ಎರಡು ಡೋಸ್ ಪಡೆಯದವರಿಗೆ ಒಮಿಕ್ರಾನ್ ಆತಂಕ ಹೆಚ್ಚು: ಡಾ. ಸುಧಾಕರ್

ವೇಗವಾಗಿ ಹರಡಿ, ಬೇಗ ಕಡಿಮೆಯಾಗುತ್ತದೆ ,ಆತಂಕ ಬೇಡ

Team Udayavani, Jan 5, 2022, 12:17 PM IST

dr-sudhakar

ಬೆಂಗಳೂರು: ‘ಯಾರು ಎರಡು ಡೋಸ್ ಲಸಿಕೆ ಪಡೆದಿಲ್ಲವೋ ಅಂತಹವರಿಗೆ ಒಮಿಕ್ರಾನ್ ಆತಂಕ ಹೆಚ್ಚು’ ಎಂದು ಬುಧವಾರ ಅರೋಗ್ಯ ಸಚಿವ ಡಾ.ಸುಧಾಕರ್ ಅವರು ಬುಧವಾರ  ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 15 ರಿಂದ 18 ವರ್ಷದೊಳಗಿನ 3,50,000 ಮಕ್ಕಳಿಗೆ ಈಗಾಗಲೇ ಲಸಿಕೆ ನೀಡಿದ್ದೇವೆ. ದೇಶದಲ್ಲಿ ನಾವು 3 ನೇ ಸ್ಥಾನದಲ್ಲಿದ್ದೇವೆ. ಈಗಾಗಲೇ 25 ಶೇಕಡಾ ಲಸಿಕಾಕರಣ ಆಗಿದೆ, ಅಂದರೆ 4 ಮಕ್ಕಳಲ್ಲಿಲ್ಲಿ ಒಬ್ಬರಿಗೆ ಲಸಿಕೆ ಆಗಿದೆ. ನಾನು ಹೇಳಿದ ಹಾಗೆ 10 ರಿಂದ 15 ದಿನಗಳಲ್ಲಿ ಸಂಪೂರ್ಣ ಲಸಿಕಾಕರಣ ಆಗುತ್ತದೆ ಎಂದಿದ್ದೆ. ಅದೇ ದಾರಿಯಲ್ಲಿ ಸಾಗಿದೆ. 28 ದಿನ ಆದ ಮೇಲೆ ಮಕ್ಕಳಿಗೆ 2 ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನೇ ನೀಡಲಾಗುತ್ತದೆ ಎಂದರು.

ಎಚ್ಚರಿಕೆ ಅಗತ್ಯ

ವಿಶ್ವದಲ್ಲಿ ಗಮನಿಸಿದ ಹಾಗೆ 4 ರಿಂದ 6 ವಾರಗಳು ಬಹಳ ಎಚ್ಚರಿಕೆ ಅಗತ್ಯ.  ಇದು ವೇಗವಾಗಿ ಹರಡಿ, ಬೇಗವಾಗಿ ಕಡಿಮೆಯಾಗುತ್ತದೆ. ದೀರ್ಘ ಅಲೆ ಇರುವುದಿಲ್ಲ. ಕನಿಷ್ಠ 4 ರಿಂದ 6 ವಾರಗಳ ಕಾಲ ಬಹಳ ಎಚ್ಚರಿಕೆಯಿಂದ ಇದ್ದು ನಿಯಂತ್ರಣ ಮಾಡಲು ಸಹಕಾರ ನೀಡಬೇಕು  ಎಂದು  ಜನರಿಗೆ ಮನವಿ ಮಾಡಿದರು.

ಗಾಬರಿ ಬೇಡ

ಸೋಂಕು ಬಂದರೂ ಗಾಬರಿ ಬೇಡ, ಆಸ್ಪತ್ರೆಗೆ ದಾಖಲಾಗುವ ಅಗತ್ಯ ಇಲ್ಲ,ಆತಂಕ ಬೇಡ. ಒಮಿಕ್ರಾನ್ ವೈರಾಣು ಸ್ವಭಾವ ಹೇಗಿದೆ ಎಂದರೆ ಮೂಗಿನಿಂದ ಗಂಟಲಿಗೆ ಹೋಗುತ್ತದೆ, ಶ್ವಾಸಕೋಶಕ್ಕೆ ಹೋಗುವುದು ತೀರಾ ಕಡಿಮೆ. ಹಾಗಾಗಿ ಆಕ್ಸಿಜೆನ್, ವೆಂಟಿಲೇಟರ್ ಅಗತ್ಯ ಕಡಿಮೆ, ಐಸಿಯು ನಲ್ಲಿ ದಾಖಲಾದ ಸಂಖ್ಯೆಯೂ ತೀರಾ ಕಡಿಮೆ ಇದೆ ಎಂದರು.

60 ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್

10 ನೇ ತಾರೀಖಿನಿಂದ ಇತರೆ ರೋಗಗಳಿಂದ ಬಳಲುತ್ತಿರುವರಿಗೆ ಮೂರನೇ ಬೂಸ್ಟರ್ ಡೋಸ್ ನೀಡುತ್ತೇವೆ. ಆರೋಗ್ಯ ಕ್ಷೇತ್ರದ ಎಲ್ಲರಿಗೂ, ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಮೂರನೇ ಬೂಸ್ಟರ್ ಡೋಸ್  ನೀಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ : ಯಾರು ಏನೇ ಮಾಡಿದರೂ”ವಾಕ್ ಫಾರ್ ವಾಟರ್”ನಿಲ್ಲುವುದಿಲ್ಲ: ಡಿಕೆಶಿ

ಮೇಕೆದಾಟು ಪಾದಯಾತ್ರೆ : ಕಾನೂನು ಕ್ರಮ

ಮೇಕೆದಾಟು ಪಾದಯಾತ್ರೆ ನಡೆಸಲು ಮುಂದಾಗಿರುವ ಕಾಂಗ್ರೆಸ್ ಬಗ್ಗೆ ಪ್ರತಿಕ್ರಿಯಿಸಿ, ಆರೋಗ್ಯದ ತುರ್ತು ಪರಿಸ್ಥಿತಿ ಇದ್ದು, ಎಲ್ಲಾ ಪಕ್ಷಗಳು, ಎಲ್ಲಾ ಸಂಘ ಸಂಸ್ಥೆಗಳು ಸರಕಾರಕ್ಕೆ ಸಹಕಾರ ನೀಡಬೇಕಾಗಿದೆ. ಜನರು ತೀರ್ಮಾನ ಮಾಡುತ್ತಾರೆ, ಎಲ್ಲವನ್ನೂ ನೋಡುತ್ತಿದ್ದಾರೆ. ನಾವು ದುರುದ್ದೇಶದಿಂದ ಕಾನೂನು ಜಾರಿ ಮಾಡಿಲ್ಲ. ಕಾಂಗ್ರೆಸ್ ಗೆ ಜನರ ಹಿತ ಕಾಯುವ ಮನಸ್ಸು ಇದೆ ಎಂದು ತಿಳಿದಿದ್ದೇನೆ. ಮುಖ್ಯಮಂತ್ರಿಗಳಾಗಿದ್ದವರು, ಸಚಿವರಾಗಿದ್ದವರು,  ಅನೇಕರು ಪ್ರಮುಖ ಸ್ಥಾನದಲ್ಲಿದ್ದವರು ಅಲ್ಲಿದ್ದಾರೆ, ಸುದೀರ್ಘವಾಗಿ ದೇಶವನ್ನು ಆಳಿದ ಪಕ್ಷ ಕಾಂಗ್ರೆಸ್. ಯಾವುದು ಒಳ್ಳೆಯದು ಎಂದು ತೀರ್ಮಾನ ಮಾಡಲಿ. ಕಾನೂನು ಅದರ ಕೆಲಸ ಮಾಡುತ್ತದೆ ಎಂದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.