Video: ಕ್ಯಾಂಪಸ್ ತಡೆಬೇಲಿಯಿಂದ ಹಾರಿ ವಾಹನದ ಮೇಲೆ ದಾಳಿ ನಡೆಸಿದ ಚಿರತೆ; 15 ಮಂದಿಗೆ ಗಾಯ
ಅರಣ್ಯಾಧಿಕಾರಿಯೊಬ್ಬರು ಸೆರೆಹಿಡಿದಿರುವ ವಿಡಿಯೋ ಮೈ ಜುಮ್ಮೆನ್ನಿಸುವಂತಿದೆ.
Team Udayavani, Dec 27, 2022, 12:47 PM IST
ಅಸ್ಸಾಂ: ಮಳೆಕಾಡು ಸಂಶೋಧನಾ ಕೇಂದ್ರ(ಆರ್ ಎಫ್ ಆರ್ ಐ)ದ ವಸತಿಗೃಹದ ಕ್ಯಾಂಪಸ್ ಆವರಣದ ತಡೆಬೇಲಿಯಿಂದ ಚಿರತೆಯೊಂದು ಜಿಗಿದು ಸರಣಿ ದಾಳಿ ನಡೆಸಿದ ಪ್ರಕರಣದಲ್ಲಿ ಮೂವರು ಅರಣ್ಯಾಧಿಕಾರಿಗಳು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂನ ಜೋಹ್ರಾತ್ ನಲ್ಲಿ ನಡೆದಿದೆ.
ಇದನ್ನೂ ಓದಿ:ರಾಹುಲ್ ಗಾಂಧಿಯನ್ನು ‘ಶ್ರೀರಾಮ’ನಿಗೆ ಹೋಲಿಸಿದ ಸಲ್ಮಾನ್ ಖುರ್ಷಿದ್
ಕಳೆದ 24ಗಂಟೆಯಲ್ಲಿ ಅರಣ್ಯಾಧಿಕಾರಿಗಳು ಮತ್ತು ಮಳೆಕಾಡು ಸಂಶೋಧನಾ ಕೇಂದ್ರದ ನಿವಾಸಿಗಳ ಮೇಲೆ ಚಿರತೆ ಮಹಿಳೆಯರು ಮತ್ತು ಮಕ್ಕಳ ಮೇಲೆ ದಾಳಿ ನಡೆಸಿತ್ತು ಎಂದು ವರದಿ ತಿಳಿಸಿದೆ.
ಅರಣ್ಯಾಧಿಕಾರಿಯೊಬ್ಬರು ಸೆರೆಹಿಡಿದಿರುವ ವಿಡಿಯೋ ಮೈ ಜುಮ್ಮೆನ್ನಿಸುವಂತಿದೆ. ಆರ್ ಎಫ್ ಆರ್ ಐ ಕ್ಯಾಂಪಸ್ ನಲ್ಲಿ ಚಿರತೆ ಅಡ್ಡಾಡುತ್ತಿದ್ದು, ಏಕಾಏಕಿ ತಡೆಬೇಲಿಯಿಂದ ಹಾರಿ ಕಾರಿನ ಮೇಲೆ ದಾಳಿ ನಡೆಸಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
At least 13 people including 3 forest staff injured in a #Leopard attack in #Assam‘s #Jorhat district. pic.twitter.com/xyQQ7D1UUC
— Hemanta Kumar Nath (@hemantakrnath) December 26, 2022
ಆರ್ ಎಫ್ ಆರ್ ಐ ಜೋಹ್ರಾತ್ ಹೊರವಲಯದಲ್ಲಿ ದಟ್ಟ ಕಾಡುಗಳಿಂದ ಆವೃತ್ತವಾಗಿದ್ದು, ಚಿರತೆ ಅಲ್ಲಿಂದ ಕ್ಯಾಂಪಸ್ ನೊಳಕ್ಕೆ ನುಗ್ಗಿರುವುದಾಗಿ ಶಂಕಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆ ಕ್ಯಾಂಪಸ್ ನೊಳಗೆ ಇದ್ದಿರುವುದರಿಂದ ನಿವಾಸಿಗಳು ಮನೆಯೊಳಗೆ ಇರುವಂತೆ ಅಧಿಕಾರಿಗಳು ಸೂಚಿಸಿರುವುದಾಗಿ ವರದಿ ತಿಳಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?
Ahmedabad: ಪಾರ್ಕಿಂಗ್ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್