ಆನ್ಲೈನ್ ಕ್ಲಾಸ್ ನಡೆಯುತ್ತಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
Team Udayavani, Aug 17, 2021, 8:14 PM IST
ವಾಡಿ (ಚಿತ್ತಾಪುರ): ಕಾಲೇಜಿನಿಂದ ಬಿತ್ತರಗೊಳ್ಳುತ್ತಿದ್ದ ಆನ್ಲೈನ್ ಕ್ಲಾಸ್ ಆಲಿಸುತ್ತಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಚಿತ್ತಾಪುರ ತಾಲೂಕಿನ ವಾಡಿ (ಜಂಕ್ಷನ್) ಪಟ್ಟಣದಲ್ಲಿ ಸಂಭವಿಸಿದೆ.
ಪಟ್ಟಣದ ಬಿರ್ಲಾ ಕ್ವಾಟರ್ಸ್ ನಿವಾಸಿ, ಬೆಂಗಳೂರು ಬೇಕರಿ ವ್ಯಾಪಾರಿ ಗಿರೀಶ ಉಡುಪಾ ಅವರ ಪುತ್ರ ಗುರುಚರಣ್ ಉಡುಪಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಮೃತ ವಿದ್ಯಾರ್ಥಿ ಉಡುಪಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಿಯುಸಿ ದ್ವಿತೀಯ ವರ್ಷದಲ್ಲಿ ಓದುತ್ತಿದ್ದು, ಅಭ್ಯಾಸದಲ್ಲಿ ರ್ಯಾಂಕ್ ವಿದ್ಯಾರ್ಥಿ ಎನ್ನಲಾಗಿದೆ.
ಆನ್ಲೈನ್ ಕ್ಲಾಸ್ ಕೇಳಲು ಮನೆಯ ಒಳ ಕೋಣೆಯೊಳಗೆ ಹೋದಾತ ಎರಡು ತಾಸಿನ ಬಳಿಕ ಪೋಷಕರಿಗೆ ಫ್ಯಾನಿಗೆ ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ.
ಇದನ್ನೂ ಓದಿ :ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್ : ಮಹತ್ವದ ಸಭೆ ನಡೆಸಿದ ಮೋದಿ
ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ. ಮಂಗಳವಾರ ಪಟ್ಟಣದಲ್ಲಿ ಮೃತ ವಿದ್ಯಾರ್ಥಿಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ