ಚಾಮರಾಜನಗರದಲ್ಲಿ ಒಂದು ತಿಂಗಳು ಗಣಿಗಾರಿಕೆ ಸ್ಥಗಿತ: ವಿ.ಸೋಮಣ್ಣ
ದುರಂತ ನಡೆದಿರುವ ಮಡಹಳ್ಳಿ ಕ್ವಾರಿ ಗಣಿಗಾರಿಕೆ ಶಾಶ್ವತ ಸ್ಥಗಿತ
Team Udayavani, Mar 5, 2022, 4:43 PM IST
ಗುಂಡ್ಲುಪೇಟೆ(ಚಾಮರಾಜನಗರ): ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ಗಣಿಗಾರಿಕೆಯನ್ನು ಒಂದು ತಿಂಗಳ ಕಾಲ ಸ್ಥಗಿತಗೊಳಿಸಲಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರಲ್ಲಿ ನಡೆದ ಪತ್ರಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನೇತೃತ್ವದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ತಂಡ ರಚಿಸಲಾಗಿದ್ದು, ಅಕ್ರಮ-ಸಕ್ರಮವಾಗಿ ನಡೆಯುತ್ತಿರುವ ಎಲ್ಲಾ ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು ಬದ್ಧವಾಗಿದ್ದರೆ ಅವುಗಳಿಗೆ ಅವಕಾಶ ನೀಡಲಾಗುತ್ತದೆ. ಅಕ್ರಮ ಕಂಡು ಬಂದರೆ ಸ್ಥಳದಲ್ಲೆ ಅಂತವರ ಪರವಾನಗಿ ರದ್ದು ಪಡಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ : ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ: 10 ಗಂಟೆ ಕಾರ್ಯಾಚರಣೆ ನಂತರ ಓರ್ವನ ಶವ ಹೊರಕ್ಕೆ
ಜಿಲ್ಲೆಯ ಎಲ್ಲಾ ಗಣಿಗಾರಿಕಾ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸಮಿತಿ ತಂಡ ನಾಳೆಯಿಂದ ತೆರಳಲಿದ್ದು, ಇದರಲ್ಲಿ ಯಾರೆ ಇದ್ದರು, ಎಷ್ಟೇ ಪ್ರಭಾವಿಗಳಾಗಿದ್ದರೂ ಸಹ ಹಸ್ತಕ್ಷೇಪ ಇರುವುದಿಲ್ಲ. ಕಾನೂನು ಚೌಕಟ್ಟಿನಡಿಯಲ್ಲಿಯೇ ಕ್ರಮ ವಹಿಸಲಾಗುವುದು ಎಂದರು.
ಮಡಹಳ್ಳಿ ಕ್ವಾರಿ ಗಣಿಗಾರಿಕೆ ಶಾಶ್ವತ ಸ್ಥಗಿತ
ಮಡಹಳ್ಳಿ ಕ್ವಾರಿ ಪರವಾನಗಿ ಪಡೆದಿದ್ದ ಮಹೇಂದ್ರಪ್ಪ ಅವರ ಲೈಸನ್ಸ್ ರದ್ದು ಗೊಳಿಸಲಾಗಿದ್ದು, ಶಾಶ್ವತವಾಗಿ ಈ ಸ್ಥಳದಲ್ಲಿ ಗಣಿಗಾರಿಕೆಗೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ