ಪರೀಕರ್ ಇದ್ದಿದ್ದರಾದರೂ ಗೋವಾ ಬಿಜೆಪಿಗೆ ಬಹುಮತ ಪಡೆಯಲಾಗಲಿಲ್ಲ: ರಾವುತ್
Team Udayavani, Oct 14, 2021, 7:14 PM IST
ಪಣಜಿ: ಕಳೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೋವಾದ ಮುಖ್ಯಮಂತ್ರಿ ದಿ ಮನೋಹರ್ ಪರೀಕರ್ ಅವರು ಇದ್ದಿದ್ದರಾದರೂ ಬಿಜೆಪಿಗೆ ಪೂರ್ಣ ಬಹುಮತ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ಶಿವಸೇನೆಯ ನಾಯಕ ಸಂಜಯ ರಾವುತ್ ಗುರುವಾರ ಹೇಳಿಕೆ ನೀಡಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ರಾವುತ್ ಅವರು ಬಿಜೆಪಿಯ ವಿರುದ್ಧ ಠೀಕಾ ಪ್ರಹಾರ ನಡೆಸಿದರು, ದೇಶದ ಗೃಹಮಂತ್ರಿ ಅಮಿತ್ ಶಾ ಗೋವಾದಲ್ಲಿ ಪಕ್ಷದ ಪರ ಪ್ರಚಾರ ಕಾರ್ಯ ನಡೆಸಿದ್ದಾರೆ. ಕಳೆದ ಬಾರಿಯೂ ಕೂಡ ಚುನಾವಣೆಯ ಸಂದರ್ಭದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರವಿತ್ತು ಹಾಗೂ ಅವರ ನಾಯಕರು ಗೋವಾಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಆದರೂ ಕೂಡ ಗೋವಾದಲ್ಲಿ ಬಿಜೆಪಿ ಕೇವಲ 13 ಸ್ಥಾನದಲ್ಲಿ ಜಯಗಳಿಸಿತ್ತು, ಕಾಂಗ್ರೆಸ್ 18 ಸ್ಥಾನಗಳಲ್ಲಿ ಜಯಗಳಿಸಿತ್ತು. ಸರ್ಕಾರ ಸ್ಥಾಪನೆಗೆ ಕಾಂಗ್ರೆಸ್ ಪಕ್ಷ ವಿಳಂಬ ಮಾಡಿದ್ದರಿಂದ ಗೋವಾದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿತು ಎಂದರು.
ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯ ನಂತರ ಅಧಿಕಾರ ಬದಲಾವಣೆಯಾಗಲಿದೆ. ಗೋವಾದಲ್ಲಿ ಶಿವಸೇನೆ ಪಕ್ಷವನ್ನು ಗೌರವಿಸುವ ಜನರು ಹೆಚ್ಚಿನ ಪ್ರಮಾಣದಲ್ಲಿದ್ದು, ಪ್ರಸಕ್ತ ಗೋವಾದ ಬಿಜೆಪಿ ಸರಾಕಾರದ ಮೇಲೆ ಜನತೆಗೆ ಬೇಸರವಿದೆ. ಇದರಿಂದಾಗಿ ಪ್ರಸಕ್ತ ಚುನಾವಣೆಯಲ್ಲಿ ಗೋವಾದಲ್ಲಿ ಅಧಿಕಾರ ಬದಲಾವಣೆಯಾಗಲಿದೆ ಎಂದು ರಾವುತ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು