Pak ಜಿಂದಾಬಾದ್‌ ಘೋಷಣೆ ಪ್ರಕರಣ: ಪರಿಷತ್‌ ನಲ್ಲಿ ಕೋಲಾಹಲ, ರವಿಕುಮಾರ್‌ ಕೆಂಡಾಮಂಡಲ!

ಏಕವಚನದಲ್ಲಿ ಮಾತನಾಡಿದ್ರೆ ಸರಿ ಇರಲ್ಲ ಎಂದು ಎಚ್ಚರಿಕೆ

Team Udayavani, Feb 28, 2024, 12:46 PM IST

Pak ಜಿಂದಾಬಾದ್‌ ಘೋಷಣೆ ಪ್ರಕರಣ: ಪರಿಷತ್‌ ನಲ್ಲಿ ಕೋಲಾಹಲ, ರವಿಕುಮಾರ್‌ ಕೆಂಡಾಮಂಡಲ!

ಬೆಂಗಳೂರು: ರಾಜ್ಯಸಭೆ ಚುನಾವಣೆ ಗೆಲುವಿನ ನಂತರ ವಿಧಾನಸೌಧದ ಆವರಣದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ವಿಚಾರ ಬುಧವಾರ (ಫೆ.28) ವಿಧಾನಸಭೆ ಮತ್ತು ವಿಧಾನಪರಿಷತ್‌ ನಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ತೀವ್ರ ವಾಕ್ಸಮರ, ಕೋಲಾಹಲಕ್ಕೆ ಎಡೆಮಾಡಿಕೊಟ್ಟಿರುವ ಪ್ರಸಂಗ ನಡೆಯಿತು.

ಇದನ್ನೂ ಓದಿ:PakistanZindabad ಘೋಷಣೆ;ಉಡುಪಿ,ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಬಿಜೆಪಿಯತ್ನ

ವಿಧಾನಪರಿಷತ್‌ ನಲ್ಲಿ ಬಿಜೆಪಿಯ ಎನ್‌ ರವಿಕುಮಾರ್‌ ಅವರು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ವಿಚಾರ ಪ್ರಸ್ತಾಪಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌, ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಆಗ ಕಾಂಗ್ರೆಸ್‌ ನ ಸೈಯದ್‌ ನಾಸೀರ್ ಹುಸೇನ್, ಏಯ್‌ ಅವನ ಮುಚ್ಚಿಸಿ ಎಂದು ಏಕವಚನ ಪ್ರಯೋಗಿಸಿದ್ದು, ತೀವ್ರ ಕೋಲಾಹಲಕ್ಕೆ ಕಾರಣವಾಯಿತು.

ನಾಸೀರ್ ಹುಸೇನ್ ಏಕವಚನ ಪ್ರಯೋಗಿಸಿದ ಬೆನ್ನಲ್ಲೇ ಆಕ್ರೋಶಗೊಂಡ ರವಿಕುಮಾರ್‌ ಅವರು ಸ್ಥಳದಿಂದ ಎದ್ದು ಜಬ್ಬಾರ್‌ ಸ್ಥಳದತ್ತ ಮುನ್ನುಗ್ಗಲು ಯತ್ನಿಸಿದ್ದರು. ಆಗ ಮಾರ್ಷಲ್ಸ್‌ ಗಳು ಬಂದು ಬಿಜೆಪಿ ಶಾಸಕರನ್ನು ಸುತ್ತುವರಿದಿದ್ದರು. ಆಗ ರವಿಕುಮಾರ್‌ ಅವರು, ಏಕವಚನದಲ್ಲಿ ಮಾತನಾಡಿದ್ರೆ ಸರಿ ಇರಲ್ಲ ಎಂದು ಎಚ್ಚರಿಕೆ ಕೊಟ್ಟು, ವಾಗ್ದಾಳಿ ನಡೆಸಿದ್ದರು.

ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿ, ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸೋ ಹಂತಕ್ಕೆ ಹೋಗಿದ್ದು, ಮಾರ್ಷಲ್ಸ್‌ ಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುವಂತಾಗಿತ್ತು. ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು ಸಫಲವಾಗಿಲ್ಲವಾಗಿತ್ತು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ನ ಎಚ್‌ ಕೆ ಪಾಟೀಲ್‌ ಅವರು, ಕ್ಷಮೆಯಾಚಿಸುವಂತೆ ನಾಸೀರ್‌ ಮತ್ತು ರವಿಕುಮಾರ್‌ ಗೆ ಸಲಹೆ ನೀಡಿದ್ದರು. ಆದರೆ ನಾನೇನು ದೇಶದ್ರೋಹಿ ಮಾತನಾಡಿದ್ದೇನೆಯಾ, ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ ಎಂದರು. ಏತನ್ಮಧ್ಯೆ, ನಾಸೀರ್‌ ಹುಸೇನ್‌ ಮಾತನಾಡಿ, ನಾನೇನಾದರು ರವಿಕುಮಾರ್‌ ಅವರ ಮನಸ್ಸಿಗೆ ನೋವುಂಟು ಮಾಡುವ ಮಾತನಾಡಿದ್ದರೆ ಕ್ಷಮೆಯಾಚಿಸುವುದಾಗಿ ಹೇಳುವ ಮೂಲಕ ಕೋಲಾಹಲಕ್ಕೆ ತೆರೆಬಿದ್ದಿತ್ತು.

ವಿಧಾನಸಭೆಯಲ್ಲೂ ಕೋಲಾಹಲ:

ಪಾಕ್‌ ಪರ ಘೋಷಣೆ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತ್ತು. ಕಲಾಪ ಆರಂಭಕ್ಕೂ ಮುನ್ನ ಬಿಜೆಪಿ ಮುಖಂಡರು ರಾಷ್ಟ್ರಧ್ವಜ ಹಿಡಿದುಕೊಂಡು ವಿಧಾನಸಭೆಗೆ ಪ್ರವೇಶಿಸಿದ್ದರು. ಆದರೆ ಸ್ಪೀಕರ್‌ ಯುಟಿ ಖಾದರ್‌ ಅವರು ಆಕ್ಷೇಪವ್ಯಕ್ತಪಡಿಸಿ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ, ಕೋಲಾಹಲ ನಡೆದ ಪರಿಣಾಮ ಕಲಾಪವನ್ನು ಹತ್ತು ನಿಮಿಷಗಳ ಕಾಲ ಸ್ಪೀಕರ್‌ ಮುಂದೂಡಿದ್ದರು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.