ರಾಮಮಂದಿರಕ್ಕಾಗಿ ಪ್ರಧಾನಿ ಮೋದಿ ಕೇಶ ಬಿಟ್ಟಿರಬಹುದು: ಪೇಜಾವರ ಶ್ರೀ ಅಭಿಮತ
Team Udayavani, Dec 28, 2020, 6:10 AM IST
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕಾಗಿ ಕೇಶ ಬಿಟ್ಟಿರಬಹುದು ಎಂದು ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್ ಸದಸ್ಯರೂ ಆಗಿರುವ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಪ್ರಧಾನಿಯವರು ಅಧ್ಯಾತ್ಮಿಕ ವಿಚಾರದತ್ತ ಹೆಚ್ಚು ಒಲವು ಹೊಂದಿದ್ದಾರೆ. ನಮ್ಮಲ್ಲಿ ದೀಕ್ಷಾ ಬದ್ಧರಾಗುವುದು ಅಂತಿದೆ. ನಮಗನ್ನಿಸಿದಂತೆ ಮೋದಿಯವರು ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದಾರೆ. ಇದರಿಂದ ಅವರು ನೈತಿಕವಾಗಿ ಸಂಪೂರ್ಣ ಜವಾಬ್ದಾರಿ ಹೊಂದಿದಂತಾಗುತ್ತದೆ ಎಂದರು.
ರಾಮ ಮಂದಿರ ನಿರ್ಮಾಣಕ್ಕೆ ಮೂರೂವರೆ ವರ್ಷ ಅವಧಿಯಿದ್ದು, ಅಂದಾಜು 1,500 ಕೋ. ರೂ. ವೆಚ್ಚವಾಗಲಿದೆ. 500 ಕೋ. ರೂ. ಮಂದಿರ ನಿರ್ಮಾಣಕ್ಕೆ ಹಾಗೂ 1 ಸಾವಿರ ಕೋ. ರೂ. ಅನ್ನು ಪರಿಸರದ ಅಭಿವೃದ್ಧಿ, ಯಾತ್ರಾ ನಿವಾಸ, ಮಾರ್ಗಗಳ ನಿರ್ಮಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಶ್ರೀಗಳು ತಿಳಿಸಿದರು.
ರೈತರ ಚಳವಳಿ ಅಸಲಿಯಲ್ಲ
ದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಚಳವಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗ ನಡೆಯುತ್ತಿರುವುದು ರೈತ ಚಳವಳಿ ಅಲ್ಲ. ರೈತ ಚಳವಳಿ ಮುಖವಾಡದಲ್ಲಿ ಇನ್ನೇನೋ ನಡೀತಿದೆ. ಪ್ರಧಾನಿ ಮೋದಿಯವರು ಪ್ರತಿದಿನ ಮಾತುಕತೆಗೆ ಕರೆಯುತ್ತಿದ್ದಾರೆ. ಯಾವ ಅಂಶದಲ್ಲಿ ವಿರೋಧ ಇದೆ. ಆ ಬಗ್ಗೆ ಚರ್ಚೆ ಮಾಡಿ; ಪರಿಹರಿಸೋಣ ಎನ್ನುತ್ತಿದ್ದಾರೆ. ಆದರೆ ರೈತ ಹೋರಾಟ ಹಳಿ ತಪ್ಪಿ ಹೋಗುತ್ತಿದೆ. ಹೀಗಾಗಿ ಇದಕ್ಕೆ ನಮ್ಮ ಸಂಪೂರ್ಣ ಸಹಮತ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ