ಆರೋಗ್ಯ ಕೇಂದ್ರದಲ್ಲಿ ಕೈಕೊಟ್ಟ ವಿದ್ಯುತ್! ಮೊಬೈಲ್ ಬೆಳಕಿನಲ್ಲೇ ನಡೆಯಿತು ಹೆರಿಗೆ


Team Udayavani, Nov 11, 2020, 7:14 PM IST

ಅರೋಗ್ಯ ಕೇಂದ್ರದಲ್ಲಿ ಕೈಕೊಟ್ಟ ವಿದ್ಯುತ್! ಮೊಬೈಲ್ ಬೆಳಕಿನಲ್ಲೇ ನಡೆಯಿತು ಹೆರಿಗೆ

ಕಲಬುರಗಿ: ಹೆರಿಗೆ ಮಾಡಿಸುವ ಸಮಯದಲ್ಲಿ ವಿದ್ಯುತ್ ಕೈಕೊಟ್ಟ ಪರಿಣಾಮ ಮೊಬೈಲ್ ಟಾರ್ಚ್ ಲೈಟ್ ಬೆಳಕಿನಲ್ಲೇ ಹೆರಿಗೆ ಮಾಡಿಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಅದೃಷ್ಟವಶಾತ್ ಸುಲಭ ಹೆರಿಗೆ ಆಗಿದ್ದರಿಂದ , ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಅದೇ ಗ್ರಾಮದ ಸಿದ್ದಮ್ಮ ಹನುಮಂತ ಅವರಿಗೆ ಮಂಗಳವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆದ್ದರಿಂದ ಕುಟುಂಬಸ್ಥರು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 10.30ರ ಸುಮಾರಿಗೆ ಕರೆದುಕೊಂಡು ಬಂದಿದ್ದರು. ಸಿದ್ದಮ್ಮ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದರಿಂದ ರಾತ್ರಿ ಪಾಳಿಯ ನರ್ಸ್ ಹೆರಿಗೆ ಮಾಡಿಸಲು ಮುಂದಾಗಿದ್ದರು. ಆದರೆ, ಸರಿಯಾಗಿ 11 ಗಂಟೆಗೆ ವಿದ್ಯುತ್ ಕಡಿತವಾಗಿದೆ.

ಕೇಂದ್ರದಲ್ಲಿ ಸೋಲಾರ್ ಬ್ಯಾಟರಿ ವ್ಯವಸ್ಥೆ ಇದ್ದರೂ, ಅದು ಕೈಕೊಟ್ಟಿದೆ. ಇದರಿಂದ ವಿದ್ಯುತ್ ಗಾಗಿ ಸ್ವಲ್ಪ ಹೊತ್ತು ಕಾದಿದ್ದಾರೆ. ಅಲ್ಲದೇ, ವಿದ್ಯುತ್ ಬಗ್ಗೆ ವಿಚಾರಿಸಲು ಜೆಸ್ಕಾಂ ನವರಿಗೆ ದೂರವಾಣಿ ಕರೆ ಮಾಡಿದರೂ ಸ್ವೀಕರಿಸಿಲ್ಲ.

ಇದನ್ನೂ ಓದಿ:ಮಹಾದೇವ ಭೈರಗೊಂಡ ಶೂಟ್ ಔಟ್ ಪ್ರಕರಣ : ಮತ್ತೆ ಮೂವರ ಬಂಧನ, ಬಂಧಿತರ‌ ಸಂಖ್ಯೆ16ಕ್ಕೆ ಏರಿಕೆ

ಹೀಗಾಗಿ ಕುಟುಂಬದವರು ನಾಲ್ವೈದು ಮೊಬೈಲ್‍ಗಳ ಟಾರ್ಚ್ ಹಾಗೂ ಮತ್ತೊಂದು ಬ್ಯಾಟರಿ ಟಾರ್ಚ್ ಸಿದ್ಧ ಮಾಡಿದ್ದಾರೆ. ಅದೇ ಟಾರ್ಚ್ ಬೆಳಕಿನಲ್ಲಿ ಸಿದ್ದಮ್ಮ ಅವರಿಗೆ ಸ್ಟಾಫ್ ನರ್ಸ್ ಹೆರಿಗೆ ಮಾಡಿಸಿದ್ದಾರೆ. ಸಿದ್ದಮ್ಮ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಮಾಡಿಸುವ ಹೊತ್ತಿಗೆ ನಸುಕಿನ ಜಾವ 4 ಗಂಟೆ ಆಗಿತ್ತು, ಆದರೂ, ವಿದ್ಯುತ್ ಮಾತ್ರ ಬಂದಿಲ್ಲ.

ರಾತ್ರಿ 11 ಗಂಟೆ ಸುಮಾರಿಗೆ ಕಡಿತವಾದ ವಿದ್ಯುತ್ ಬಾರದೆ ಇರುವುದರಿಂದ ಹಾಗೂ ತೀವ್ರ ನೋವು ಇರುವುದರಿಂದ ಅನಿವಾರ್ಯವಾಗಿ ಹೆರಿಗೆ ಮಾಡಿಸಲೇಬೇಕಿತ್ತು. ಈ ಹಿಂದೆ ಇಂತಹ ಪ್ರಸಂಗಗಳು ನಡೆದಿರಲಿಲ್ಲ ಎಂದು ನರ್ಸ್ ತಿಳಿಸಿದ್ದಾರೆ.

ಹೆರಿಗೆ ಸಮಯದಲ್ಲಿ ಎದುರಾದ ಅವ್ಯವಸ್ಥೆ ಹಾಗೂ ಪರ್ಯಾಯ ವಿದ್ಯುತ್ ವ್ಯವಸ್ಥೆ ಇರದ ಬಗ್ಗೆ ಬಾಣಂತಿಯ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ರಾತ್ರಿ ನರ್ಸ್ ಹೊರತು ಪಡಿಸಿ ವೈದ್ಯರು ಇರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಶೋಕಸ್ ನೋಟಿಸ್
ಕೊಲ್ಲೂರು ಗ್ರಾಮದಲ್ಲಿ ನಡೆದ ಘಟನೆ ಸಂಬಂಧ ವಿದ್ಯುತ್ ವ್ಯವಸ್ಥೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸದ ಕುರಿತು ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗೆ ಕಾರಣ ಕೇಳಿ ಶೋಕಸ್ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ತಡೆಯಲು ಎಲ್ಲ ಆರೋಗ್ಯ ಕೇಂದ್ರಗಳಿಗೂ ಜ್ಞಾಪನಾ ಪತ್ರ ಬರೆಯಲಾಗಿದೆ. ಕಡ್ಡಾಯವಾಗಿ ಪರ್ಯಾಯ ವಿದ್ಯುತ್ ವ್ಯವಸ್ಥೆ ಮಾಡಿಕೊಳ್ಳುವಂತೆ ಎಚ್ಚರ ವಹಿಸಲಾಗಿದೆ. -ಡಾ.ರಾಜಶೇಖರ್ ಮಾಲಿ, ಡಿಎಚ್‍ಓ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.