ಆರ್ ಎಸ್ಎಸ್ ಅಂಗಳದಲ್ಲಿ ಬೆಳೆದ ಸಾವಂತ್ ಮತ್ತೆ ಸಿಎಂ ಆಗ್ತಾರಾ?

ಸಂಘದ ಹಿನ್ನೆಲೆ ಹೊಂದಿದ ಗೋವಾದ ಏಕೈಕ ಶಾಸಕ ಡಾ.ಪ್ರಮೋದ್

Team Udayavani, Feb 10, 2022, 4:11 PM IST

pramod-sawanth

ಪಣಜಿ: ಬಿಜೆಪಿ ಯುವ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರ್ರಿಕರ್ ರವರ ರಾಜಕೀಯ ಉತ್ತರಾಧಿಕಾರಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಬಿಜೆಪಿ ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿದ್ದು, ಸಿಎಂ ಸಾವಂತ್ ಆರ್ ಎಸ್ ಎಸ್ ಅಂಗಳದಲ್ಲಿ ಬೆಳೆದು, ಸಂಘದ ಹಿನ್ನೆಲೆ ಹೊಂದಿದ ಏಕೈಕ ಶಾಸಕರಾಗಿದ್ದಾರೆ.

ಗೋವಾದ 13 ನೇ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ರವರು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸೇರಿದ ರಾಜ್ಯದ ಏಕೈಕ ಬಿಜೆಪಿ ಶಾಸಕರಾಗಿದ್ದಾರೆ. ಗೋವಾ ಮುಖ್ಯಮಂತ್ರಿಯಾಗುವ ಮೊದಲು ಅವರು ಪಕ್ಷದ ವಕ್ತಾರರಾಗಿ, ರಾಜ್ಯ ವಿಧಾನಸಭೆಯ ಸಭಾಪತಿಗಳಾಗಿ ಕೆಲಸ ನಿರ್ವಹಿಸಿದ್ದರು. 2017 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾದಾಗ ಅವರನ್ನು ವಿಧಾನಸಭೆಯ ಸಭಾಪತಿಗಳನ್ನಾಗಿ ಆಯ್ಕೆ ಮಾಡಲಾಗಿತ್ತು. ಪ್ರಮೋದ ಸಾವಂತ್ ರವರು ಮನೋಹರ್ ಪರ್ರಿಕರ್ ರವರ ಆಪ್ತರಾಗಿದ್ದರು. ಇದರಿಂದಾಗಿ ಪರ್ರಿಕರ್ ನಿಧನ ಹೊಂದಿದ ನಂತರ ಪ್ರಮೋದ ಸಾವಂತ್ ಮುಖ್ಯಮಂತ್ರಿ ಪಟ್ಟ ಅಲಂಕರಿಸಿದ್ದರು.

ಪ್ರಮೋದ ಸಾವಂತ್ 24 ಏಪ್ರಿಲ್ 1973 ರಂದು ಜನಿಸಿದರು. ಸಾವಂತ್ ರವರು ಗೋವಾದ ಬಿಚೋಲಿಯ ಕೊಟಂಬಿ ಗ್ರಾಮದವರು. ಅವರು ಆಯುರ್ವೇದ ವೈದ್ಯಕೀಯ ಕಾಲೇಜು, ಗಂಗಾ ಏಜ್ಯುಕೇಶನ್ ಸೊಸೈಟಿ ಕೊಲ್ಲಾಪುರ, ಮಹಾರಾಷ್ಟ್ರದಲ್ಲಿ ಆಯುರ್ವೇದ, ಔಷಧ ಮತ್ತು ಶಸ್ತ್ರಚಿಕಿತ್ಸೆಯಲ್ಲಿ ಪದವಿ ಪದೆದವರು. ನಂತರ ಪುಣೆಯ ತಿಲಕ್ ಮಹಾರಾಷ್ಟ್ರ ವಿಶ್ವವಿದ್ಯಾಲಯದಿಂದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು.

ಮುಖ್ಯಮಂತ್ರಿ ಪ್ರಮೋದ ಸಾವಂತ್ ವೃತ್ತಿಯಲ್ಲಿ ವೈದ್ಯರು. ಬಾಲ್ಯದಿಂದಲೂ ಆರ್‍ಎಸ್‍ಎಸ್ ನೊಂದಿಗೆ ಸಂಪರ್ಕ ಹೊಂದಿದವರು. ಇವರ ತಂದೆ ಪಾಂಡುರಂಗ ಸಾವಂತ್ ಜಿಪಂ ಮಾಜಿ ಸದಸ್ಯರಾಗಿದ್ದಾರೆ. ಮುಖ್ಯಮಂತ್ರಿ ಸಾವಂತ್ ರವರ ಪತ್ನಿ ಸುಲಕ್ಷಣಾ ಸಾವಂತ್ ಬಿಜೆಪಿ ಮಹಿಳಾ ಮೋರ್ಚಾದ ಪ್ರಮುಖರಾಗಿದ್ದಾರೆ. ಬಿಜೆಪಿ ಹಲವರ ಕೋರಿಕೆಯ ಮೇರೆಗೆ ಪ್ರಮೋದ ಸಾವಂತ್ 2008 ರಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದರು.

ಪ್ರಮೋದ ಸಾವಂತ್ ಆ ಸಂದರ್ಭದಲ್ಲಿ ಮಾಪ್ಸಾದ ಉತ್ತರ ಜಿಲ್ಲಾ ಆಸ್ಪತ್ರೆಯಲ್ಲಿ ಆಯುರ್ವೇದ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ನಂತರ ತಮ್ಮ ಸರ್ಕಾರಿ ಕೆಲಸವನ್ನು ತೊರೆದು ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಫರ್ಧಿಸಿದರು. ಆದರೆ ಆ ಉಪಚುನಾವಣೆಯಲ್ಲಿ ಸೋತರೂ ಕೂಡ 2012 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಜಯಭೇರಿ ಬಾರಿಸಿದರು.

2017 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಗೋವಾ ವಿಧಾನಸಭೆಗೆ ಪ್ರಮೋದ ಸಾವಂತ್ ಆಯ್ಕೆಯಾದರು. ಅಂದು ಮನೋಹರ್ ಪರ್ರಿಕರ್ ನೇತೃತ್ವದ ಸರ್ಕಾರದಲ್ಲಿ ವಿಧಾನಸಭಾ ಸಭಾಪತಿಗಳಾಗಿ ಆಯ್ಕೆಯಾದರು. ಗೋವಾ ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಕಿರಿಯ ವಯಸ್ಸಿನ ಸ್ಫೀಕರ್ ಆಗಿದ್ದರು.

ಮನೋಹರ್ ಪರ್ರಿಕರ್ ನಿಧನದ ನಂತರ ಗೋವಾ ಮುಖ್ಯಮಂತ್ರಿ ಸ್ಥಾನ ತೆರವಾಗಿತ್ತು. ನಂತರ 19 ಮಾರ್ಚ 2019 ರಂದು ಗೋವಾದ 13 ನೇಯ ಮುಖ್ಯಮಂತ್ರಿಯಾಗಿ ಪ್ರಮೋದ ಸಾವಂತ್ ಪ್ರಮಾಣವಚನ ಸ್ವೀಕರಿಸಿದರು. ಇದೀಗ ಪ್ರಮೋದ ಸಾವಂತ್ ರವರಿಗೆ 2022 ರ ವಿಧಾನಸಭಾ ಚುನಾವಣೆಯಲ್ಲಿ ನಿಜವಾದ ಪರೀಕ್ಷೆ ಎದುರಾಗಿದ್ದು ತಮ್ಮ ಅಭಿವೃದ್ಧಿ ಕಾರ್ಯದ ಬಲದಿಂದ ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಪ್ರಸಕ್ತ ಬಾರಿ ಗೋವಾದಲ್ಲಿ ಬಿಜೆಪಿಯು ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದೆ.ರಾಜ್ಯದ ಜನತೆ ಮತ್ತೆ ಪ್ರಮೋದ ಸಾವಂತ್ ನೇತೃತ್ವದ ಬಿಜೆಪಿ ಕೈ ಹಿಡಿಯಲಿದ್ದಾರೆಯೇ? ಎಂಬ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.