ಆಕ್ಸಿಜನ್ ಅಭಾವ : ದಿಲ್ಲಿ, ಪಂಜಾಬ್, ಮಹಾರಾಷ್ಟ್ರದ ಆಸ್ಪತ್ರೆಗಳಲ್ಲಿ ಮತ್ತೆ 33 ಮಂದಿ ಸಾವು
Team Udayavani, Apr 24, 2021, 10:20 PM IST
ಹೊಸದಿಲ್ಲಿ : ಪ್ರಾಣವಾಯುವಿನ ಅಭಾವದಿಂದ ಆಸ್ಪತ್ರೆಗಳಲ್ಲಿ ಸ್ಥಿತಿ ಕೈಮೀರಿ ಹೋಗುತ್ತಿದ್ದು, ಆಮ್ಲಜನಕ ಸಿಗದೆ ಶನಿವಾರ ಮತ್ತೆ 33 ಮಂದಿ ಅಸುನೀಗಿದ್ದಾರೆ.
ದಿಲ್ಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ 25 ಮಂದಿ, ಪಂಜಾಬ್ನ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ 6 ರೋಗಿಗಳು ಸಾವಿಗೀಡಾಗಿದ್ದಾರೆ. ಗೋಲ್ಡನ್ ಆಸ್ಪತ್ರೆಗೆ ಸರಕಾರವು ಕಳುಹಿಸಿದ್ದ 3.5 ಮೆ. ಟನ್ ಆಮ್ಲಜನಕ ಶುಕ್ರವಾರ ಸಂಜೆ 5ಕ್ಕೆ ತಲುಪಬೇಕಿತ್ತು. ಆದರೆ ಟ್ಯಾಂಕರ್ ತಲುಪುವಾಗ ಮಧ್ಯರಾತ್ರಿಯಾಗಿದ್ದು, ಅಷ್ಟರಲ್ಲಿ ಆಮ್ಲಜನಕ ಖಾಲಿಯಾಗಿ 25 ಮಂದಿ ಅಸುನೀಗಿದರು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಇಬ್ಬರ ಸಾವು
ಬೀಡ್ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ದುಷ್ಕರ್ಮಿಯು ರೋಗಿಗಳಿಗೆ ಆಮ್ಲಜನಕ ಪೂರೈಕೆಯಾಗುತ್ತಿದ್ದ ಸಿಲಿಂಡರ್ನ ತೆರಪನ್ನು ಬಂದ್ ಮಾಡಿದ ಕಾರಣ ಇಬ್ಬರು ಅಸುನೀಗಿದ್ದಾರೆ.
“ಆಮ್ಲಜನಕ ಪೂರೈಕೆಗೆ ಅಡ್ಡಿ ಮಾಡಿದರೆ ಗಲ್ಲಿಗೆ’ ಇದು “ಅಲೆ’ ಅಲ್ಲ, “ಸುನಾಮಿ’: ದಿಲ್ಲಿ ಹೈಕೋರ್ಟ್
ಆಮ್ಲಜನಕ ಪೂರೈಕೆಗೆ ಯಾರಾದರೂ ಅಡ್ಡಿಪಡಿಸಿದ್ದು ಗೊತ್ತಾದರೆ ಅಂಥವರನ್ನು ಗಲ್ಲಿಗೇರಿಸುತ್ತೇವೆ. ಇಂಥ ಸಂಕಷ್ಟದ ಸಮಯವನ್ನು ದುರ್ಬಳಕೆ ಮಾಡಿಕೊಂಡ ಯಾರನ್ನೂ ನಾವು ಸುಮ್ಮನೆ ಬಿಡುವುದಿಲ್ಲ…
-ಇದು ದಿಲ್ಲಿ ಹೈಕೋರ್ಟ್ ಶನಿವಾರ ನೀಡಿದ ಕಠಿನ ಎಚ್ಚರಿಕೆ. ದಿಲ್ಲಿಯಲ್ಲಿ ಆಕ್ಸಿಜನ್ ಕೊರತೆ ಕುರಿತು ಆಸ್ಪತ್ರೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, ಈ ರೀತಿ ಆಕ್ರೋಶ ವ್ಯಕ್ತಪಡಿಸಿದೆ. ಜತೆಗೆ ಈಗ ಇರುವುದು ಕೊರೊನಾ “ಅಲೆ’ ಅಲ್ಲ, “ಸುನಾಮಿ’ ಎಂದೂ ಬಣ್ಣಿಸಿದೆ.
ಇದನ್ನೂ ಓದಿ :ಅಮೆರಿಕನ್ ಎಕ್ಸ್ಪ್ರೆಸ್ ಮತ್ತು ಡೈನರ್ಸ್ ಕ್ಲಬ್ ಕಾರ್ಡ್ಗಳ ಮಾರಾಟಕ್ಕೆ RBI ಕಡಿವಾಣ
ದಿಲ್ಲಿಗೆ ದಿನಕ್ಕೆ 480 ಮೆ.ಟನ್ ಆಮ್ಲಜನಕ ಸಿಗದಿದ್ದರೆ ಇಡೀ ವ್ಯವಸ್ಥೆ ಕುಸಿದುಬೀಳಲಿದೆ. ಇದಕ್ಕೆ ಕಳೆದೆರಡು ದಿನಗಳಲ್ಲಿ ನಡೆದ ದುರಂತಗಳೇ ಸಾಕ್ಷಿ ಎಂದು ಕೇಜ್ರಿವಾಲ್ ಸರಕಾರ ಕೋರ್ಟ್ಗೆ ಮಾಹಿತಿ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಈ ರೀತಿ ತೀವ್ರ ಎಚ್ಚರಿಕೆ ನೀಡಿದೆ. ಅಂಥ ಅಧಿಕಾರಿಗಳು ಅಥವಾ ವ್ಯಕ್ತಿಗಳ ಕುರಿತು ಕೇಂದ್ರ ಸರಕಾರಕ್ಕೂ ಮಾಹಿತಿ ನೀಡಿ, ಸರಕಾರವೂ ಕ್ರಮ ಕೈಗೊಳ್ಳಲಿ ಎಂದಿತು.
ಮೇ ಮಧ್ಯಭಾಗದಲ್ಲಿ ಸೋಂಕು ಉತ್ತುಂಗಕ್ಕೇರಲಿದ್ದು, ಏನೆಲ್ಲ ತಯಾರಿ ಮಾಡಿಕೊಂಡಿದ್ದೀರಿ ಎಂದು ಕೇಂದ್ರ ಸರಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ. ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರಧಾನಿ ಮೋದಿ ಸಹಿತ ಎಲ್ಲರೂ ಸೋಂಕು ನಿಯಂತ್ರಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಆಮ್ಲಜನಕ ಆಮದಿಗೂ ನಿರ್ಧರಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ