ಒಂದು ದೇಶ, ಒಂದು ಚುನಾವಣೆ ಸನ್ನಿಹಿತ? ತ್ರಿಸ್ತರ ಏಕಕಾಲ ಚುನಾವಣೆ


Team Udayavani, Aug 30, 2020, 6:50 AM IST

ಒಂದು ದೇಶ, ಒಂದು ಚುನಾವಣೆ ಸನ್ನಿಹಿತ? ತ್ರಿಸ್ತರ ಏಕಕಾಲ ಚುನಾವಣೆ

ಹೊಸದಿಲ್ಲಿ: ಬಿಜೆಪಿಯ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ “ಒಂದು ದೇಶ -ಒಂದು ಚುನಾವಣೆ’ಯ ದಿನಗಳು ಸನ್ನಿಹಿತವಾಗುತ್ತಿವೆಯೇ?

ಇತ್ತೀಚಿನ ಬೆಳವಣಿಗೆಗಳು ಇದಕ್ಕೆ ಪೂರಕವಾಗಿವೆ. ಆ.13ರಂದು ಪ್ರಧಾನಿ ಕಾರ್ಯಾಲಯವು “ದೇಶಕ್ಕೊಂದೇ ಮತದಾರರ ಪಟ್ಟಿ’ ತಯಾರಿಸುವ ಸಲುವಾಗಿ ಅಧಿಕಾರಿಗಳ ಸಭೆ ನಡೆಸಿದೆ. ಸದ್ಯ ಕೇಂದ್ರ ಚುನಾವಣ ಆಯೋಗ ಮತ್ತು ರಾಜ್ಯ ಚುನಾವಣ ಆಯೋಗಗಳು ಪ್ರತ್ಯೇಕವಾಗಿ ಮತದಾರರ ಪಟ್ಟಿ ತಯಾರಿಸುತ್ತಿವೆ. ದೇಶಕ್ಕೊಂದೇ ಮತದಾರರ ಪಟ್ಟಿ ಸಿದ್ಧವಾದರೆ ಒಂದು ದೇಶ, ಒಂದು ಚುನಾವಣೆ ಸುಲಭ ಎಂಬ ಉದ್ದೇಶದಿಂದ ಸಭೆ ನಡೆಸಲಾಗಿದೆ.

ಪ್ರಧಾನಮಂತ್ರಿಗಳ ಪ್ರಿನ್ಸಿಪಲ್‌ ಸೆಕ್ರೆಟರಿ ಪಿ.ಕೆ.ಮಿಶ್ರಾ ಅವರ ನೇತೃತ್ವದಲ್ಲಿ ಈ ಸಭೆ ನಡೆದಿದೆ. ಸಭೆಯಲ್ಲಿ ಸಂಪುಟ ಕಾರ್ಯದರ್ಶಿ ರಾಜೀವ್‌ ಚೌಬಾ, ಸಂಸದೀಯ ಕಾರ್ಯದರ್ಶಿ ಜಿ. ನಾರಾಯಣ ರಾಜು, ಪಂ.ರಾಜ್‌ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಮತ್ತು ಕೇಂದ್ರ ಚುನಾವಣ ಆಯೋಗದ ಮಹಾ ಕಾರ್ಯದರ್ಶಿ ಉಮೇಶ್‌ ಸಿನ್ಹಾ ಭಾಗಿಯಾಗಿದ್ದರು.

ಒಂದು ವೇಳೆ ದೇಶಕ್ಕೊಂದೇ ಮತದಾರರ ಪಟ್ಟಿ ಸಿದ್ಧವಾದರೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶಕ್ಕೆ ಇನ್ನಷ್ಟು ಸನಿಹವಾದಂತಾಗುತ್ತದೆ ಎಂಬುದು ಕೇಂದ್ರ ಸರಕಾರದ ಚಿಂತನೆ.

ಎರಡು ಆಯ್ಕೆಗಳ ಬಗ್ಗೆ ಚರ್ಚೆ
ಈ ಸಭೆಯಲ್ಲಿ ಪ್ರಮುಖವಾಗಿ ಎರಡು ಆಯ್ಕೆಗಳ ಬಗ್ಗೆ ಚರ್ಚೆಯಾಗಿದೆ. ಒಂದು, ಆರ್ಟಿಕಲ್‌ 243 ಕೆ ಮತ್ತು 243 ಝಡ್ಎಗೆ ಸಾಂವಿಧಾನಿಕ ತಿದ್ದುಪಡಿ ತರುವುದು. ಈ ಮೂಲಕ ದೇಶದ ಎಲ್ಲ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನೇ ಬಳಕೆ ಮಾಡುವಂತೆ ಕಡ್ಡಾಯ ಮಾಡುವುದು.

ಎರಡು, ರಾಜ್ಯ ಸರಕಾರಗಳ ಮನವೊಲಿಸಿ, ಕೇಂದ್ರ ಚುನಾವಣ ಆಯೋಗ ರೂಪಿಸುವ ಮತದಾರರ ಪಟ್ಟಿಯನ್ನೇ ಎಲ್ಲ ಚುನಾವಣೆಗಳಲ್ಲಿ ಬಳಸುವಂತೆ ಮಾಡುವುದು.

ಏನಿದು 243 ಕೆ ಮತ್ತು 243 ಝಡ್‌ಎ?
ಈ ಎರಡೂ ಪರಿಚ್ಛೇದಗಳು ರಾಜ್ಯ ಚುನಾವಣ ಆಯೋಗಗಳಿಗೆ ವಿಶೇಷ ಅಧಿಕಾರ ನೀಡಿವೆ. ರಾಜ್ಯ ಚುನಾವಣ ಆಯೋಗವು ಸ್ಥಳೀಯ ಸಂಸ್ಥೆಗಳಾದ ಪಾಲಿಕೆ ಮತ್ತು ಪಂಚಾಯತ್‌ಗಳಿಗೆ ಚುನಾವಣೆ ನಡೆಸುತ್ತದೆ. ಹೀಗಾಗಿ ರಾಜ್ಯ ಚು. ಆಯೋಗಗಳಿಗೆ ಮತದಾರರ ಪಟ್ಟಿ ರೂಪಿಸುವ ಸಲುವಾಗಿ ನಿರ್ದೇಶನ ನೀಡುವ, ನಿಯಂತ್ರಿಸುವ ಮತ್ತು ಚುನಾವಣೆ ನಡೆಸುವ ಅಧಿಕಾರ ನೀಡಲಾಗಿದೆ. ಹೀಗಾಗಿಯೇ ರಾಜ್ಯ ಆಯೋಗಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪ್ರತ್ಯೇಕ ಮತದಾರ ಪಟ್ಟಿ ರೂಪಿಸುತ್ತವೆ.

ಕೆಲವು ರಾಜ್ಯಗಳಲ್ಲಿ ಮಾತ್ರ
ಕರ್ನಾಟಕ ಸಹಿತ ಕೆಲವು ರಾಜ್ಯಗಳು ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಕೇಂದ್ರ ಚುನಾವಣ ಆಯೋಗದ ಮತದಾರರ ಪಟ್ಟಿಯನ್ನೇ ಬಳಸಿಕೊಳ್ಳುತ್ತವೆ. ಆದರೆ ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌ ಮತ್ತು ಕೆಲವು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಮತದಾರರ ಪಟ್ಟಿ ಮಾಡಿಕೊಳ್ಳುತ್ತವೆ.

ರಾಜ್ಯಗಳ ಮನವೊಲಿಕೆ
ಆ. 13ರಂದು ನಡೆದ ಸಭೆಯಲ್ಲಿ ಕೇಂದ್ರ ಚುನಾವಣ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯನ್ನೇ ಬಳಕೆ ಮಾಡುವಂತೆ ರಾಜ್ಯ ಚುನಾವಣ ಆಯೋಗಗಳ ಮನವೊಲಿಕೆ ಮಾಡುವ ನಿಲುವು ವ್ಯಕ್ತಪಡಿಸಲಾಗಿದೆ. ಪಿ.ಕೆ. ಮಿಶ್ರಾ ಅವರು ಕ್ಯಾಬಿನೆಟ್‌ ಕಾರ್ಯದರ್ಶಿ ರಾಜೀವ್‌ ಚೌಬಾ ಅವರಿಗೆ ರಾಜ್ಯ ಸರಕಾರಗಳನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.