ಪಿಒಕೆ, ಗಿಲ್ಗಿಟ್ ಪ್ರದೇಶ ಭಾರತಕ್ಕೆ ಸೇರಿದಾಗಲೇ ನಮ್ಮ ಸಂಕಲ್ಪ ಪೂರ್ಣ: ರಾಜನಾಥ್ ಸಿಂಗ್
ಭಾರತ, ಪಾಕಿಸ್ತಾನ ಇಬ್ಭಾಗವಾದ ನಂತರ ಪಾಕಿಸ್ತಾನ ತನ್ನ ನಿಜ ಬಣ್ಣವನ್ನು ಪ್ರದರ್ಶಿಸಿದೆ.
Team Udayavani, Oct 27, 2022, 2:56 PM IST
ಜಮ್ಮು-ಕಾಶ್ಮೀರ: ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಜಮ್ಮು-ಕಾಶ್ಮೀರದ ಎಲ್ಲಾ ಪ್ರದೇಶಗಳನ್ನು ನಾವು ವಾಪಸ್ ಪಡೆದ ನಂತರವೇ ನಮ್ಮ ಸಂಕಲ್ಪ ಪೂರ್ಣಗೊಳ್ಳಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದೆಹಲಿಗೆ ಬಿಜೆಪಿ ಬೆಟ್ಟದಷ್ಟು ಕಸದ ರಾಶಿ ಬಿಟ್ಟು ಬೇರೆ ಏನೂ ಕೊಡುಗೆ ಕೊಟ್ಟಿಲ್ಲ: ಕೇಜ್ರಿವಾಲ್
ಸಿಂಗ್ ಅವರು ಗುರುವಾರ (ಅಕ್ಟೋಬರ್ 27) ಬಡ್ಗಾಮ್ ನಲ್ಲಿ ಭಾರತೀಯ ಸೇನೆಯ 76ನೇ ಪದಾತಿ ದಳ ಆಯೋಜಿಸಿದ್ದ “ಶೌರ್ಯ ದಿನದ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ, ಜಮ್ಮು-ಕಾಶ್ಮೀರ(ಪಿಒಕೆ) ಪೂರ್ಣ ಭಾಗ ಸೇರಿದಂತೆ ಗಿಲ್ಗಿಟ್, ಬಾಲ್ಟಿಸ್ತಾನ್ ಪ್ರದೇಶವನ್ನು ಮರಳಿ ಪಡೆದ ನಂತರವಷ್ಟೇ ನಮ್ಮ ಸಂಕಲ್ಪಕ್ಕೆ ಅರ್ಥ ಬರಲಿದೆ ಎಂದರು.
ಭಾರತ, ಪಾಕಿಸ್ತಾನ ಇಬ್ಭಾಗವಾದ ನಂತರ ಪಾಕಿಸ್ತಾನ ತನ್ನ ನಿಜ ಬಣ್ಣವನ್ನು ಪ್ರದರ್ಶಿಸಿದೆ. ನಮಗೆ ಜಮ್ಮು-ಕಾಶ್ಮೀರದ ಮೇಲಿನ ದಾಳಿ ಹಾಗೂ ನುಸುಳುಕೋರರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನಡವಳಿಕೆಯನ್ನು ಊಹಿಸಲೂ ಸಾಧ್ಯವಿಲ್ಲ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ನಾವೀಗ ಜಮ್ಮು-ಕಾಶ್ಮೀರ ಮತ್ತು ಲಡಾಖ್ ನಲ್ಲಿ ಅಭಿವೃದ್ಧಿಯನ್ನು ಆರಂಭಿಸಿದ್ದೇವೆ. ನಾವು ಯಾವಾಗ ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಪ್ರದೇಶವನ್ನು ಮರಳಿ ಪಡೆದಾಗಲೇ ನಮ್ಮ ಗುರಿ ಸಾಧಿಸಿದಂತಾಗಲಿದೆ ಎಂದು ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್