ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳೂ ಗೆಲ್ಲುತ್ತಾರೆ: ಬಿಎಸ್ ವೈ ವಿಶ್ವಾಸ
Team Udayavani, Jun 10, 2022, 9:53 AM IST
ಬೆಂಗಳೂರು: ಲೆಹರ್ ಸಿಂಗ್ ಸೇರಿ ತಮ್ಮ ಪಕ್ಷದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ.ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಬಿಜೆಪಿಯಿಂದ ಯಾವುದೇ ಅಡ್ಡಮತದಾನ ಆಗುವುದಿಲ್ಲ. ಸಿದ್ದರಾಮಯ್ಯನವರ ಹೇಳಿಕೆಗೆ ಯಾವುದೇ ಮಹತ್ವ ಬೇಡ ಎಂದು ಹೇಳಿದ್ದಾರೆ.
ಈ ಮಧ್ಯೆ ನಿರ್ಮಲಾ ಸೀತಾರಾಮನ್ ಅವರಿಗೆ ನಿಗದಿಯಾಗಿದ್ದ 46 ಮತಗಳು ಈಗಾಗಲೇ ಚಲಾವಣೆಯಾಗಿದ್ದು, ಎರಡನೇ ಪ್ರಾಶಸ್ತ್ಯದ ಮತಗಳ ಪೈಕಿ 46 ಮತಗಳನ್ನು ಲೆಹರ್ ಸಿಂಗ್ ಪರ ಬಿಜೆಪಿ ಶಾಸಕರು ಚಲಾಯಿಸಿದ್ದಾರೆ.
ಮತದಾನ ಆರಂಭ: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಜೆಡಿಎಸ್ ನ ಎಚ್ ಡಿ ರೇವಣ್ಣ ಮೊದಲ ಮತದಾನ ಮಾಡಿದರು.
ಅಭಯ ಪಾಟೀಲ್, ಬಸವರಾಜ್ ದದ್ದಲ್, ಕುಸುಮಾ ಶಿವಳ್ಳಿ, ಟಿ ಡಿ ರಾಜೇಗೌಡ, ನೆಹರು ಓಲೆಕಾರ್, ಬೈರತಿ ಸುರೇಶ್, ಸಚಿವ ಪ್ರಭು ಚೌಹಾಣ್, ಸುರೇಶ್ ಕುಮಾರ್, ಅಪ್ಪಚ್ಚು , ವೆಂಕಟರಮಣಪ್ಪ, ರಾಜೇಶ್ ನಾಯಕ್, ದುರ್ಯೋಧನ ಐಹೊಳೆ, ಅಮೃತ ದೇಸಾಯಿ ಮತದಾನ ಮಾಡಿದರು.
ಇದನ್ನೂ ಓದಿ:ಅಡ್ಡಮತದಾನ ಮಾಡಲ್ಲ: ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್
ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಈಶ್ವರಪ್ಪ, ಸಚಿವರಾದ ಆರಗ ಜ್ಞಾನೇಂದ್ರ, ಶಶಿಕಲಾ ಜೊಲ್ಲೆ, ಮುನಿರತ್ನ, ಡಾ.ಕೆ ಸುಧಾಕರ್, ಮಾಧುಸ್ವಾಮಿ ಮತದಾನ ಮಾಡಿದರು.
ನಿರ್ಮಲಾ ಸೀತಾರಮನ್ ಪರ 46 ಮತ ಚಲಾವಣೆಯಾಗಿದೆ. ಹೀಗಾಗಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್