ನಿಯಂತ್ರಣ ತಪ್ಪಿ ಆವೆಮಣ್ಣಿನ ಹೊಂಡಕ್ಕೆ ಬಿದ್ದ ಭತ್ತದ ಕಟಾವು ಯಂತ್ರ ; ಚಾಲಕ ಅಪಾಯದಿಂದ ಪಾರು


Team Udayavani, Nov 8, 2020, 1:12 PM IST

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಭತ್ತದ ಕಟಾವು ಯಂತ್ರ ; ಚಾಲಕ ಅಪಾಯದಿಂದ ಪಾರು

ತೆಕ್ಕಟ್ಟೆ: ಇಲ್ಲಿನ ಕುಂದಾಪುರ ತಾಲೂಕಿನ ಕೆದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉಳ್ತೂರು ಸಮೀಪದ ಹಲೂ¤ರು ಕೃಷಿಭೂಮಿಯಲ್ಲಿ ಭತ್ತದ ಕಟಾವಿಗೆ ತೆರಳುತ್ತಿದ್ದ ಕಟಾವು ಯಂತ್ರ ಚಾಲಕನ ನಿಯಂತ್ರಣ ತಪ್ಪಿ ಆವೆಮಣ್ಣಿನ ಹೊಂಡಕ್ಕೆ ಬಿದ್ದು ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.

ತಮಿಳುನಾಡು ಮೂಲದ ರವಿ ಮಾಲಕತ್ವದ ಭತ್ತದ ಕಟಾವು ಯಂತ್ರವು ಉಳೂ¤ರು ಸುತ್ತಮುತ್ತಲ ಪರಿಸರದಲ್ಲಿನ ಕೃಷಿಭೂಮಿಯಲ್ಲಿ ಕಳೆದ ಹಲವು ದಿನಗಳಿಂದಲೂ ಕಾರ್ಯಚರಿಸುತ್ತಿದ್ದು, ಹಲೂ¤ರು ಭಾಗದ ಕೃಷಿಕ ಬಸವ ಮಡಿವಾಳ ಎನ್ನುವವರ ಕೃಷಿಭೂಮಿಯಲ್ಲಿನ ಕಟಾವು ಕಾರ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕೃಷಿಭೂಮಿಯ ಸಮೀಪದಲ್ಲಿಯೇ ಇರುವ ಅಪಾಯಕಾರಿ ಆವೆಮಣ್ಣಿನ (ಕೊಜೆ ಮಣ್ಣು) ಹೊಂಡಕ್ಕೆ ಆಯಾತಪ್ಪಿ ಉರುಳಿದೆ . ಪರಿಣಾಮ ಸಂಪೂರ್ಣ ವಾಗಿ ಕಟಾವು ಯಂತ್ರ ನೀರಿನಲ್ಲಿ ಮುಳುಗಡೆಯಾಗಿದ್ದು ಅದೃಷ್ಟವಶಾತ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಪರಿಸರದ ನೂರಾರು ರೈತರು ಸ್ಥಳಕ್ಕೆ ಧಾವಿಸಿ , ಕ್ರೇನ್‌ ಹಾಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಪ್ರಯತ್ನಿಸಿದ್ದರೂ ಕಟಾವು ಯಂತ್ರ ವನ್ನು ಮೇಲೆತ್ತಲು ಕಷ್ಟಸಾಧ್ಯವಾಯಿತು. ತದನಂತರ ಎರಡು ಹಿತಾಚಿ ಯಂತ್ರಗಳ ಸಹಾಯ ಹಾಗೂ ಸ್ಥಳೀಯ ನಿರಂತರ ಪ್ರಯತ್ನದಿಂದಾಗಿ ಮುಳುಗಡೆಯಾಗಿದ್ದ ಯಂತ್ರವನ್ನು ಮೇಲಕ್ಕೆ ಎತ್ತಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಕೃಷಿಕರಾದ ವಿಜಯ ಕುಮಾರ್‌ ಶೆಟ್ಟಿ ಹಲೂ¤ರು, ಸೀತಾರಾಮ ದೇವಾಡಿಗ, ಪ್ರತಾಪ್‌ಶೆಟ್ಟಿ ಉಳೂ¤ರು, ನಾಗು ಕುಲಾಲ್‌, ಸಂಜೀವ ಶೆಟ್ಟಿ , ಕೋಟಿ ಪೂಜಾರಿ, ಸಂಜೀವ ಶೆಟ್ಟಿ, ಬಸವ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ: ಟಿ.ಲೋಕೇಶ್‌ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.