ಅಂತಿಮ ಗಡುವು:ಅಪಾರ ಬೆಂಬಲಿಗರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಟ್ಟ ಇಮ್ರಾನ್, ಸೇನೆ ನಿಯೋಜನೆ

ಪೊಲೀಸರು ಮತ್ತು ಪಿಟಿಐ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿ ಹೇಳಿದೆ.

Team Udayavani, May 26, 2022, 11:50 AM IST

ಅಂತಿಮ ಗಡುವು:ಅಪಾರ ಬೆಂಬಲಿಗರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಟ್ಟ ಇಮ್ರಾನ್, ಸೇನೆ ನಿಯೋಜನೆ

ಇಸ್ಲಾಮಾಬಾದ್: ಆರು ದಿನದೊಳಗೆ ಚುನಾವಣೆ ಘೋಷಿಸಿ, ಇಲ್ಲದಿದ್ದಲ್ಲಿ ಇಡೀ ದೇಶದ ಜನರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಡುವುದಾಗಿ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ (ಮೇ 26) ಮಿಲಿಟರಿಯನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ರಾಜ್ಯಸಭಾ ಅಭ್ಯರ್ಥಿ ಆಯ್ಕೆ ಕಸರತ್ತು ಶುರು; ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಬಲ ಅಗತ್ಯ

ಇಮ್ರಾನ್ ಖಾನ್ ತನ್ನ ಅಪಾರ ಬೆಂಬಲಿಗರು, ಪಕ್ಷದ ಕಾರ್ಯಕರ್ತರ ಜತೆ ಇಸ್ಲಾಮಾಬಾದ್ ಗೆ ಮುತ್ತಿಗೆ ಹಾಕಲು ಬೃಹತ್ ಜಾಥಾದೊಂದಿಗೆ ಆಗಮಿಸುತ್ತಿರುವುದು ಪಾಕ್ ಪ್ರಧಾನಿ ಶೆಹ್ಬಾಜ್ ಶರೀಫ್ ನೇತೃತ್ವದ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಇಸ್ಲಾಮಾಬಾದ್ ಗೆ ಆಗಮಿಸಿದ್ದು, ರೆಡ್ ಝೋನ್ ರಕ್ಷಣೆಗಾಗಿ ಪಾಕಿಸ್ತಾನ ಸೇನೆ ಬೀಡು ಬಿಟ್ಟಿರುವುದಾಗಿ ವರದಿ ವಿವರಿಸಿದೆ.

ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಾಕಿಸ್ತಾನ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಸರ್ಕಾರ ಹೊರಡಿಸಿರುವ ಆದೇಶವನ್ನು ಟ್ವೀಟ್ ಮಾಡಿರುವುದಾಗಿ ವರದಿ ತಿಳಿಸಿದೆ.

ಕೆಂಪು ವಲಯ(ರೆಡ್ ಝೋನ್)ದಲ್ಲಿರುವ ಪ್ರಮುಖ ಸರ್ಕಾರಿ ಕಟ್ಟಡಗಳ ರಕ್ಷಣೆಗಾಗಿ ಪಾಕಿಸ್ತಾನ ಸರ್ಕಾರ ಸೇನೆಯನ್ನು ರವಾನಿಸಿರುವುದಾಗಿ ಸನಾವುಲ್ಲಾ ತಿಳಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿಗರು ರಾಜಧಾನಿ ಒಳಕ್ಕೆ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪಿಟಿಐ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿ ಹೇಳಿದೆ.

ಶೆಹ್ಬಾಜ್ ಶರೀಫ್ ನೇತೃತ್ವದ ಸರ್ಕಾರ ನೂತನ ಚುನಾವಣಾ ದಿನಾಂಕ ಘೋಷಿಸುವವರೆಗೂ ಇಸ್ಲಾಮಾಬಾದ್ ನ ಡಿ-ಚೌಕ್ ದಿಂದ ಬೆಂಬಲಿಗರು ಕದಲಬಾರದು ಎಂದು ಇಮ್ರಾನ್ ಖಾನ್ ಬುಧವಾರ ಎಚ್ಚರಿಕೆ ನೀಡಿರುವುದಾಗಿ ವರದಿ ವಿವರಿಸಿದೆ.

ನಿಜವಾದ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರತಿಯೊಬ್ಬ ಮಹಿಳೆಯರು, ಮಕ್ಕಳು ಮನೆಯಿಂದ ಹೊರಬಂದು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಇಮ್ರಾನ್ ಖಾನ್ ಮನವಿ ಮಾಡಿಕೊಂಡಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.

ಪಾಕಿಸ್ತಾನದ ಸುಪ್ರೀಂಕೋರ್ಟ್ ಕೂಡಾ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸದಂತೆ ಪಾಕ್ ಸರ್ಕಾರಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೇ ಇಸ್ಲಾಮಾಬಾದ್ ನ ಎಚ್-9 ಮೈದಾನದಲ್ಲಿ ಪಿಟಿಐ ಪಕ್ಷ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.

ಇಮ್ರಾನ್ ಖಾನ್ ನ ಸಾವಿರಾರು ಬೆಂಬಲಿಗರು, ವಿಪಕ್ಷಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದಲ್ಲಿ ಗಲಭೆ, ಹಿಂಸಾಚಾರ ನಡೆಯುವ ಸಾಧ್ಯತೆ ಇದ್ದು, ಮತ್ತೆ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗುವ ಸನ್ನಿವೇಶ ಎದುರಾಗಿರುವುದಾಗಿ ವರದಿ ವಿಶ್ಲೇಷಿಸಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.