ಒಮಾನ್ನಲ್ಲಿ ಧಾರಾಕಾರ ಮಳೆ; ಹಠಾತ್ ಪ್ರವಾಹ
Team Udayavani, Jan 5, 2022, 1:23 PM IST
ಮಸ್ಕತ್ : ಒಮಾನ್ನಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದು ಹಠಾತ್ ಪ್ರವಾಹ ಉಂಟಾಗಿ ಜನಜೀವನ ಸಂಪೂರ್ಣ ಅಸ್ಥವ್ಯಸ್ತ ಗೊಂಡಿದ್ದು, ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿದೆ.
ಮಳೆಯಿಂದಾಗಿ ದೇಶಾದ್ಯಂತ ವ್ಯಾಪಾರ, ವಾಹನಗಳು ಮತ್ತು ಬೆಳೆಗಳ ಅಪಾರ ಹಾನಿ ಉಂಟಾಗಿದೆ. ಮಂಗಳವಾರ ಶಾಲೆಗಳನ್ನು ಸ್ಥಗಿತಗೊಳಿಸಲಾಗಿತ್ತು. ವಿಪರೀತ ಮಳೆಯು ವಾರಾಂತ್ಯದವರೆಗೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
“ಹಲವು ದಿನಗಳವರೆಗೆ ಭಾರೀ ಮಳೆ ಮುಂದುವರಿಯುತ್ತದೆ ಮತ್ತು ಸಾರ್ವಜನಿಕರು ತಮ್ಮ ಪ್ರಯಾಣವನ್ನು ಮಿತಿಗೊಳಿಸಬೇಕಾಗುತ್ತದೆ. ರಸ್ತೆಗಳು ಜಾರುವುದರಿಂದ ಚಾಲಕರು ವಾಹನ ಚಲಾಯಿಸುವಾಗ ಜಾಗರೂಕರಾಗಿರಬೇಕು. ಏಳು ಮೀಟರ್ಗಳಷ್ಟು ಎತ್ತರಕ್ಕೆ ಅಲೆಗಳು ಏಳುವ ಸಾಧ್ಯತೆಗಳಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಪ್ರಾಧಿಕಾರ ಮುನ್ಸೂಚನೆ ನೀಡಿದೆ.
ಜಾಲಾ ವೃತವಾಗಿರುವ ಶಾಪಿಂಗ್ ಮಾಲ್ಗಳಲ್ಲಿ ಕಾರುಗಳು ಸಿಲುಕಿರುವುದನ್ನು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊಗಳು ತೋರಿಸಿವೆ. ಸರ್ಕಾರಿ ಸ್ವಾಮ್ಯದ ಓಮನ್ ಟೆಲಿವಿಷನ್ ಅಂಡರ್ಪಾಸ್ಗಳು ಮತ್ತು ನೀರಿನಿಂದ ತುಂಬಿರುವ ಸೇತುವೆಗಳ ಕ್ಲಿಪ್ಗಳನ್ನು ತೋರಿಸಿದೆ. ಕೆಲವು ಚಾಲಕರು ತಮ್ಮ ಕೆಲಸದ ಸ್ಥಳಗಳನ್ನು ತಲುಪಲು ಸಾಧ್ಯವಾಗದ ಕಾರಣ ಮನೆಗೆ ಮರಳಬೇಕಾಗಿದೆ.
ಕೆಲ ಮಾಧ್ಯಮಗಳ ಪ್ರಕಾರ ೬ ಮಂದಿ ಮಳೆ ಅವಘಡದಿಂದ ಪ್ರಾಣ ಕಳೆದು ಕೊಂಡಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ