9 ಸಾವಿರ ಅಲ್ಲ,18 ವಿದ್ಯಾರ್ಥಿಗಳು ಮಾತ್ರ; ಅನ್ಯಾಯವಾಗಿದೆ ಎನ್ನುವುದು ಆಧಾರರಹಿತ: ಕೆಇಎ ಸ್ಪಷ್ಟನೆ

ವೈದ್ಯಕೀಯ ಸೀಟು ರದ್ದುಪಡಿಸಿ ಎಂಜಿನಿಯರಿಂಗ್ ಸೀಟು ಮರು ಬಯಸಿದ್ದಾರೆ

Team Udayavani, Dec 1, 2022, 9:52 PM IST

1-adasdasd

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ರಾಜ್ಯದಲ್ಲಿ 8 ಸಾವಿರ ವೈದ್ಯಕೀಯ ಸೀಟುಗಳು ಹಂಚಿಕೆಗೆ ಲಭ್ಯವಿದ್ದು, ಈ ಪೈಕಿ ಈಗಾಗಲೇ 6 ಸಾವಿರ ಸೀಟುಗಳ ಹಂಚಿಕೆ ಮುಗಿದಿದೆ. ಈ ಅಭ್ಯರ್ಥಿಗಳೆಲ್ಲ ಈಗಾಗಲೇ ಪ್ರವೇಶವನ್ನೂ ಪಡೆದುಕೊಂಡಿದ್ದಾರೆ. ಆದ್ದರಿಂದ 9 ಸಾವಿರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎನ್ನುವುದೆಲ್ಲ ಆಧಾರರಹಿತವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಕೇವಲ 106 ಅಭ್ಯರ್ಥಿಗಳು ಮಾತ್ರ ವೈದ್ಯಕೀಯ ಸೀಟನ್ನು ರದ್ದುಗೊಳಿಸಿದ್ದು, ಇವರಲ್ಲಿ 18 ಮಂದಿಯು ತಾವು ಮೊದಲ ಸುತ್ತಿನಲ್ಲಿ ಪಡೆದುಕೊಂಡಿದ್ದ ಎಂಜಿನಿಯರಿಂಗ್‌ ಸೀಟುಗಳನ್ನು ಮರಳಿ ಬಯಸಿದ್ದಾರೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ, ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಅದರಲ್ಲಿರುವ ‘ಆಯ್ಕೆ-2’ನ್ನು ಆರಿಸಿಕೊಂಡು, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ವಿಭಾಗಗಳೆರಡರಲ್ಲೂ ಪಾಲ್ಗೊಳ್ಳಬಹುದು. ಆದರೆ, ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಯಾವುದೇ ಒಂದು ವಿಭಾಗದ ಸೀಟನ್ನು ಆಖೈರುಗೊಳಿಸಬೇಕಾಗುತ್ತದೆ. ಇಂತಹ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟಿನ ಆದೇಶದ ಪ್ರಕಾರ ಅವಕಾಶ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ಇದುವರೆಗೆ ವಿದ್ಯಾರ್ಥಿಗಳು ನೀಡಿರುವ ಆಯ್ಕೆ ಪಟ್ಟಿಯ ಅನುಸಾರವೇ ವೈದ್ಯಕೀಯ ಸೀಟುಗಳ ಹಂಚಿಕೆ ಪಾರದರ್ಶಕವಾಗಿ ನಡೆದಿದೆ. ಆದರೆ ಕೆಲವರು ಶುಲ್ಕ ದುಬಾರಿ ಎಂಬ ಕಾರಣಕ್ಕೆ ಈ ಸೀಟುಗಳನ್ನು ಹಿಂದಿರುಗಿಸಿದ್ದಾರೆ. ಇಷ್ಟರ ನಡುವೆಯೂ ಮೆರಿಟ್‌ ಮತ್ತು ಮೀಸಲಾತಿ ಅನ್ವಯ ಆಗಿರುವ ಸೀಟು ಹಂಚಿಕೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪಾತ್ರವೇನೂ ಇಲ್ಲ. ಜತೆಗೆ, ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಸಿಕ್ಕಿದರೆ ಅಂತಹ ಅಭ್ಯರ್ಥಿಗಳಿಗೆ ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿದ್ದ ಎಂಜಿನಿಯರಿಂಗ್ ಸೀಟು ತನ್ನಿಂತಾನೇ ರದ್ದಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ಎಂಸಿಸಿ ವೇಳಾಪಟ್ಟಿಗೆ ತಕ್ಕಂತೆ ವೈದ್ಯಕೀಯ ಸೀಟುಗಳ ಹಂಚಿಕೆ ಮತ್ತು ಎಐಸಿಟಿಇ ವೇಳಾಪಟ್ಟಿಗೆ ತಕ್ಕಂತೆ ಎಂಜಿನಿಯರಿಂಗ್ ಸೀಟುಗಳ ಹಂಚಿಕೆ ಪ್ರಕ್ರಿಯೆ ನಡೆಯುತ್ತದೆ. ಇದನ್ನು ಬದಲಿಸುವ ಅಧಿಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಇಲ್ಲ. ಆದರೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿ, ಈ ಬಾರಿ ನ.30ರವರೆಗೂ ಕಾಲಾವಕಾಶ ಪಡೆದುಕೊಳ್ಳಲಾಗಿತ್ತು ಎಂದು ರಮ್ಯ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.