ಯಾವ ಮಠಾಧೀಶರನ್ನೂ ಬೆದರಿಸಿಲ್ಲ,ಬಿಜೆಪಿಯಲ್ಲಿ ಕಾಂಗ್ರೆಸ್ ಸಂಸ್ಕೃತಿ ಇಲ್ಲ: ಯತ್ನಾಳ್

ಗೂಂಡಾಗಳ ಬಾಯಲ್ಲಿ ಅದೇ ರೀತಿಯ ಮಾತುಗಳು ಬರುತ್ತವೆ... ಡಿಕೆಶಿಗೆ ತಿರುಗೇಟು

Team Udayavani, Mar 26, 2023, 3:26 PM IST

yatnal

ವಿಜಯಪುರ: ಒಕ್ಕಲಿಗ ಸಮುದಾಯ ಹಾಗೂ ವೀರೇಶ್ವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಘೋಷಣೆ ವಿಚಾರದಲ್ಲಿ ಸಮುದಾಯದ ಶ್ರೀಗಳಿಗೆ ಒತ್ತಡ-ಬೆದರಿಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತ. ಗೂಂಡಾಗಳ ಬಾಯಲ್ಲಿ ಅದೇ ರೀತಿಯ ಮಾತುಗಳು ಬರುತ್ತವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಿರ್ಮಲಾನಂದ ಸ್ವಾಮೀಜಿಗೆ ಹಾಗೂ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿಗೆ ಮೀಸಲಾತಿ ಒಪ್ಪಿಕೊಳ್ಳಿ ಎಂದು ಬಿಜೆಪಿ ನಾಯಕರು ಕರೆ ಮಾಡಿ ಒತ್ತಡ ಹಾಕಿದ್ದಾರೆ ಎಂಬ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತವಾಗಿದೆ ಎಂದರು.

ಬಿಜೆಪಿ ಸರ್ಕಾರದ ಐತಿಹಾಸಿಕ ನಿರ್ಧಾರದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಅವರಿಗೆ ನಮ್ಮನ್ನು ಟೀಕಿಸಲು ಯಾವುದೇ ವಿಷಯಗಳಿಲ್ಲದಂತಾಗಿದೆ. ಹೀಗಾಗಿ ಇದೀಗ ಸ್ವಾಮಿಗಳನ್ನು ಇದರಲ್ಲಿ ಎಳೆದು ತರುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಇದ್ದಂತೆ ಬಿಜೆಪಿ ಪಕ್ಷದಲ್ಲಿ ಯಾರೂ ಗುಂಡಾ ನಾಯಕರಿಲ್ಲ. ಕಾಂಗ್ರೆಸ್ ಮುಖಂಡರಂತೆ ಉಪಾಧ್ಯಾಪಿತನ ಮಾಡುವ ಸಂಸ್ಕೃತಿ ಬಿಜೆಪಿ ಪಕ್ಷದಲ್ಲಿ ಇಲ್ಲ. ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಮೀಸಲಾತಿ ಹೆಚ್ಚಿಸಿದ್ದನ್ನು ಕಾಂಗ್ರೆಸ್ ನಾಯಕರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ವ್ಯರ್ಥ ಟೀಕೆಗಳನ್ನು ಮಾಡುತ್ತಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಎಲ್ಲ ಸಮುದಾಯಗಳಿಗೆ ಮೀಸಲಾತಿ ನೀಡಿದ್ದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಒಳ ಮೀಸಲಾತಿ ನೀಡುವ ಮೂಲಕ ಎಲ್ಲಾ ಸಮುದಾಯದವರಿಗೂ ಮೀಸಲಾತಿ ನೀಡಿರುವುದು ದೊಡ್ಡ ಸಾಧನೆ ಎಂದರು.

ಎಲ್ಲಾ ಸಮುದಾಯಗಳ ಮೀಸಲಾತಿ ನೀಡುವ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮೀಸಲಾತಿ ಕಲ್ಪಿಸಲು ಸೂಕ್ತ ನಿರ್ದೇಶನ ನೀಡಿದ್ದರು. ಅದರಂತೆ ಪ್ರಧಾನಿ ಮೋದಿ ಹಾಗೂ ಸಚಿವ ಅಮಿತ್ ಶಾ ಅವರ ನಿರ್ದೇಶನದಂತೆ ಎಲ್ಲ ಸಮುದಾಯದವರಿಗೆ ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಕಲ್ಪಿಸಿದ್ದೇವೆ ಎಂದರು.

2-ಎ ಪ್ರವರ್ಗದಲ್ಲಿ 102 ಜಾತಿಗಳಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ ನೀಡಲಾಗಿದೆ. 3-ಬಿ ಪ್ರವರ್ಗದಲ್ಲಿದ್ದ 2-ಡಿ ಪ್ರವರ್ಗ ರೂಪಿಸಿ ಶೇ.7 ಮೀಸಲಾತಿ ಕೊಡಲಾಗಿದೆ. ಇದರಿಂದ ಶೇ.15 ಹಾಗೂ 7 ಸೇರಿ ಹಿಂದುಳಿದ ಸಮುದಾಯಗಳಿಗೆ ಶೇ.22 ರಷ್ಟು ಮೀಸಲಾತಿ ಸಿಕ್ಕಿದೆ ಎಂದರು.

ಪರಿಶಿಷ್ಟ ಜಾತಿ-ಪಂಗಡದವರಿಗೂ ಮೀಸಲಾತಿ ಹೆಚ್ಚಿಸಿದ್ದು, ಬಹು ವರ್ಷಗಳ ಅವರ ಬೇಡಿಕೆಯಂತೆ ಒಳ ಮೀಸಲಾತಿಯ ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರು.

ಟಾಪ್ ನ್ಯೂಸ್

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌