ನ.7ಕ್ಕೆ ಹಾಜರಾಗುವಂತೆ ಡಿ.ಕೆ. ಶಿವಕುಮಾರ್ಗೆ ಮತ್ತೆ ನೋಟಿಸ್
Team Udayavani, Nov 4, 2022, 10:21 PM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅದ್ದೂರಿ ಸ್ವಾಗತಕ್ಕೆ ತಯಾರಿ ನಡೆಸುತ್ತಿರುವಾಗಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ನ.7ರಂದು ತನ್ನ ಮುಂದೆ ಹಾಜರಾಗುವಂತೆ ಸೂಚನೆ ನೀಡಿದೆ.
ದಿಲ್ಲಿಯಲ್ಲಿರುವ ತನ್ನ ಕಚೇರಿಗೆ ಬಂದು ಹಾಜರಾಗಿ ಎಂದು ಹೇಳಿದೆ. ಸದ್ಯ ಡಿ.ಕೆ. ಶಿವಕುಮಾರ್ ಅವರು ಮುಂದಿನ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳ ಅಂತಿಮಗೊಳಿಸುವ ಸಲುವಾಗಿ ಸರಣಿ ಸಭೆ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಇ.ಡಿ.ನೋಟಿಸ್ ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಮಧ್ಯೆ, ಡಿಕೆಶಿ ಸಹೋದರ ಡಿ.ಕೆ. ಸುರೇಶ್ ಅವರಿಗೂ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನೂ ಖಚಿತವಾಗಿಲ್ಲ.
ಎರಡು ದಿನಗಳ ಹಿಂದಷ್ಟೇ ಇ.ಡಿ.ನೋಟಿಸ್ ಬಗ್ಗೆ ಮಾತನಾಡಿದ್ದ ಡಿಕೆಶಿ, ಚುನಾವಣೆ ಮುನ್ನ ನನ್ನ ಬಂಧನಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಹೇಳಿದ್ದರು.