ಯುದ್ಧ ಬೇಡ…ನೇರ ಪ್ರಸಾರದಲ್ಲಿ ಸಾಮೂಹಿಕ ರಾಜೀನಾಮೆ ನೀಡಿದ ರಷ್ಯಾ ಟಿವಿ ಚಾನೆಲ್ ಸಿಬಂದಿಗಳು!
ಇದರ ಪರಿಣಾಮ ರಷ್ಯಾದ ಅಧಿಕಾರಿಗಳು ಸುದ್ದಿ ಪ್ರಸಾರವನ್ನು ಸ್ಥಗಿತಗೊಳಿಸಿರುವುದಾಗಿ ವರದಿ ತಿಳಿಸಿದೆ.
Team Udayavani, Mar 5, 2022, 1:50 PM IST
ಮಾಸ್ಕೋ: ಉಕ್ರೇನ್ ನಗರಗಳ ಮೇಲೆ ರಷ್ಯಾ ಕಳೆದ ಕೆಲವು ದಿನಗಳಿಂದ ನಡೆಸುತ್ತಿರುವ ಯುದ್ಧವನ್ನು ವಿರೋಧಿಸಿ ರಷ್ಯಾ ಟಿವಿ ಚಾನೆಲ್ ಸಿಬಂದಿಗಳು ನೇರ ಸುದ್ದಿಪ್ರಸಾರದ ವೇಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಗಡಿಯಲ್ಲಿ ಶಂಕಿತ ಪಾಕಿಸ್ಥಾನಿ ಡ್ರೋನ್ ಮೇಲೆ ಗಡಿ ಭದ್ರತಾ ಪಡೆಯಿಂದ ಗುಂಡು
ರಷ್ಯಾದ ಟಿವಿ ರೇನ್ ಚಾನೆಲ್ ನ ಸಿಬಂದಿಗಳು ನೇರಪ್ರಸಾರದಲ್ಲಿಯೇ ಸಾಮೂಹಿಕ ರಾಜೀನಾಮೆ ನೀಡಿರುವ ನಿರ್ಧಾರ ತೆಗೆದುಕೊಂಡಿದ್ದು, ಇದರ ಪರಿಣಾಮ ರಷ್ಯಾದ ಅಧಿಕಾರಿಗಳು ಸುದ್ದಿ ಪ್ರಸಾರವನ್ನು ಸ್ಥಗಿತಗೊಳಿಸಿರುವುದಾಗಿ ವರದಿ ತಿಳಿಸಿದೆ.
ಚಾನೆಲ್ ನಲ್ಲಿ ಕೊನೆಯ ಬುಲೆಟಿನ್ ಪ್ರಸಾರ ಮಾಡಿ ಸ್ಟುಡಿಯೋದಿಂದ ಸಿಬಂದಿಗಳು ಹೊರ ಹೋಗುತ್ತಿದ್ದ ಸಂದರ್ಭದಲ್ಲಿ..ನಮಗೆ ಯುದ್ಧ ಬೇಡ ಎಂದು ಚಾನೆಲ್ ನ ಸಂಸ್ಥಾಪಕರಲ್ಲಿ ಒಬ್ಬರಾದ ನಟಾಲಿಯಾ ಸಿಂಡೆಯೇವಾ ತಿಳಿಸಿದ್ದಾರೆ.
ಈ ಘಟನೆ ನಂತರ ಅನಿರ್ದಿಷ್ಟಾವಧಿವರೆಗೆ ಸುದ್ದಿ ಪ್ರಸಾರ ಸ್ಥಗಿತಗೊಳಿಸಲಾಗಿದೆ ಎಂದು ರಷ್ಯಾದ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದರು. ನೇರಪ್ರಸಾರದಲ್ಲಿ ಟಿವಿ ಚಾನೆಲ್ ಸಿಬಂದಿಗಳು ರಾಜೀನಾಮೆ ನೀಡಿರುವ ವಿಡಿಯೋವನ್ನು ಲೇಖಕ ಡೇನಿಯಲ್ ಅಬ್ರಾಹಮ್ಸ್ ತಮ್ಮ ಲಿಂಕ್ಡ್ ಇನ್ ನಲ್ಲಿ ಶೇರ್ ಮಾಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್