ಮುಂಬೈ ತಂಡ ಸೇರಿದ ಪಾಂಡ್ಯ ಬ್ರದರ್


Team Udayavani, Mar 30, 2021, 6:50 AM IST

ಮುಂಬೈ ತಂಡ ಸೇರಿದ ಪಾಂಡ್ಯ ಬ್ರದರ್

ಮುಂಬಯಿ : ಇಂಗ್ಲೆಂಡ್‌ ವಿರುದ್ಧ ಏಕದಿನ ಸರಣಿ ವಶಪಡಿಸಿ ಕೊಂಡ ಬೆನ್ನಲ್ಲೇ ಟೀಮ್‌ ಇಂಡಿಯಾ ಆಟಗಾರರೆಲ್ಲ ಐಪಿಎಲ್‌ನತ್ತ ಗಮನ ಕೇಂದ್ರೀಕರಿಸ ತೊಡಗಿದ್ದಾರೆ. ಪಾಂಡ್ಯ ಬ್ರದರ್, ಸೂರ್ಯಕುಮಾರ್‌ ಯಾದವ್‌ ಅವರೆಲ್ಲ ಸೋಮವಾರ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡರು. ಇವರು 7 ದಿನಗಳ ಕ್ವಾರಂಟೈನ್‌ ಪೂರೈಸಿ ಅಭ್ಯಾಸಕ್ಕೆ ಅಣಿಯಾಗಲಿದ್ದಾರೆ. 2021ರ ಐಪಿಎಲ್‌ ಆರಂಭಕ್ಕೆ ಉಳಿದಿರುವುದು ಇನ್ನು 10 ದಿನ ಮಾತ್ರ.

ಹಾರ್ದಿಕ್‌ ಪಾಂಡ್ಯ ಮತ್ತು ಕೃಣಾಲ್‌ ಪಾಂಡ್ಯ ಇಂಗ್ಲೆಂಡ್‌ ಎದುರಿನ ಎಲ್ಲ 3 ಏಕದಿನ ಪಂದ್ಯ ಗಳಲ್ಲೂ ಕಾಣಿಸಿಕೊಂಡಿದ್ದರು. ಆದರೆ ಟಿ20ಯಲ್ಲಿ ಮಿಂಚಿದರೂ ಸೂರ್ಯ ಕುಮಾರ್‌ ಯಾದವ್‌ಗೆ ಏಕದಿನ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ.

“ಭಾರತವನ್ನು ಪ್ರತಿನಿಧಿಸುವ ಅವ ಕಾಶ ಸಿಕ್ಕಿದ್ದು ನನ್ನ ಪಾಲಿನ ಹೆಮ್ಮೆಯ ಸಂಗತಿ. ದೇಶಕ್ಕಾಗಿ ಆಡುವುದು ನನ್ನ ದೊಡ್ಡ ಕನಸಾಗಿತ್ತು. ಇಂಥದೊಂದು ಅದ್ಭುತ ತಂಡದ ಸದಸ್ಯನಾಗಿದ್ದಕ್ಕೆ ಬಹಳ ಖುಷಿಯಾಗುತ್ತಿದೆ. ಸದ್ಯ ರಾಷ್ಟ್ರೀಯ ತಂಡದಿಂದ ಬ್ರೇಕ್‌ ಸಿಕ್ಕಿದೆ. ಮುಂಬೈ ಇಂಡಿಯನ್ಸ್‌ ಕುಟುಂಬ ವನ್ನು ಸೇರಿಕೊಂಡಿದ್ದೇನೆ’ ಎಂಬು ದಾಗಿ ಸೂರ್ಯಕುಮಾರ್‌ ಯಾದವ್‌ ವೀಡಿಯೋ ಒಂದರಲ್ಲಿ ಹೇಳಿದ್ದಾರೆ.

ರೋಹಿತ್‌ ಶರ್ಮ ನೇತೃತ್ವದ ಚಾಂಪಿಯನ್‌ ತಂಡ ಈ ಬಾರಿ ಬಹಳಷ್ಟು ಆಟಗಾರರನ್ನು ಖರೀದಿಸಿದೆ. ಇವರಲ್ಲಿ ಪ್ರಮುಖರೆಂದರೆ ಆ್ಯಡಂ ಮಿಲೆ° (3.3 ಕೋ.ರೂ.), ನಥನ್‌ ಕೋಲ್ಟರ್‌ ನೈಲ್‌ (5 ಕೋ.ರೂ.), ಪೀಯೂಷ್‌ ಚಾವ್ಲಾ (2.4 ಕೋ.ರೂ.), ಜೇಮ್ಸ್‌ ನೀಶಮ್‌ (50 ಲಕ್ಷ ರೂ.), ಯುದ್ವೀರ್‌ ಸಿಂಗ್‌ (20 ಲಕ್ಷ ರೂ.), ಮಾರ್ಕೊ ಜೆನ್ಸನ್‌ (20 ಲಕ್ಷ ರೂ.) ಮತ್ತು ಅರ್ಜುನ್‌ ತೆಂಡುಲ್ಕರ್‌ (20 ಲಕ್ಷ ರೂ.).

ಎ. 9ಕ್ಕೆ ಆರಂಭ
ಎ. 9ರಂದು ಚೆನ್ನೈಯಲ್ಲಿ ಮುಖಾಮುಖೀ ಆಗುವ ಮೂಲಕ ಮುಂಬೈ ಇಂಡಿಯನ್ಸ್‌- ರಾಯಲ್‌ ಚಾಲೆಂಜರ್ ಬೆಂಗಳೂರು 2021ರ ಐಪಿಎಲ್‌ಗೆ ನಾಂದಿ ಹಾಡಲಿವೆ.

ಡೆಲ್ಲಿ ಕ್ರಿಕೆಟಿಗರ ಆಗಮನ
ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸೀನಿಯರ್‌ ಸ್ಪಿನ್ನರ್‌ ಆರ್‌. ಅಶ್ವಿ‌ನ್‌, ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌, ಶಿಮ್ರನ್‌ ಹೆಟ್‌ಮೈರ್‌ ಮತ್ತು ಕ್ರಿಸ್‌ ವೋಕ್ಸ್‌ ಸೋಮವಾರ ಮುಂಬಯಿಗೆ ಆಗಮಿಸಿದರು. ಇವರೊಂದಿಗೆ ಪ್ರಧಾನ ಕೋಚ್‌ ರಿಕಿ ಪಾಂಟಿಂಗ್‌ ಕೂಡ ಬಂದಿಳಿದರು. ಇವರೆಲ್ಲ ಒಂದು ವಾರ ಕ್ವಾರಂಟೈನ್‌ನಲ್ಲಿ ಉಳಿಯಲಿದ್ದಾರೆ.

ಕಳೆದ ಸಲದ ರನ್ನರ್ ಅಪ್‌ ತಂಡವಾಗಿರುವ ಡೆಲ್ಲಿ ಈ ಬಾರಿ ನಾಯಕ ಶ್ರೇಯಸ್‌ ಅಯ್ಯರ್‌ ಅವರ ಗೈರಲ್ಲಿ ಆಡಲಿಳಿಯಲಿದೆ. ತಂಡದ ನೂತನ ನಾಯಕನನ್ನು ಇನ್ನಷ್ಟೇ ಆಯ್ಕೆ ಮಾಡಬೇಕಿದೆ.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.