ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Team Udayavani, Apr 23, 2023, 5:16 AM IST
ಗಂಗೊಳ್ಳಿ: ಹೊಸಾಡು ಗ್ರಾಮದ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ರಸ್ತೆ ದಾಟಲು ನಿಂತಿದ್ದ ತ್ರಾಸಿ ಗ್ರಾಮದ ಆನಗೋಡು ನಿವಾಸಿ ನಾಗೇಶ ಪೂಜಾರಿ (60) ಅವರಿಗೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು, ಸಾವನ್ನಪ್ಪಿದ ಘಟನೆ ಎ. 21ರಂದು ರಾತ್ರಿ 11.15ರ ಸುಮಾರಿಗೆ ಸಂಭವಿಸಿದೆ.
ಗಂಭೀರ ಗಾಯಗೊಂಡ ನಾಗೇಶ ಪೂಜಾರಿಯವರನ್ನು ರತ್ನಾಕರ ಆಚಾರ್ಯ ಹಾಗೂ ಸುನಿಲ್ ಪೂಜಾರಿ ಎಂಬುವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಕಾರು ಚಾಲಕ ಸ್ಟಾನಿ ಡಿ’ಸಿಲ್ವ ವಿರುದ್ಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
———–
ಕಾರು-ಬೈಕ್ ಢಿಕ್ಕಿ : ಸವಾರಗೆ ಗಾಯ
ಕುಂದಾಪುರ: ಕೋಟೇಶ್ವರದ ಫ್ಲೈಓವರ್ ಬಳಿ ಕಾರಿಗೆ ಬೈಕ್ ಢಿಕ್ಕಿಯಾಗಿ, ಬೈಕ್ ಸವಾರ ಪ್ರತೀಕ್ ಗಾಯಗೊಂಡ ಘಟನೆ ಎ. 22ರ ಬೆಳಗ್ಗೆ 8.10ರ ಸುಮಾರಿಗೆ ಸಂಭವಿಸಿದೆ.
ಗಾಯಗೊಂಡ ಪ್ರತೀಕ್ನನ್ನು ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ಶಾನ್ವಾಝ್ ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ಲಾಸ್ಟಿಕ್ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್!
ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ
Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್ ಜೆಹಾದ್ ತಡೆಗೆ ಸಹಾಯವಾಣಿ
ದುಬಾರಿ ದರಕ್ಕೆ ವಿದ್ಯುತ್ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ
Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ