ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?


Team Udayavani, Oct 21, 2021, 11:58 AM IST

imran-khan

ಲಾಹೋರ್ : ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ವಿಪಕ್ಷಗಳು ಬುಧವಾರ ಗಂಭೀರ ಆರೋಪವೊಂದನ್ನು ಮಾಡಿದ್ದು, ವಿದೇಶದಿಂದ ಬಂದಿದ್ದ 1 ಮಿಲಿಯನ್ ಯುಎಸ್ ಡಾಲರ್ ನ ವಾಚ್ ಸೇರಿದಂತೆ ದುಬಾರಿ ಉಡುಗೊರೆಗಳನ್ನು ಮಾರಾಟ ಮಾಡಿರುವ ಬಗ್ಗೆ ದೂರಲಾಗಿದೆ.

ಪಿಎಂಎಲ್ -ಎನ್ ಉಪಾಧ್ಯಕ್ಷರಾಗಿರುವ ಮರ್ಯಾಮ್ ನವಾಜ್ ಅವರು ಇಮ್ರಾನ್ ಖಾನ್ ದುಬಾರಿ ಉಡುಗೊರೆಗಳನ್ನು ಮಾರಾಟ ಮಾಡಿರುವುದಾಗಿ ಉರ್ದುವಿನಲ್ಲಿ ಟ್ವೀಟ್ ಮಾಡಿದ್ದಾರೆ.

‘ಖಲೀಫಾ ಹಜರತ್ ಒಮರ್ (ಪ್ರವಾದಿ ಮುಹಮ್ಮದ್ ಅವರ ಒಡನಾಡಿ) ಅವರ ಅಂಗಿ ಮತ್ತು ನಿಲುವಂಗಿಗೆ ಹೊಣೆಗಾರರಾಗಿದ್ದರು ನೀವು. ಮತ್ತೊಂದೆಡೆ,ಇಮ್ರಾನ್ ಖಾನ್ ತೋಶಾಖಾನಾದಿಂದ ವಿದೇಶಿ ಉಡುಗೊರೆಗಳನ್ನು ಲೂಟಿ ಮಾಡುತ್ತಿದ್ದೀರಿ. ನೀವು ಮದೀನಾ ರಾಜ್ಯವನ್ನು ಸ್ಥಾಪಿಸುವ ಬಗ್ಗೆ ಮಾತನಾಡುತ್ತಿದ್ದೀರಾ? ಒಬ್ಬ ವ್ಯಕ್ತಿ (ಖಾನ್) ಈ ಸೂಕ್ಷ್ಮವಲ್ಲದ, ಕಿವುಡ, ಮೂಕ ಮತ್ತು ಕುರುಡನಾಗುವುದು ಹೇಗೆ?’ ಎಂದು ಪ್ರಧಾನಿ ನವಾಜ್ ಷರೀಫ್ ಅವರ ಮಗಳನ್ನು ಪ್ರಶ್ನಿಸಿದ್ದಾರೆ.

‘ದುಬಾರಿ ವಾಚನ್ನು ಇಮ್ರಾನ್ ಖಾನ್ ಮಾರಾಟ ಮಾಡಿದ್ದಾರೆ. ಇದು ನಾಚಿಕೆಗೇಡು’ ಎಂದು ವಿಪಕ್ಷದ ಮೈತ್ರಿ ಪಕ್ಷವಾದ ಪಿಡಿಎಂ ಅಧ್ಯಕ್ಷ ಮೌಲಾನಾ ಫಜ್ಲುರ್ ರೆಹಮಾನ್ ಆರೋಪಿಸಿದ್ದಾರೆ.

ಇಮ್ರಾನ್ ಖಾನ್ ಗೆ ಗಲ್ಫ್ ದೇಶದ ರಾಜಕುಮಾರ ಉಡುಗೊರೆಯಾಗಿ ನೀಡಿದ್ದ 1 ಮಿಲಿಯನ್ ಯುಎಸ್ ಡಾಲರ್ ಮೌಲ್ಯದ ಕೈಗಡಿಯಾರವನ್ನು ದುಬೈನಲ್ಲಿ ಇಮ್ರಾನ್ ಖಾನ್ ಮಾರಾಟ ಮಾಡಿದ್ದಾರೆ ಎಂಬ ವರದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಪಿಎಂಎಲ್ -ಎನ್ ಪಂಜಾಬ್ ಅಧ್ಯಕ್ಷರಾಗಿರುವ ರಾಣಾ ಸನಾವುಲ್ಲಾ ಅವರು ಸುದ್ದಿಗೋಷ್ಠಿ ನಡೆಸಿ , ‘ಉಡುಗೊರೆಗಳನ್ನು ಮಾರಾಟ ಮಾಡಿ ಪಾಕಿಸ್ತಾನಕ್ಕೆ ನವಾಜ್ ಷರೀಫ್ ಕೆಟ್ಟ ಹೆಸರು ತರುತ್ತಿದ್ದಾರೆ’ ಎಂದು ಕಿಡಿ ಕಾರಿದ್ದಾರೆ .

ನವಾಜ್ ಷರೀಫ್ ಅವರ ರಾಜಕೀಯ ಸಂವಹನದ ವಿಶೇಷ ಸಹಾಯಕ ಡಾ. ಶಹಬಾಜ್ ಗಿಲ್ ಅವರು ಈ ಬಗ್ಗೆ ಸ್ಪಷಣೆ ನೀಡಿದ್ದು, ‘ಇತರ ರಾಷ್ಟ್ರಗಳ ಮುಖ್ಯಸ್ಥರಿಂದ ಪ್ರಧಾನಿ ಖಾನ್ ಪಡೆದಿರುವ ಉಡುಗೊರೆಗಳ ವಿವರಗಳ ಕುರಿತು ಗೌಪ್ಯತೆಯನ್ನು ಕಾಪಾಡಿಕೊಳ್ಳುಲಾಗಿದೆ. ಅದರ ಪಟ್ಟಿಗಳನ್ನು ಬಿಡುಗಡೆ ಮಾಡುವುದು ಮತ್ತು ಅವುಗಳನ್ನು ಇತರ ದೇಶಗಳ ಜೊತೆ ಹೋಲಿಸುವುದು, ವಿಶೇಷವಾಗಿ ಪಾಕಿಸ್ತಾನವು ಸಹೋದರ ಸಂಬಂಧಗಳನ್ನು ಹೊಂದಿರುವ ಇಸ್ಲಾಮಿಕ್ ದೇಶಗಳೊಂದಿಗೆ ಸೂಕ್ತವಲ್ಲ ಎಂದು ಪರಿಗಣಿಸಲಾಗುತ್ತದೆ’ ಎಂದಿದ್ದರು.

ಉಡುಗೊರೆಗಳನ್ನು ನಿಯಮಿತವಾಗಿ ದೇಶಗಳ ಮುಖ್ಯಸ್ಥರು ಅಥವಾ ವಿದೇಶ ಭೇಟಿಯ ಸಮಯದಲ್ಲಿ ಸಾಂವಿಧಾನಿಕ ಸ್ಥಾನಗಳನ್ನು ಹೊಂದಿರುವ ಅಧಿಕಾರಿಗಳ ನಡುವೆ ವಿನಿಮಯ ಮಾಡಲಾಗುತ್ತದೆ.

ಪಾಕಿಸ್ತಾನದ ಗಿಫ್ಟ್ ಡಿಪಾಸಿಟರಿ (ತೋಶಾಖಾನ) ನಿಯಮಗಳ ಪ್ರಕಾರ, ಈ ಉಡುಗೊರೆಗಳನ್ನು ಬಹಿರಂಗ ಹರಾಜಿನಲ್ಲಿ ಮಾರಾಟ ಮಾಡಬೇಕು, ಮತ್ತು ಅದು ದೇಶದ ಆಸ್ತಿಯಾಗಿ ಉಳಿಯಬೇಕಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.