋದರೂ ಕರ್ನಾಟಕದಲ್ಲಿ ಗೆಲ್ಲೋದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಶಾಸಕ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬೃಹತ್ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿ, ಸಾಮಾನ್ಯ ಕಳ್ಳರು ಅಮಾಯಕ ಜನರ ಜೇಬು ಕತ್ತರಿಸುತ್ತಾರೆ. ಆದರೆ ಬಿಜೆಪಿಯ ರಾಜಕಾರಣ ಬಡವರ ಭವಿಷ್ಯ ಕದಿಯುತ್ತಿದೆ. ಯುವಕರ ಕನಸು ಕದಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಮುವಾದಿಗಳ ಮೋಸದಾಟ ಕರ್ನಾಟಕದಲ್ಲಿ ನಡೆಯಲ್ಲ. ಪ್ರಬುದ್ಧ ಮತದಾರರು ಬಿಜೆಪಿಯ ಕಳ್ಳಾಟಕ್ಕೆ ಸುಳ್ಳು ಪ್ರಚಾರಕ್ಕೆ ಮರುಳಾಗಬೇಡಿ. ನನ್ನನ್ನು ಸೋಲಿಸಲು ಆರ್ ಎಸ್ ಎಸ್ ಟೀಂ ಚಿತ್ತಾಪುರಕ್ಕೆ ಓಡಿ ಬರುತ್ತಿದೆ. ನಾನು ಇದಕ್ಕೆ ಹೆದರುವುದಿಲ್ಲ. ಬ್ಯಾಟ್ ಬೀಸಲು ರೆಡಿ ಇದ್ದೇನೆ. ಬೌಲರ್ ಯಾರು ಹೇಳಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.

ಪ್ರಿಯಾಂಕ್ ಖರ್ಗೆಯವರನ್ನು ಹಾಡಿ ಹೊಗಳಿದ ಸಿದ್ದರಾಮಯ್ಯ

ಪ್ರಿಯಾಂಕ್ ಖರ್ಗೆ ಅಂಥಹ ಬುದ್ದಿವಂತ, ಪ್ರಾಮಾಣಿಕ, ಅಭಿವೃದ್ಧಿ ಪರ ಮನಸು, ಜನ ಮೆಚ್ಚುವ ರಾಜಕಾರಣಿ ವಿಧಾನಸಭೆಗೆ ಬರಬೇಕು. ಆಗ ಮಾತ್ರ ರಾಜಕೀಯ ಶುದ್ಧವಾಗಲು ಸಾಧ್ಯವಾಗುತ್ತದೆ. ಪ್ರಿಯಾಂಕ್ ನೇರವಾಗಿ ಮಾತನಾಡುವ ರಾಜಕಾರಣಿ, ಇದ್ದದ್ದನ್ನು ಇದ್ದಂಗೆ ಹೇಳುವ ಧೈರ್ಯಶಾಲಿ ಯುವಕ. ಇಂಥವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ. ಅವರ ವರ್ತನೆ ಬದಲಾಗಬೇಕು ಎಂದು ನಾನು ಹೇಳುವುದಿಲ್ಲ. ನೇರವಾಗಿ ಹೇಳುವ ಕಠೋರ ನುಡಿಗಳು ಒಮ್ಮೊಮ್ಮೆ ತಿರುಗುಬಾಣ ಆಗುತ್ತವೆ. ಇದಕ್ಕೆಲ್ಲ ಹೆದರುವ ಅಗತ್ಯವಿಲ್ಲ, ಆದರೆ ಜನರ ಮನ ಗೆಲ್ಲುವ ಕಾರ್ಯವೂ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕೋಟಿಗಟ್ಟಲೆ ಹಣ ಸುರಿದು ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿರುವ ಅನೈತಿಕ ಸರ್ಕಾರ, ರಾಜ್ಯವನ್ನು ಲೂಟಿ ಹೊಡೆಯುವುದರಲ್ಲಿ ಮುಳುಗಿದೆ. ಇವರಿಂದ ರಾಜ್ಯಕ್ಕೆ ಒಂದು ಹೊಸ ಯೋಜನೆ ಕೊಡಲಿಲ್ಲ. ವಿಧಾನಸೌಧದ ಗೋಡೆಗಳಿಗೆ ಕಿವಿ ಕೊಟ್ಟು ಕೇಳಿದರೆ ಲಂಚ ಲಂಚ ಎನ್ನುತ್ತಿವೆ. ಶೇ.40 ಕಮಿಷನ್ ಕೇಳುವ ಬಿಜೆಪಿ ಸರ್ಕಾರ ಗುತ್ತಿಗೆದಾರರ ಸಾವಿಗೆ ಕಾರಣವಾಗಿದೆ. ಸರ್ಕಾರಿ ಗುತ್ತಿಗೆದಾರರೇ ಪ್ರಧಾನಿಗೆ ನೇರವಾಗಿ ದೂರು ನೀಡಿದ್ದಾರೆ. ನಾ ಖಾವೂಂಗಾ ನಾ ಖಾನೆ ದೂಂಗಾ ಎನ್ನುವವರಿಗೆ ನಾಚಿಕೆಯಾಗಬೇಕು. ಲಂಚದ ಆರೋಪಕ್ಕೆ ದಾಖಲೆ ಕೇಳುವ ಸಿಎಂ ಬೊಮ್ಮಾಯಿಗೂ ನೈತಿಕತೆಯಿಲ್ಲ ಎಂದು ಹರಿಹಾಯ್ದರು.

ಮಾಜಿ ಸಚಿವರಾದ ರೇವುನಾಯಕ ಬೆಳಮಗಿ, ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಪ್ರಿಯಾಂಕ್ ಖರ್ಗೆ, ಎಂ.ವೈ.ಪಾಟೀಲ, ಜಮೀರ್ ಅಹ್ಮದ್, ಮುಖಂಡರಾದ ಈಶ್ವರ ಖಂಡ್ರೆ, ತಿಪ್ಪಣ್ಣಪ್ಪ ಕಮಕನೂರ, ಸುಭಾಷ್ ರಾಠೋಡ, ಭೀಮಣ್ಣ ಸಾಲಿ, ಮಹೆಮೂದ್ ಸಾಹೇಬ, ನಾಗರೆಡ್ಡಿಗೌಡ ಪಾಟೀಲ ಕರದಾಳ ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು