ಭಯೋತ್ಪಾದಕ ಮುಖಂಡರ ಜತೆ ಐಎಸ್ ಐ ರಹಸ್ಯ ಸಭೆ: ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಚು
ಜಮ್ಮು-ಕಾಶ್ಮೀರದಲ್ಲಿ ಬೃಹತ್ ಪ್ರಮಾಣದ ದಾಳಿ ನಡೆಸಲು ಐಎಸ್ ಐ ಸಿದ್ಧತೆ ನಡೆಸುತ್ತಿದೆ.
Team Udayavani, Oct 15, 2021, 4:36 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಇತ್ತೀಚೆಗಷ್ಟೇ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಹಲವಾರು ಭಯೋತ್ಪಾದಕ ಸಂಘಟನೆಗಳ ಮುಖಂಡರ ಜತೆ ರಹಸ್ಯ ಮಾತುಕತೆ ನಡೆಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಇದನ್ನೂ ಓದಿ:ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?
ಐಎಸ್ ಐ ಅಧಿಕಾರಿಗಳು ಮತ್ತು ಭಯೋತ್ಪಾದಕ ಸಂಘಟನೆ ನಡುವೆ ನಡೆದ ರಹಸ್ಯ ಮಾತುಕತೆ ಬಗ್ಗೆ ಭಾರತದ ಗುಪ್ತಚರ ಇಲಾಖೆಗೆ ತಿಳಿದಿದ್ದು, ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿತ್ತು ಎಂದು ವರದಿ ವಿವರಿಸಿದೆ.
ಗುಪ್ತಚರ ಇಲಾಖೆಯ ಸಂದೇಶದಲ್ಲಿ, ಜಮ್ಮು-ಕಾಶ್ಮೀರದಲ್ಲಿ ಬೃಹತ್ ಪ್ರಮಾಣದ ದಾಳಿ ನಡೆಸಲು ಐಎಸ್ ಐ ಸಿದ್ಧತೆ ನಡೆಸುತ್ತಿದೆ. ಈ ದಾಳಿಯಲ್ಲಿ ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದ ಸಾವು ಸಂಭವಿಸಬೇಕೆಂದು ರಹಸ್ಯ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಹೇಳಿದೆ.
ಪೊಲೀಸರ ಜತೆ ಕಾರ್ಯನಿರ್ವಹಿಸುವ ಕಾಶ್ಮೀರಿಗಳು, ಭದ್ರತಾ ಪಡೆ, ಕಾಶ್ಮೀರಿ ಪಂಡಿತರು ಹಾಗೂ ಗುಪ್ತಚರ ಇಲಾಖೆಯ ಜನರನ್ನೂ ಕೊಲ್ಲಬೇಕೆಂದು ಸಭೆಯಲ್ಲಿ ಚರ್ಚಿಸಲಾಗಿತ್ತು. ಅಷ್ಟೇ ಅಲ್ಲ ಬಿಜೆಪಿ , ಆರ್ ಎಸ್ ಎಸ್ ಜನರನ್ನು ಗುರಿಯಾಗಿರಿಸಿ ದಾಳಿ ನಡೆಸಬೇಕೆಂದು ರಹಸ್ಯ ಸಭೆಯಲ್ಲಿ ಚರ್ಚಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ