ಚೀನ ಬೆನ್ನಲ್ಲೇ ಪಾಕ್‌ ಸ್ನೇಹಹಸ್ತ: ಎಲ್‌ಒಸಿಯಲ್ಲಿ ಕದನ ವಿರಾಮ


Team Udayavani, Feb 26, 2021, 7:00 AM IST

ಚೀನ ಬೆನ್ನಲ್ಲೇ ಪಾಕ್‌ ಸ್ನೇಹಹಸ್ತ: ಎಲ್‌ಒಸಿಯಲ್ಲಿ ಕದನ ವಿರಾಮ

ಜಮ್ಮು: ಚೀನದ ಬೆನ್ನಲ್ಲೇ ಪಾಕ್‌ ಭಾರತದೊಂದಿಗೆ ಸ್ನೇಹಹಸ್ತ ಚಾಚಲು ಮುಂದಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಭಾರತ- ಪಾಕ್‌ ಜಂಟಿಯಾಗಿ ಎಲ್ಒಸಿಯಲ್ಲಿ ಕದನ ವಿರಾಮ ಘೋಷಿಸಿದ್ದು, ಫೆ. 24ರ ಮಧ್ಯರಾತ್ರಿಯಿಂದ ಜಾರಿಗೊಂಡಿದೆ.

ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಯಲ್ಲಿ ಗುಂಡಿನ ಚಕಮಕಿ ಸಹಿತ ರಕ್ಷಣಾತ್ಮಕ ಹಿಂಸಾಚಾರ ತಗ್ಗಿಸುವ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ. 2003ರ ಕದನ ವಿರಾಮ ನಿಯಮಾವಳಿಗಳಿಗೆ ಮರುಬದ್ಧತೆ ನೀಡಲು ಭಾರತ ಮತ್ತು ಪಾಕ್‌ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಸಮ್ಮತಿಸಿದ್ದಾರೆ.

ಜಂಟಿ ಹೇಳಿಕೆ
“ಎಲ್‌ಒಸಿ ಸೇರಿದಂತೆ ವಿವಿಧ ವಲಯಗಳಲ್ಲಿ ಮುಕ್ತ, ಸ್ಪಷ್ಟ ಮತ್ತು ಸೌಹಾರ್ದಯುತ ವಾತಾವರಣ ಸೃಷ್ಟಿಸುವ ಸಂಬಂಧ ನಾವು ಪರಿಶೀಲನೆ ನಡೆಸಿದ್ದೇವೆ. ಎಲ್ಲ ಒಪ್ಪಂದಗಳು, ನಿಯಮಾವಳಿಗಳಿಗೆ ಬದ್ಧವಾಗಿರಲು ಎರಡೂ ರಾಷ್ಟ್ರಗಳು ಒಪ್ಪಿವೆ’ ಎಂದು ಜಂಟಿ ಹೇಳಿಕೆ ತಿಳಿಸಿದೆ.

ಭಾರತದ ಡಿಜಿಎಂಒ ಲೆ|ಜ| ಪರಮ್‌ಜಿತ್‌ ಸಿಂಗ್‌ ಸಂಘಾ, ಪಾಕಿಸ್ಥಾನದ ಮೇ|ಜ| ನೌಮಾನ್‌ ಝಕಾರಿಯಾ, “ಎಲ್‌ಒಸಿಯಲ್ಲಿ ಶಾಂತಿಗೆ ಭಂಗ ತರುವ, ಹಿಂಸಾಚಾರ ಪ್ರಚೋದಿಸುವ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಉಭಯ ರಾಷ್ಟ್ರಗಳು ಸುಸ್ಥಿರ ಶಾಂತಿ ಸ್ಥಾಪನೆಗೆ ಬದ್ಧವಾಗಿವೆ’ ಎಂದು ಘೋಷಿಸಿದ್ದಾರೆ.

ಭಾರತದ ಎಚ್ಚರಿಕೆ
“ಕದನ ವಿರಾಮ ಜಾರಿಯಾಗಿದ್ದರೂ ಕಣಿವೆಯಲ್ಲಿ ಉಗ್ರನಿಗ್ರಹ ಕಾರ್ಯಾಚರಣೆ ನಿಲ್ಲದು’ ಎಂದು ಭಾರತೀಯ ಸೇನೆ ಎಚ್ಚರಿಸಿದೆ.

ಸಂಧಾನದ ಹಿಂದೆ “ಅಜಿತ್‌’ ಸಾಹಸ 
ಚೀನದಂತೆ ಪಾಕ್‌ಗೆ ದಿಢೀರನೆ ಜ್ಞಾನೋದಯ ಮಾಡಿಸಿದ ವ್ಯಕ್ತಿ ರಾಷ್ಟ್ರೀಯ ಭದ್ರತ ಸಲಹೆಗಾರ ಅಜಿತ್‌ ದೋವಲ್‌! ಇಲ್ಲೂ ಅವರು ತಮ್ಮ ಗುಪ್ತಚರ ಚಾಣಾಕ್ಷತೆಯ ಅಸ್ತ್ರ ಪ್ರಯೋಗಿಸಿ, ಪಾಕ್‌ನ ಅತ್ಯುನ್ನತ ಅಧಿಕಾರಿಗಳ ಜತೆ ಸಂಧಾನ ಯಶಸ್ವಿಗೊಳಿಸಿದ್ದಾರೆ.  ಭಾರತ- ಪಾಕ್‌ ಜಂಟಿ ಹೇಳಿಕೆಗೆ ಒಂದೆರಡು ತಿಂಗಳು ಮುನ್ನ ಪಾಕ್‌ ರಾಷ್ಟ್ರೀಯ ಭದ್ರತ ವಿಭಾಗದ ವಿಶೇಷ ಸಹಾಯಕ ಅಧಿಕಾರಿ ಯೂಸುಫ್ ಜತೆ ದೋವಲ್‌ ಮಾತುಕತೆ ನಡೆಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಪಾಕ್‌ ಸೇನಾ ಮುಖ್ಯಸ್ಥ, “ಭಾರತದ ಜತೆಗೆ ಶಾಂತಿ ಹಸ್ತಚಾಚುವ ಸಮಯ ಇದು’ ಎಂದಿದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.