ರಾಜ್ಯದಲ್ಲಿ 667 ಮಂದಿಗೆ ಒಬ್ಬ ಪೊಲೀಸ್‌ ; ಪೊಲೀಸ್‌ ಇಲಾಖೆಯಲ್ಲಿ ಸಿಬಂದಿ ಕೊರತೆ


Team Udayavani, Nov 16, 2022, 7:20 AM IST

ರಾಜ್ಯದಲ್ಲಿ 667 ಮಂದಿಗೆ ಒಬ್ಬ ಪೊಲೀಸ್‌ ; ಪೊಲೀಸ್‌ ಇಲಾಖೆಯಲ್ಲಿ ಸಿಬಂದಿ ಕೊರತೆ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 15,099 ಹುದ್ದೆಗಳು ಖಾಲಿ ಇದ್ದು, 667 ನಾಗರಿಕರಿಗೆ ಒಬ್ಬರಂತೆ ಪೊಲೀಸ್‌ ಇದ್ದಾರೆ.ರಾಜ್ಯದ 6.61 ಕೋಟಿ ಜನ ಸಂಖ್ಯೆಗೆ ಕೇವಲ 1,12,429 ಪೊಲೀಸ್‌ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 97,330 ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನಸಂಖ್ಯೆಗೆ ಹೋಲಿಸಿದರೆ ಪೊಲೀಸರ ಸಂಖ್ಯೆ ತೀರಾ ಕಡಿಮೆಯಿದೆ. ಪರಿಣಾಮವಾಗಿ ಅಪರಾಧ ಪ್ರಕರಣಗಳ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇ. 5ರಿಂದ 10ರಷ್ಟು ಏರಿಕೆಯಾಗುತ್ತಿದೆ.

ಮಂಜೂರಾದ ಹುದ್ದೆಗಳಿಗೂ ಕರ್ತವ್ಯದಲ್ಲಿರುವ ಪೊಲೀಸರ ಸಂಖ್ಯೆಗೂ ಅಜಗಜಾಂತರವಿದೆ. ಸರಕಾರದ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ. ರಾಷ್ಟ್ರೀಯ ಮಾನದಂಡದ ಪ್ರಕಾರ ದೇಶದ 1 ಲಕ್ಷ ಜನರಿಗೆ 198 ಪೊಲೀಸರು ಇರಬೇಕು; ಆದರೆ ರಾಜ್ಯದಲ್ಲಿ ಇಷ್ಟು ಜನಸಂಖ್ಯೆಗೆ 168 ಪೊಲೀಸರಿದ್ದಾರೆ. 86,702 ಪುರುಷ ಪೊಲೀಸ್‌ ಸಿಬಂದಿಯಿದ್ದರೆ, 10,628 ಮಹಿಳಾ ಸಿಬಂದಿ ಇದ್ದಾರೆ.

ಐಪಿಎಸ್‌ ಹುದ್ದೆಗಳೂ ಖಾಲಿ
ಐಜಿಪಿ, ಎಡಿಜಿಪಿ, ಎಸ್‌ಪಿ ಸೇರಿ ಐಪಿಎಸ್‌ ಮಟ್ಟದ 38 ಹುದ್ದೆಗಳು ಖಾಲಿ ಇವೆ. ಹಲವು ವರ್ಷಗಳಿಂದ ಖಾಲಿಯಿರುವ 10,449 ಕಾನ್‌ಸ್ಟೆಬಲ್‌, 1,100 ಪಿಎಸ್‌ಐ ಹುದ್ದೆ ಭರ್ತಿ ಮಾಡುವತ್ತ ಸರಕಾರ ಗಮನಹರಿಸಿಲ್ಲ. ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ 1,254 ಇನ್‌ಸ್ಪೆಕ್ಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದರೆ, 23 ಹುದ್ದೆ ಖಾಲಿ ಇದೆ. ಡಿಟೆಕ್ಟಿವ್‌ ಹಾಗೂ ಎಸ್‌ಡಿಆರ್‌ಆರ್‌ನಲ್ಲಿ ಮಂಜೂರಾಗಿರುವ 48 ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ನೇಮಕಾತಿಯೇ ನಡೆಸಿಲ್ಲ. ಎಫ್ಪಿಬಿಯಲ್ಲಿ 30 ಇನ್‌ಸ್ಪೆಕ್ಟರ್‌ ನೇಮಕ ಮಾಡಬೇಕಿದೆ.

ತಳಹಂತದ ಸಿಬಂದಿ ಕೊರತೆ
ಅಪರಾಧ ಪ್ರಕರಣ ನಡೆದ ಕೂಡಲೇ ಸ್ಥಳಕ್ಕೆ ತೆರಳಿ ಪ್ರಕರಣದ ಸಂಪೂರ್ಣ ಮಾಹಿತಿ ಕಲೆ ಹಾಕುವುದು, ತನಿಖೆ ವೇಳೆ ಸಾಕ್ಷ್ಯ ಕಲೆ ಹಾಕು ವುದು, ಆರೋಪಿಗಳನ್ನು ಬಂಧಿಸುವುದು ಮತ್ತಿತರ ಮಹತ್ತರ ವಾದ ಜವಾಬ್ದಾರಿಗಳು ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗ‌ಳ ಮೇಲಿರುತ್ತದೆ. ಇವರು ಕಲೆಹಾಕುವ ಮಾಹಿತಿ ಆಧರಿಸಿ ಸಬ್‌ಇನ್‌ಸ್ಪೆಕ್ಟರ್‌ ಗಳು ಸಂಪೂರ್ಣ ತನಿಖೆ ನಡೆಸಿ ಇನ್‌ಸ್ಪೆಕ್ಟರ್‌ ಅಥವಾ ಅದಕ್ಕಿಂತ ಮೇಲಿನ ಅಧಿಕಾರಿಗಳಿಗೆ ಪ್ರಕರಣದ ವರದಿ ಸಲ್ಲಿಸುತ್ತಾರೆ. ಕೆಳಹಂತದ ಸಿಬಂದಿ ಕೊರತೆಯಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ.

ಪೊಲೀಸ್‌ ಸಿಬಂದಿ ಕೊರತೆ ಹೋಗಲಾಡಿಸುವ ನಿಟ್ಟಿನಲ್ಲಿ ಖಾಲಿ ಇರುವ 3.5 ಸಾವಿರ ಎಪಿಸಿ ಹಾಗೂ 1,500 ಸಿಪಿಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಬಾಕಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
– ಡಾ| ಎಂ.ಎ. ಸಲೀಂ, ಎಡಿಜಿಪಿ (ಆಡಳಿತ)

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.