ನರ್ಸಿಂಗ್‌ ಕಾಲೇಜು: ಸದನ ಸಮಿತಿ ಸಿಂಧುತ್ವ ಎತ್ತಿಹಿಡಿದ ಹೈಕೋರ್ಟ್‌


Team Udayavani, Jan 10, 2023, 6:10 AM IST

ನರ್ಸಿಂಗ್‌ ಕಾಲೇಜು: ಸದನ ಸಮಿತಿ ಸಿಂಧುತ್ವ ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದ ನರ್ಸಿಂಗ್‌ ಹಾಗೂ ಸಂಬಂಧಿತ ವಿಜ್ಞಾನಗಳ ಕಾಲೇಜುಗಳಿಗೆ ಮೂಲ ಸೌಕರ್ಯ ಗಳಿಲ್ಲದಿದ್ದರೂ ಅನುಮತಿ ನೀಡಿ ಇಂಡಿಯನ್‌ ನರ್ಸಿಂಗ್‌ ಕೌನ್ಸಿಲ್‌ ಹೊರಡಿಸಿರುವ ಮಾರ್ಗಸೂಚಿ ಗಳನ್ನು ಉಲ್ಲಂಘಿಸಿರುವ ವಿಷಯವನ್ನು ಪರಿಶೀಲಿ ಸಲು ರಚಿಸಲಾಗಿದ್ದ ಜಂಟಿ ಸದನ ಸಮಿತಿಯ ಸಿಂಧುತ್ವ ವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಜಂಟಿ ಸದನ ಸಮಿತಿ ರಚಿಸಿರುವ ಕ್ರಮ ಸರಿ ಇದೆ ಎಂದು ಹೇಳಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಕರ್ನಾಟಕ ನರ್ಸಿಂಗ್‌ ಮತ್ತು ಆರೋಗ್ಯ ವಿಜ್ಞಾನಗಳ ನಿರ್ವಹಣೆಯ ರಾಜ್ಯ ಒಕ್ಕೂಟ, ಹೈದರಾಬಾದ್‌-ಕರ್ನಾಟಕ ನರ್ಸಿಂಗ್‌ ಮ್ಯಾನೇಜ್‌ಮೆಂಟ್‌ ಅಸೋಸಿಯೇಶನ್‌ ಮತ್ತಿತರರ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸದನ ಸಮಿತಿಯ ಸಿಂಧುತ್ವವನ್ನು ಎತ್ತಿಹಿಡಿದಿದೆ. ಅಲ್ಲದೆ, ನರ್ಸಿಂಗ್‌ ಕಾಲೇಜುಗಳ ಮೂಲಸೌಕರ್ಯಗಳ ಕುರಿತು ಪರಿಶೀಲಿಸುವ ಅಧಿಕಾರ ಸದನ ಸಮಿತಿಗೆ ಇದೆ ಎಂದು ಆದೇಶಿಸಿದೆ.

ಸದನ ಸಮಿತಿಯನ್ನು ಕಾಲೇಜುಗಳ ಮೂಲಸೌಕರ್ಯ ಹಾಗೂ ಕಾರ್ಯ ನಿರ್ವಹಣೆ ಅಧ್ಯಯನ ಮಾಡಲು ಮಾತ್ರವೇ ರಚಿಸಲಾಗಿದೆಯೇ ಹೊರತು ಅಧಿಕಾರಿಗಳ ಕಾರ್ಯ ಗಳನ್ನು ಮೇಲ್ವಿಚಾರಣೆಗಾಗಿ ಅಲ್ಲ. ಮೂಲ ಸೌಕರ್ಯ ಇತ್ಯಾದಿಗಳ ಕುರಿತು ಅಧ್ಯಯನ ನಡೆಸುವ ನಿಟ್ಟಿನಲ್ಲಿ ಸಮಿತಿಯು ನರ್ಸಿಂಗ್‌ ಕಾಲೇಜು ಗಳಿಗೆ ಭೇಟಿ ನೀಡುವ ಅಧಿಕಾರವನ್ನು ಹೊಂದಿದೆ. ಆದರೆ ಈ ಸಮಿತಿಯು ಸಾಂವಿಧಾನಿಕ ಯೋಜನೆಯಡಿ ನ್ಯಾಯಾಂಗಕ್ಕೆ ಸೇರಿರುವ ಯಾವುದೇ ನ್ಯಾಯಮಂಡಳಿಯ ಅಧಿಕಾರ ಹೊಂದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಒಂದು ವೇಳೆ ಸದನ ಸಮಿತಿ ವರದಿ ನೀಡಿದರೆ ಅದು ಬಹಿರಂಗವಾಗಿ ಸಾರ್ವಜನಿಕರಿಗೆ ಲಭ್ಯ ವಾದಾಗ ಅವರು ಅದನ್ನು ದುರುಪಯೋಗ ಪಡಿಸಿಕೊಳ್ಳಬಹುದೆಂಬ ಅರ್ಜಿದಾರರ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ.
ವಿಧಾನಪರಿಷತ್ತಿನ ಕಾರ್ಯ ವಿಧಾನ ಮತ್ತು ವ್ಯವಹಾರದ ನಿಯಮ ಗಳ ನಿಯಮ 223ರ ಪ್ರಕಾರ, ಸಮಿತಿ ವರದಿ ಸಲ್ಲಿಸಿದಾಕ್ಷಣ ಅದನ್ನು ಬಹಿರಂಗಪಡಿಸುವುದಿಲ್ಲ. ಅದು ಸದನದಲ್ಲಿ ಮಂಡನೆಯಾದರೆ ಮಾತ್ರ ಅದು ಸಾರ್ವಜನಿಕ ಸೊತ್ತಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಸರಕಾರದ ಪರ ವಾದಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ಸದನ ಸಮಿತಿ ರಚನೆಯನ್ನು ಬಲವಾಗಿ ಸಮರ್ಥಿಸಿ ಕೊಂಡು ವಿಧಾನ ಪರಿಷತ್ತಿನ ಕಾರ್ಯವಿಧಾನ ಮತ್ತು ವ್ಯವಹಾರದ ನಿಯಮಗಳ ನಿಯಮ 199ರ ಅನುಸಾರವೇ ಉಪಸಮಿತಿಯನ್ನು ರಚಿಸಲಾಗಿದೆ ಎಂದು ಪ್ರತಿಪಾದಿಸಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.