ಆಮ್ನಿ- ಪಿಕಪ್ ಢಿಕ್ಕಿ: ಚಾಲಕ ಸಾವು
Team Udayavani, Mar 14, 2023, 5:37 AM IST
ಬಂಟ್ವಾಳ: ರಾ.ಹೆ. 75ರ ಬಿ.ಸಿ. ರೋಡು ಸಮೀಪದ ತಲಪಾಡಿಯಲ್ಲಿ ಮಾರುತಿ ಆಮ್ನಿ ಹಾಗೂ ಪಿಕಪ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಮ್ನಿ ಚಾಲಕ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಶಾಲಾ ಬಳಿ ನಿವಾಸಿ ಆಮ್ನಿ ಚಾಲಕ ರಾಜೇಶ್ ಶೆಟ್ಟಿ (50) ಮೃತಪಟ್ಟವರು. ಅವರು ಹೆದ್ದಾರಿಯಲ್ಲಿ ಬಿ.ಸಿ. ರೋಡಿನಿಂದ ಬ್ರಹ್ಮರಕೂಟ್ಲು ಕಡೆಗೆ ತೆರಳುತ್ತಿದ್ದು, ತಲಪಾಡಿ ತಲುಪುತ್ತಿದ್ದಂತೆ ಪಿಕಪ್ ಚಾಲಕ ಇರ್ಷಾದ್ ರಾಂಗ್ ಸೈಡಿನಿಂದ ವಾಹನ ಚಲಾಯಿಸಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾಲಿಗೆ ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ತತ್ಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಿಕಪ್ ವಾಹನ ರಾಂಗ್ ಸೈಡಿನಿಂದ ತೆರಳಿ ಈ ರೀತಿ ಅಪಘಾತಕ್ಕೆ ಕಾರಣವಾಗಿರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಕ್ಕು ಕೂಡ ಸಾವು
ಅನಾರೋಗ್ಯದಿಂದ ಬಳಲುತ್ತಿದ್ದ ಬೆಕ್ಕನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿ ಹಿಂದಿರುಗುವ ವೇಳೆ ಘಟನೆ ನಡೆದಿದ್ದು, ತಮ್ಮ ಪ್ರಾಣಪಕ್ಷಿಯೇ ಹಾರಿ ಹೋಗಿದೆ. ಆಮ್ನಿಯಲ್ಲಿದ್ದ ಬೆಕ್ಕು ಕೂಡ ಸ್ಥಳದಲ್ಲೇ ಮೃತಪಟ್ಟಿದೆ. ಬೆಕ್ಕಿನ ಮೃತದೇಹವೂ ಅ ಬಿದ್ದಿಕೊಂಡಿದ್ದು, ಮನ ಕಲುಕುವಂತಿತ್ತು.
ಪಂಪ್ಹೌಸ್ ಆಪರೇಟರ್ ಮೃತ ರಾಜೇಶ್ ಶೆಟ್ಟಿ ಅವರು ಮನಪಾ ತುಂಬೆ ಪಂಪ್ಹೌಸ್ನಲ್ಲಿ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ವಿವಾಹಿತರಾಗಿದ್ದ ಅವರಿಗೆ ಮಕ್ಕಳಿಲ್ಲ. ಪರೋಪಕಾರಿ ವ್ಯಕ್ತಿತ್ವದ ಅವರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ