ರಾಹುಲ್ ಶಿಕ್ಷಕರನ್ನು ಮೆಚ್ಚಿಸುವ ವಿದ್ಯಾರ್ಥಿ ಇದ್ದಂತೆ: ಬರಾಕ್ ಒಬಾಮಾ ಪುಸ್ತಕದಲ್ಲೇನಿದೆ?
ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಜಾಗತಿಕ ನಾಯಕರ ಕುರಿತು ಅಭಿಪ್ರಾಯ
Team Udayavani, Nov 13, 2020, 1:46 PM IST
ನವದೆಹಲಿ:ಇನ್ನಷ್ಟೇ ಬಿಡುಗಡೆಗೊಳ್ಳಬೇಕಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ತಮ್ಮ ನೂತನ ಕೃತಿಯಲ್ಲಿ ಭಾರತದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಜಾಗತಿಕ ನಾಯಕರ ಕುರಿತು ಅಭಿಪ್ರಾಯವ್ಯಕ್ತಪಡಿಸಿರುವುದು ಇಲ್ಲಿ ದಾಖಲಾಗಿದೆ.
ಬರಾಕ್ ಒಬಾಮಾ ಅವರ “ಎ ಪ್ರಾಮಿಸ್ಡ್ ಲ್ಯಾಂಡ್” ಕೃತಿಯಲ್ಲಿ “ಜನರು ಸುಂದರ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಮಹಿಳೆಯ ಸೌಂದರ್ಯದ ಬಗ್ಗೆ ಅಲ್ಲ ಎಂದು ಉಲ್ಲೇಖಿಸಿದ್ದಾರೆ.
ಒಬಾಮಾ ಅವರ ಪುಸ್ತಕದ ಬಗ್ಗೆ ವಿಮರ್ಶಾ ಲೇಖನ ಪ್ರಕಟಿಸಿರುವ ದ ನ್ಯೂಯಾರ್ಕ್ ಟೈಮ್ಸ್, ನಾವು ತುಂಬಾ ಸುಂದರ ವ್ಯಕ್ತಿಗಳಾದ ಚಾರ್ಲಿ ಕ್ರಿಸ್ಟ್ ಮತ್ತು ರಾಹಮ್ ಇಮ್ಯಾನುಯೆಲ್ ಬಗ್ಗೆ ಮಾತನಾಡುತ್ತೇವೆ ವಿನಃ, ಮಹಿಳೆಯ ಸೌಂದರ್ಯದ ಬಗ್ಗೆ ಅಲ್ಲ, ಅದರಲ್ಲಿಯೂ ಒಂದೆರಡು ಉದಾಹರಣೆ (ಸೋನಿಯಾ ಗಾಂಧಿ) ಹೊರತುಪಡಿಸಿ ಎಂದು ತಿಳಿಸಿದೆ.
ರಾಹುಲ್ ಗಾಂಧಿ ಕುರಿತು ಒಬಾಮಾ ಅವರ ದೃಷ್ಟಿಕೋನ ಕುರಿತು ಪುಸ್ತಕದಲ್ಲಿ ಉಲ್ಲೇಖಿಸಿರುವಂತೆ, ರಾಹುಲ್ ಗಾಂಧಿ ಅಂಜಿಕೆ, ಅಪಕ್ವತೆ ಗುಣ ಹೊಂದಿದ ವ್ಯಕ್ತಿತ್ವ, ರಾಹುಲ್ ಗಾಂಧಿ ಗುಣ ಶಿಕ್ಷಣನನ್ನು ಮೆಚ್ಚಿಸಲು ಉತ್ಸುಕನಾಗಿರುವ ವಿದ್ಯಾರ್ಥಿಯಂತೆ, ಆದರೆ ವಿಷಯವನ್ನು ಆಳವಾಗಿ ಅಭ್ಯಸಿಸುವ ಮನೋಭಾವ ಮತ್ತು ಉತ್ಸಾಹ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.
ನಿರ್ಭಯ ಸಮಗ್ರತೆಗೆ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಅಮೆರಿಕದ ಮಾಜಿ ರಕ್ಷಣಾ ಸಚಿವ ಬೋಬ್ ಗೇಟ್ಸ್ ನಂತಹ ನಾಯಕರಷ್ಟೇ ಶ್ರಮಿಸಿದ್ದರು ಎಂದು ಒಬಾಮಾ ತಮ್ಮ ಪುಸ್ತಕದಲ್ಲಿ ತಿಳಿಸಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ಲೇಖನ ಉಲ್ಲೇಖಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು