ಮೋಹನ್ ದಾಸ್ ಪೈ ಅವರು ಆತಂಕ ಪಡುವಂತದ್ದು ಏನೂ ಆಗಿಲ್ಲ: ಸಿಎಂ
ಬೆಂಗಳೂರು ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿದೆ
Team Udayavani, Apr 8, 2022, 4:44 PM IST
ಬೆಂಗಳೂರು :ಉದ್ಯಮಿ ಮೋಹನ್ ದಾಸ್ ಪೈ ಅವರು ಆತಂಕ ಪಡುವಂತದ್ದು ಬೆಂಗಳೂರಿನಲ್ಲಿ ಏನೂ ಆಗಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
‘ಬೆಂಗಳೂರು ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿದೆ’ ಎಂದು ಮೋಹನ್ ದಾಸ್ ಪೈ ಅವರು ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ, ”ಬೆಂಗಳೂರಿನ ರಸ್ತೆಗಳು ಎಲ್ಲವೂ ಅಭಿವೃದ್ಧಿಯಾಗುತ್ತಿವೆ. ಮಳೆಗಾಲದಿಂದ ಸ್ವಲ್ಪ ತೊಂದರೆ ಆಗಿತ್ತು. ಬರುವಂತಹ ದಿನಗಳಲ್ಲಿ ಎಲ್ಲ ರಸ್ತೆಗಳು ಅಭಿವೃದ್ಧಿ ಹೊಂದಲಿವೆ” ಎಂದು ಹೇಳಿದರು.
”ಮೋಹನ್ ದಾಸ್ ಪೈ ಆತಂಕ ಪಡುವಂತದ್ದು ಇಲ್ಲಿ ಏನೂ ಆಗಿಲ್ಲ. ಅವರ ಜೊತೆಗೆ ನಾನು ವೈಯಕ್ತಿಕವಾಗಿ ಮಾತನಾಡುತ್ತೇನೆ. ನಗರೋತ್ಥಾನ, ಬಿಬಿಎಂಪಿಗೆ ಹಣ ಬಿಡುಗಡೆ ಮಾಡಿದ್ದೇನೆ.ಮುಂದಿನ ದಿನಗಳಲ್ಲಿ ರಸ್ತೆಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಯಾಗಲಿವೆ” ಎಂದು ಹೇಳಿದರು.
”69 ಲಕ್ಷ ಕೋಟಿ ತೆರಿಗೆ ಕಟ್ಟುತ್ತಿರುವ ಬೆಂಗಳೂರು ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿದೆ” ಎಂದು ಹೇಳಿಕೆ ನೀಡಿದ್ದ ಮಾಧ್ಯಮ ಸಂದರ್ಶನದ ವಿಡಿಯೋವನ್ನು ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ