ನಮ್ಮ ಭಾರತ್ ಬಂದ್ ಯಶಸ್ವಿಯಾಗಿದೆ, ರೈತರ ಪೂರ್ಣ ಬೆಂಬಲ ಸಿಕ್ಕಿದೆ: ರಾಕೇಶ್ ಟಿಕಾಯತ್
ಕಬ್ಬಿನ ಬೆಲೆಯನ್ನು 375ರಿಂದ 450 ರೂಪಾಯಿವರೆಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು.
Team Udayavani, Sep 27, 2021, 5:52 PM IST
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸೋಮವಾರ(ಸೆಪ್ಟೆಂಬರ್ 27) ಕರೆ ಕೊಟ್ಟಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
ಇದನ್ನೂ ಓದಿ:ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ
ಬಂದ್ ಕರೆಗೆ ಇಡೀ ದೇಶಾದ್ಯಂತ ರೈತರು ಪೂರ್ಣ ಪ್ರಮಾಣದಲ್ಲಿ ಬೆಂಬಲ ನೀಡಿರುವುದಾಗಿ ಟಿಕಾಯತ್ ಹೇಳಿದರು. ನಮ್ಮ ಭಾರತ್ ಬಂದ್ ಯಶಸ್ವಿಯಾಗಿದೆ. ನಮಗೆ ರೈತರು ಪೂರ್ಣ ಪ್ರಮಾಣದ ಬೆಂಬಲ ನೀಡಿದ್ದಾರೆ. ಜನರಿಗೆ ತೊಂದರೆಯಾಗಬಾರದೆಂದು ನಾವು ರಸ್ತೆ ತಡೆ, ಸಾರಿಗೆ ಸಂಚಾರಕ್ಕೆ ತಡೆಯೊಡ್ಡಿಲ್ಲ ಎಂದು ತಿಳಿಸಿದ್ದಾರೆ.
ನಾವು ಸರ್ಕಾರದ ಜತೆ ಮಾತುಕತೆ ನಡೆಸಲು ಸಿದ್ದರಾಗಿದ್ದೇವೆ. ಆದರೆ ಈಗ ಮಾತುಕತೆಗೆ ಅವಕಾಶ ದೊರಕಿಲ್ಲ. ಅಲ್ಲದೇ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಕಬ್ಬಿನ ಬೆಲೆಯನ್ನು ಹೆಚ್ಚಳ ಮಾಡಲು ವಿಫಲವಾಗಿದೆ ಎಂದು ಟಿಕಾಯತ್ ಆರೋಪಿಸಿದರು.
ಬಿಜೆಪಿ ಪ್ರಣಾಳಿಕೆಯಲ್ಲಿ ಕಬ್ಬಿನ ಬೆಲೆಯನ್ನು 375ರಿಂದ 450 ರೂಪಾಯಿವರೆಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈಗ ಕೇವಲ 25 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ ಎಂದು ಟಿಕಾಯತ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ