ಸರ್ಕಾರಿ ನೌಕರ 2ನೇ ವಿವಾಹವಾಗಲು ಅನುಮತಿ ಕಡ್ಡಾಯ: ಬಿಹಾರ ಸರ್ಕಾರದ ಅಧಿಸೂಚನೆಯಲ್ಲೇನಿದೆ?
ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ತಿಳಿಸಬೇಕು
Team Udayavani, Jul 16, 2022, 11:44 AM IST
ಪಾಟ್ನಾ: ಎರಡನೇ ವಿವಾಹವಾಗಲು ಬಯಸುವ ಸರ್ಕಾರಿ ನೌಕರರು ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದ ನಂತರವೇ ವಿವಾಹ ಪ್ರಕ್ರಿಯೆ ಮುಂದುವರಿಸಬೇಕು ಎಂದು ಬಿಹಾರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಂಚಿನ ಮೂರ್ತಿಗೆ ಜೀವ ತುಂಬವ ಹನಗಂಡಿಯ ಲಾಳಕೆ ಕುಟುಂಬ
ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆ ಪ್ರಕಾರ, ಎಲ್ಲಾ ಸರ್ಕಾರಿ ನೌಕರರು ತಮ್ಮ ವೈವಾಹಿಕ ವಿವರವನ್ನು ನೀಡಬೇಕು ಮತ್ತು ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದ ನಂತರವೇ ಎರಡನೇ ವಿವಾಹವಾಗಲು ಅರ್ಹರಾಗಲಿದ್ದಾರೆ ಎಂದು ವಿವರಿಸಿದೆ.
ಬಿಹಾರ ಸರ್ಕಾರದ ಅಧಿಸೂಚನೆ ಪ್ರಕಾರ, ಯಾವುದೇ ಒಬ್ಬ ಸರ್ಕಾರಿ ನೌಕರ ಎರಡನೇ ವಿವಾಹವಾಗಲು ಸಿದ್ಧತೆ ನಡೆಸಿದ್ದರೆ, ಅವರು ತಮ್ಮ ಮೊದಲ ಪತ್ನಿಗೆ ಕಾನೂನು ಪ್ರಕಾರ ವಿಚ್ಛೇದನ ಪಡೆದಿರಬೇಕು. ನಂತರ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ತಿಳಿಸಬೇಕು ಎಂದು ಹೇಳಿದೆ.
ಒಂದು ವೇಳೆ ಸರ್ಕಾರಿ ನೌಕರನ ಪತ್ನಿ ಅಥವಾ ಪತಿ ಎರಡನೇ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿದರೆ, ಪತಿ ಅಥವಾ ಪತ್ನಿಗೆ ಸರ್ಕಾರಿ ಸೌಲಭ್ಯ ನಿರಾಕರಿಸಲಾಗುತ್ತದೆ. ಒಂದು ವೇಳೆ ಸರ್ಕಾರಿ ನೌಕರ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಎರಡನೇ ವಿವಾಹವಾಗಿ, ಸೇವಾವಧಿಯಲ್ಲೇ ಮೃತಪಟ್ಟರೆ ನೌಕರನಿಗೆ ಅಥವಾ ಆಕೆಯ ಎರಡನೇ ಪತ್ನಿ/ಪತಿ ಮತ್ತು ಅವರ ಮಕ್ಕಳಿಗೆ ಪರಿಹಾರವಾಗಲಿ, ಸರ್ಕಾರಿ ಹುದ್ದೆ ಸೌಲಭ್ಯ ದೊರೆಯುವುದಿಲ್ಲ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೊದಲ ಪತ್ನಿ ಮತ್ತು ಮಕ್ಕಳಿಗೆ ಆದ್ಯತೆ ನೀಡಲಿದೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರಿ ಆಡಳಿತಕ್ಕೊಳಪಟ್ಟ ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾ ಮ್ಯಾಜಿಸ್ಟ್ರೇಟರ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ಸ್, ಪೊಲೀಸ್ ಮಹಾ ನಿರ್ದೇಶಕರು, ಹೋಮ್ ಗಾರ್ಡ್ ಡಿಜಿಪಿ, ಜೈಲಾಧಿಕಾರಿ ಸೇರಿದಂತೆ ತಮ್ಮ ಅಧಿಕಾರ ವ್ಯಾಪ್ತಿಯ ಎಲ್ಲಾ ಇಲಾಖೆಯಲ್ಲೂ ಈ ಅಧಿಸೂಚನೆಯನ್ನು ಜಾರಿಗೊಳಿಸುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ