ತೈಲ ದರ ಇಳಿಕೆಗೆ ಕೇಂದ್ರ, ರಾಜ್ಯ ಚರ್ಚೆ ಅವಶ್ಯ: ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Feb 21, 2021, 7:00 AM IST
ಹೊಸದಿಲ್ಲಿ/ ಚೆನ್ನೈ : ದೇಶದಲ್ಲಿ ತೈಲದರ ಏರಿಕೆಯಾಗುತ್ತಲೇ ಇದೆ. ಶನಿವಾರವೂ ಪೆಟ್ರೋಲ್ ದರದಲ್ಲಿ 40 ಪೈಸೆ ಏರಿಕೆಯಾಗಿದ್ದು, 93.61 ರೂ.ಗಳಿಗೆ ಮುಟ್ಟಿದೆ. ಡೀಸೆಲ್ ದರದಲ್ಲೂ 40 ಪೈಸೆ ಏರಿಕೆಯಾಗಿದ್ದು, 85.84 ರೂ.ಗಳಿಗೆ ತಲುಪಿದೆ. ಈ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು “ಇದೊಂದು ದುಃಖಕರ ವಿಚಾರ’ ಎಂದಿದ್ದಾರೆ.
ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂ. ದಾಟಿದೆ. ಹೀಗಾಗಿ ಕೇಂದ್ರ -ರಾಜ್ಯ ಸರಕಾರಗಳು ಮಾತುಕತೆ ನಡೆಸಿ ದರ ಇಳಿಸಬೇಕು ಎಂದಿದ್ದಾರೆ.
ಏರುತ್ತಿರುವ ಇಂಧನ ದರ ತನ್ನ ಪಾಲಿಗೆ “ಧರ್ಮ ಸಂಕಟ’ದ ಸ್ಥಿತಿಯನ್ನು ತಂದೊಡ್ಡಿದೆ ಎಂದೂ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಚೆನ್ನೈ ಸಿಟಿಜನ್ ಫೋರಂನಲ್ಲಿ ಬಜೆಟ್ ಮೇಲಣ ಚರ್ಚೆಯಲ್ಲಿ ಭಾಗವಹಿಸಿದ ಬಳಿಕ ಪ್ರಶ್ನೆಯೊಂದಕ್ಕೆ ಉತ್ತರಿಸುವ ಸಂದರ್ಭ ಸಚಿವೆ ಈ ಮಾತನ್ನಾಡಿದ್ದಾರೆ. ಇಂಧನ ತೈಲ ದರ ಏರಿಕೆ ಎಲ್ಲರನ್ನೂ ಬಾಧಿಸುವ ವಿಚಾರ, ಇದಕ್ಕೆ ದರ ಇಳಿಕೆ ಮಾತ್ರವೇ ಪರಿಹಾರ ಎಂದರು. ತೈಲ ಉತ್ಪಾದನೆ ಕುಸಿಯುವ ಸಾಧ್ಯತೆ ಇದೆ ಎಂದು ತೈಲೋತ್ಪಾದಕ ದೇಶಗಳು ಹೇಳಿದ್ದು, ಇದರಿಂದ ಪೆಟ್ರೋಲ್ – ಡೀಸೆಲ್ ದರಗಳ ಮೇಲೆ ಇನ್ನಷ್ಟು ಒತ್ತಡ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ದರ ಇಳಿಸಲು ಏನಾದರೂ ಕ್ರಮ ಕೈಗೊಳ್ಳಲು ಸಾಧ್ಯವಿದೆಯೇ ಎಂಬ ವಿಚಾರವಾಗಿ ರಾಜ್ಯ ಸರಕಾರಗಳು ಮತ್ತು ಕೇಂದ್ರ ಸರಕಾರ ಚರ್ಚೆ ನಡೆಸಬೇಕು ಎಂದರು.
ಪೆಟ್ರೋಲ್, ಡೀಸೆಲ್ ಮಾರಾಟವನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದರ ಏರಿಕೆಗೆ ಪರಿಹಾರ ಸಿಗಬಹುದೇ ಎಂಬ ಪ್ರಶ್ನೆಗೆ, ಈ ಬಗ್ಗೆ ಜಿಎಸ್ಟಿ ಮಂಡಳಿಯಲ್ಲಿ ಕೂಲಂಕಷ ಚರ್ಚೆ, ರಾಜ್ಯಗಳ ಜತೆಗೆ ವಿಚಾರ ವಿಮರ್ಶೆ ನಡೆಯಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ