ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆ, ಪೊಲೀಸ್ ಪಥಸಂಚಲನ
Team Udayavani, Apr 24, 2023, 6:13 AM IST
ಮಂಗಳೂರು: ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ರವಿವಾರ ಕೇಂದ್ರ ಅರೆಸೇನಾ ಪಡೆ ಮತ್ತು ಪೊಲೀಸರು ಪಥಸಂಚಲನ ನಡೆಸಿದರು. ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ 2 ಗ್ರಾಮಗಳಲ್ಲಿ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ 6 ಸೂಕ್ಷ್ಮ ಸ್ಥಳಗಳು, ಪುತ್ತೂರು ನಗರ ವ್ಯಾಪ್ತಿಯ 3 ಪ್ರಮುಖ ಸ್ಥಳಗಳು, ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೇರಳ ಗಡಿ ಸೂಕ್ಷ್ಮ ಸ್ಥಳಗಳು, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕೇರಳ ಗಡಿಯ ಸೂಕ್ಷ್ಮ ಪ್ರದೇಶಗಳು ಹಾಗೂ ಧರ್ಮಸ್ಥಳ ಠಾಣೆ ವ್ಯಾಪ್ತಿಯ 4 ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದರು.