ಕುಣಿಗಲ್ ಪುರಸಭೆ ಜಾಗದಲ್ಲಿ ಆಕ್ರಮ ಕಟ್ಟಡ: ಮಾಲೀಕ ಪೊಲೀಸರ ವಶಕ್ಕೆ 


Team Udayavani, Nov 25, 2021, 6:13 PM IST

33bilding

ಕುಣಿಗಲ್: ಪುರಸಭೆ ನಿವೇಶನಕ್ಕೆ ಅತಿಕ್ರಮ ಪ್ರವೇಶ ಮಾಡಿ, ಮನೆ ನಿರ್ಮಾಣ ಮಾಡುತ್ತಿದ್ದ ಕಟ್ಟಡವನ್ನು ತೀವ್ರ ವಿರೋಧ, ವಾಗ್ವಾದ ನಡುವೆಯೂ ಪುರಸಭೆ ಮುಖ್ಯಾಧಿಕಾರಿ ಕೆ.ಪಿ ರವಿಕುಮಾರ್ ಅವರ ನೇತೃತ್ವದ ಅಧಿಕಾರಿಗಳ ತಂಡ ಪೊಲೀಸರ ಸಹಕಾರದೊಂದಿಗೆ ಕಾರ್ಯಚರಣೆ ನಡೆಸಿ ಗುರುವಾರ ಕಟ್ಟಡ ತೆರವುಗೊಳಿಸಿದರು.

ಪಟ್ಟಣದ 20 ನೇ ವಾರ್ಡ್ ಬೋವಿಕಾಲೋನಿಯಲ್ಲಿ ಪುರಸಭೆಗೆ ಸೇರಿದ ಖಾತಾ ನಂ 105/359 ನ 17 ಅಡಿ ಉದ್ದ 40 ಅಡಿ ಅಗಲದ ಜಾಗದಲ್ಲಿ ಗೋವಿಂದರಾಜು ಅತಿಕ್ರಮ ಪ್ರವೇಶಿಸಿ ಮನೆ ನಿರ್ಮಿಸಿದ್ದು, ಕಟ್ಟಡ ಮೋಲ್ಡ್ ಮಟ್ಟದವರಿಗೆ ಬಂದಿತು, ಈ ಸಂಬಂಧ ಪುರಸಭೆಯಿಂದ ಹಲವು ಭಾರಿ ಕಟ್ಟಡ ನಿರ್ಮಾಣ ಮಾಡಬಾರದೆಂದು ಗೋವಿಂದರಾಜು ಅವರಿಗೆ ತಿಳುವಳಿಕೆ ಹಾಗೂ ಎಚ್ಚರಿಕೆ ನೀಡಿದರು, ಇದ್ಯಾವುದನ್ನು ಲೆಕ್ಕಿಸದೇ ಕಟ್ಟಡ ಕಾಮಗಾರಿಯನ್ನು ಮುಂದುವರೆಸಿದರು, ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಟ್ಟಡದಲ್ಲಿ ಇಟ್ಟುಕೊಂಡು ವಾಸ ಮಾಡುತ್ತಿದ್ದರು, ಪುರಸಭಾ ಮುಖ್ಯಾಧಿಕಾರಿ ಕೆ.ಪಿ.ರವಿಕುಮಾರ್, ಪರಿಸರ ಎಂಜಿನಿಯರ್ ಚಂದ್ರಶೇಖರ್ ನೇತೃತ್ವದ ಸಿಬ್ಬಂದಿಗಳು ಕಟ್ಟಡವನ್ನು ತೆರವುಗೊಳಿಸಿದರು.

ಇದನ್ನೂ ಓದಿ:ರೇಪ್ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ : ಆಯುಕ್ತರಿಗೆ 8 ರ ಬಾಲೆಯ ಮನವಿ

ತೆರವಿಗೆ ವಿರೋಧ, ವಾಗ್ವಾದ

ಕಟ್ಟಡ ತೆರವುಗೊಳಿಸುವುದನ್ನು ಗೋವಿಂದರಾಜು ಹಾಗೂ ಅವರ ಮನೆಯವರು ತೀವ್ರವಾಗಿ ವಿರೋಧಿಸಿದರು. ಪುರಸಭೆಗೆ ಸೇರಿದ ಜಾಗದಲ್ಲಿ ಕಟ್ಟಡ ಕಟ್ಟುತ್ತಿಲ್ಲ. ನನಗೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದೇನೆ. ವಿನಾಕಾರಣ ನಮಗೆ ತೊಂದರೆ ನೀಡಿ, ಕಟ್ಟಡ ಕೆಡವುತ್ತಿದ್ದೀರಿ. ವಾಸ ಮಾಡಲು ಇದೊಂದು ಜಾಗ ಬಿಟ್ಟರೇ ಬೇರೆ ಯಾವುದೇ ನಮಗೆ ಜಾಗವಿಲ್ಲ. ನನ್ನ ಹೆಂಡತಿ ಮಕ್ಕಳು ಎಲ್ಲಿ ವಾಸ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಗೋವಿಂದರಾಜು ತೆರವುಗೊಳಿಸಲು ಒಂದು ವಾರ ಅವಕಾಶ ಕೊಡಿ ಇಲ್ಲವಾದಲ್ಲಿ ಕಟ್ಟಡ ನೆಲ ಸಮಗೊಳಿಸಲು ಬಿಡುವುದಿಲ್ಲ ಎಂದು ಏರಿದ ದ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಸಾಕಷ್ಟು ಸಮಯ ನೀಡಲಾಗಿದೆ. ಯಾವುದೇ ಕಾರಣಕ್ಕೂ ಇನ್ನೂ ಅವಕಾಶ ಕೊಡಲು ಸಾಧ್ಯವಿಲ್ಲ ಎಂದು ಮುಖ್ಯಾಧಿಕಾರಿ ರವಿಕುಮಾರ್ ಸ್ಪಷ್ಟಪಡಿದರು. ಇದರಿಂದ ಆಕ್ರೋಶಗೊಂಡ ಗೋವಿಂದರಾಜು ಕಟ್ಟಡ ಕೆವಲು ಬಿಡುವುದಿಲ್ಲ ಎಂದು ತೆರವು ಕಾರ್ಯಚರಣೆಗೆ ಅಡ್ಡಿ ಪಡಿಸಿ ಬಾಗಿಲು ಬಳಿ ಮಲಗಿ ಪ್ರತಿಭಟಿಸಿದರು. ಈ ನಡುವೆ ಗೊವಿಂದರಾಜು ಹಾಗೂ ಪುರಸಭಾ ಅಧಿಕಾರಿಗಳ ನಡುವೆ ಬಿರುಸಿನ ಮಾತಿನ ಚಕಾಮಕಿ ನಡೆಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಚರಣೆಗೆ ಅಡ್ಡಿ ಪಡಿಸಿದ ಗೋವಿಂದರಾಜುನನ್ನು ವಶಕ್ಕೆ ಪಡೆದು ಕಾರ್ಯಚರಣೆಗೆ ಅನುಕೂಲ ಮಾಡಿಕೊಟ್ಟರು,

ಪುರಸಭೆಗೆ ಸೇರಿರುವ ಸ್ವತ್ತಿನಲ್ಲಿ ಅಕ್ರಮ ಪ್ರವೇಶಿಸಿ ಯಾರೇ ಕಟ್ಟಡ ನಿರ್ಮಿಸಿದರೂ ಅದನ್ನು ವಿರೋಧಿಸುತ್ತೇನೆ, ಆದರೆ ಪಟ್ಟಣದ ಹಲವು ಭಾಗಗಳಲ್ಲಿ ಬಲಾಡ್ಯ ವ್ಯಕ್ತಿಗಳು, ಪುರಸಭೆ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ ಈ ಸಂಬಂಧ ಪುರಸಭೆ ಸಾಮಾನ್ಯ ಸಭೆಗಳಲ್ಲಿ ಆನೇಕ ಮಂದಿ ಸದಸ್ಯರು ಅಧಿಕಾರಿಗಳ ಗಮನಕ್ಕೆ ತಂದು ಕಟ್ಟಡ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಆದರೆ ಆ ಕಟ್ಟಡಗಳನ್ನು ತೆರವುಗೊಳಿಸದ ಅಧಿಕಾರಿಗಳು ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಬಡ ಕುಟುಂಬವು ಕಟ್ಟಡ ಕಟ್ಟಿಕೊಂಡಿರುವುದನ್ನು ಏಕಾಏಕಿ ಕೆಡವಿ ಆ ಕುಟುಂಬವನ್ನು ಬೀದಿಗೆ ತಂದಿದ್ದಾರೆ. ತೆರವುಗೊಳಿಸಲು ಒಂದು ವಾರ ಅವಕಾಶ ನೀಡಿ ಎಂದು ಮನೆಯ ಮಾಲೀಕ ಗೋವಿಂದರಾಜು ಮನವಿ ಮಾಡಿದರು. ಇದನ್ನು ಗಣನೆಗೆ ತೆಗೆದುಕೊಳ್ಳದೇ ಕಟ್ಟಡವನ್ನು ತೆರವುಗೊಳಿಸಿದ ದರ್ಪ ತೋರಿಸಿದ್ದಾರೆ. ಅನಂದ್‌ಕುಮಾರ್ 20 ನೇ ವಾರ್ಡ್ ಪುರಸಭಾ ಸದಸ್ಯ  

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.