ಆತಂಕ ಪಡಬೇಡಿ; ಉತ್ತರಪ್ರದೇಶದ ಕಾನ್ಪುರ್ ನಲ್ಲಿ ನೂರಕ್ಕೂ ಅಧಿಕ ಝೀಕಾ ವೈರಸ್ ಪತ್ತೆ
ಝೀಕಾ ವೈರಸ್ ನಿಂದ ಈವರೆಗೆ 17 ಮಂದಿ ಗುಣಮುಖರಾಗಿದ್ದಾರೆ
Team Udayavani, Nov 10, 2021, 4:46 PM IST
ನವದೆಹಲಿ: ಉತ್ತರಪ್ರದೇಶದ ಕಾನ್ಪುರದಲ್ಲಿ ಝೀಕಾ ವೈರಸ್ ಪ್ರಕರಣ ಹೆಚ್ಚಳವಾಗುತ್ತಿದ್ದು, ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ(ನವೆಂಬರ್ 10) ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರೀತಿಗೆ ವಿರೋಧ;ಪ್ರಿಯತಮೆ ಮನೆಯಲ್ಲೇ ಆಕೆಯ ಹತ್ಯೆಗೆ ಯತ್ನ, ಪ್ರಿಯತಮನೂ ಆಸ್ಪತ್ರೆಗೆ ದಾಖಲು
ಕಳೆದ ಅಕ್ಟೋಬರ್ ನಲ್ಲಿ ಮೊದಲ ಪ್ರಕರಣ ಪತ್ತೆಯಾದ ನಂತರ ಇದೀಗ ಕಾನ್ಪುರದಲ್ಲಿ ನೂರಕ್ಕೂ ಅಧಿಕ ಝೀಕಾ ವೈರಸ್ ಪ್ರಕರಣಗಳು ವರದಿಯಾಗಿವೆ. ಐಎಎನ್ ಎಸ್ ವರದಿ ಪ್ರಕಾರ, ಬುಧವಾರ 16ಕ್ಕೂ ಅಧಿಕ ಝೀಕಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 106ಕ್ಕೆ ತಲುಪಿದೆ.
ಹರಿಜಿಂದರ್ ನಗರ್, ಪೋಖ್ರಾಪುರ್, ತಿವಾರಿಪುರ್ ಬಾಗಿಯಾ ಮತ್ತು ಖ್ವಾಝಿ ಖೇರ್ ಪ್ರದೇಶಗಳಲ್ಲಿನ ಸುಮಾರು 16 ಮಂದಿಯಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ನೇಪಾಲ್ ಸಿಂಗ್ ಮಾಹಿತಿ ನಿಡಿದ್ದಾರೆ.
ಝೀಕಾ ವೈರಸ್ ನಿಂದ ಈವರೆಗೆ 17 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಒಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು