ಮ್ಯಾನ್ಮಾರ್: ಸೇನಾ ದಾಳಿಗೆ 500ಕ್ಕೂ ಹೆಚ್ಚು ಬಲಿ
Team Udayavani, Mar 30, 2021, 9:00 PM IST
ಯಂಗೊನ್: ಮ್ಯಾನ್ಮಾರ್ನಲ್ಲಿ ಸೇನೆಯ ವಿರುದ್ಧದ ಪ್ರತಿಭಟನೆಗಳು ತೀವ್ರಗೊಂಡಿದ್ದು, ಪ್ರತಿಭಟನಾಕಾರರ ಮೇಲೆ ಸೇನೆ ನಡೆಸಿರುವ ಗೋಲಿಬಾರ್ಗೆ ಈವರೆಗೆ 500ಕ್ಕೂ ಹೆಚ್ಚು ಸಾವು ಸಂಭವಿದೆ ಎಂದು ಅಸಿಸ್ಟನ್ಸ್ ಅಸೋಸಿಯೇಷನ್ ಫಾರ್ ಪೊಲಿಟಿಕಲ್ ಪ್ರಿಸನರ್ಸ್ (ಎಎಪಿಪಿ) ತಿಳಿಸಿದೆ.
ಮುಂದುವರಿದ ಗಲಭೆಗಳನ್ನು ಹತ್ತಿಕ್ಕಲು ಸೋಮವಾರದಂದು ಸೇನೆ ನಡೆಸಿದ ಗೋಲಿಬಾರ್ಗೆ 14 ಜನರು ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸಾವುಗಳ ಸಂಖ್ಯೆ 510ಕ್ಕೇರಿದೆ ಎಂದು ಸಂಸ್ಥೆ ತಿಳಿಸಿದೆ.
ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ: ಮ್ಯಾನ್ಮಾರ್ನ ದಂಗೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸುತ್ತಿರುವ ಅಲ್ಲಿನ ನಿರಾಶ್ರಿತರಿಗೆ ಮಾನವೀಯ ದೃಷ್ಟಿಯಿಂದ ವಸತಿ, ಊಟ ಹಾಗೂ ವೈದ್ಯಕೀಯ ಸೌಕರ್ಯಗಳನ್ನು ನೀಡುವುದಾಗಿ ಮಣಿಪುರ ಸರ್ಕಾರ ಪ್ರಕಟಿಸಿದೆ.
ಇದನ್ನೂ ಓದಿ :ಸಕಲೇಶಪುರ : ರೈಲು ಹಳಿಗಳ ಮೇಲೆ ಒಂಟಿಸಲಗ ಓಡಾಟ! ಜನರಲ್ಲಿ ಆತಂಕ
ಇತ್ತೀಚೆಗೆ, ಮ್ಯಾನ್ಮಾರ್ ನಿರಾಶ್ರಿತರಿಗೆ ಯಾವುದೇ ಸೌಲಭ್ಯ ನೀಡಕೂಡದೆಂದು ತಾವು ಹೊರಡಿಸಿದ್ದ ಆದೇಶವನ್ನು ಹಿಂಪಡೆಯುತ್ತಿರುವುದಾಗಿ ಸರ್ಕಾರ ತಿಳಿಸಿದೆ. ಈ ಬಗ್ಗೆ ವಿವರಣೆ ನೀಡಿರುವ ಮಣಿಪುರ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜ್ಞಾನ ಪ್ರಕಾಶ್, ನಿರಾಶ್ರಿತರಿಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಮಣಿಪುರದ ಇಂಫಾಲ್ನಲ್ಲಿ ಕಲ್ಪಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ