ಅಪಘಾತ ಭೀತಿ : ಬೋಳ ಬರಬೈಲ್ ಕಿರು ಸೇತುವೆ ವಿಸ್ತರಣೆಗೆ ಗ್ರಾಮಸ್ಥರ ಆಗ್ರಹ
Team Udayavani, Mar 10, 2021, 4:30 AM IST
ಬೆಳ್ಮಣ್: ಕಾರ್ಕಳ ತಾಲೂಕಿನಾದ್ಯಂತ ರಸ್ತೆಗಳು ವಾಹನ ಸಂಚಾರಕ್ಕೆ ಯೋಗ್ಯವಾಗಿದ್ದರೂ ಕೆಲವೆಡೆ ಕಿರು ಸೇತುವೆ, ಮೋರಿಗಳು ಇಕ್ಕಟ್ಟಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಇವುಗಳ ಪೈಕಿ ಕೆದಿಂಜೆಯಿಂದ ಕಾಂತಾವರಕ್ಕೆ ತೆರಳುವ ಪ್ರಮುಖ ಹೆದ್ದಾರಿಯಲ್ಲಿರುವ ಬರಬೆ„ಲ್ ಕಿರು ಸೇತುವೆಯೊಂದು ವಾಹನ ಸವಾರರಿಗೆ ನಿತ್ಯ ಸಮಸ್ಯೆಯಾಗಿದ್ದು ಸೇತುವೆ ವಿಸ್ತರಣೆಗೆ ಆಗ್ರಹ ಕೇಳಿಬಂದಿದೆ.
ಬೋಳ ಗ್ರಾ.ಪಂ. ವ್ಯಾಪ್ತಿಯ ಈ ಸೇತುವೆ ನಿರ್ಮಾಣಗೊಂಡು ಹಲವು ವರ್ಷ ಕಳೆದಿದ್ದರೂ ಅದರ ನಿರ್ವಹಣೆ ನಡೆದಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ.
ಅಪಘಾತ ವಲಯ
ಈ ಕಿರು ಸೇತುವೆ ಇದೀಗ ಅಪಘಾತ ವಲಯವಾಗಿ ಮಾರ್ಪಟ್ಟಿದ್ದು ಪ್ರತಿ ನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಲೇ ಇವೆ. ಎರಡೂ ಬದಿಗಳಲ್ಲಿ ತಿರುವು, ತಗ್ಗು ಪ್ರದೇಶವಿರುವುದರಿಂದ ವಾಹನಗಳು ಅತ್ಯಂತ ವೇಗವಾಗಿ ಚಲಿಸಿದಾಗ ಗೊತ್ತುಗುರಿ ಇಲ್ಲದೆ ಅಪಘಾತಗಳು ನಡೆಯುತ್ತಿವೆ. ಪಕ್ಕದಲ್ಲೇ ಪ್ರಾಥಮಿಕ ಶಾಲೆಯೂ ಇದ್ದು ಇಲ್ಲಿನ ಮಕ್ಕಳು ನಿತ್ಯ ಸೇತುವೆ ದಾಟುವುದು ತುಂಬಾ ಅಪಾಯಕಾರಿಯಾಗಿದೆ.
ಈ ಕಿರು ಸೇತುವೆ ಅಭಿವೃದ್ಧಿಯಾಗ ಬೇಕೆಂಬುದು ಬೋಳ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯಾಗಿದ್ದು ಈಗಾಗಲೇ ಹಲವು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಕೇವಲ ಸುಣ್ಣ ಬಣ್ಣ ಮಾತ್ರ ನಡೆಯುತ್ತಿದೆ
ಕಿರು ಸೇತುವೆಯ ಅಗಲೀಕರಣ ಬೇಡಿಕೆಯಿದ್ದರೂ ಪ್ರತೀ ಬಾರಿಯೂ ಬರಿ ಕಿರು ಸೇತುವೆಗೆ ಸುಣ್ಣ ಬಣ್ಣವನ್ನು ಬಳಿಯುವುದನ್ನು ಬಿಟ್ಟು ಅದರ ಅಗಲೀಕರಣದ ಬಗ್ಗೆ ಇಲಾಖೆ ಅಥವಾ ಅಧಿಕಾರಿಗಳು ಮನಸ್ಸೇ ಮಾಡುತ್ತಿಲ್ಲ. ಪದೇ ಪದೇ ಅಪಘಾತವನ್ನು ಸೃಷ್ಟಿಸುತ್ತಿರುವ ಈ ಸೇತುವೆಯ ಅಗಲೀಕರಣ ನಡೆಸುವಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಲೋಕೋಪಯೋಗಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಶೀಘ್ರ ಕಾಮಗಾರಿ ಆರಂಭ
ಈ ಬಗ್ಗೆ ಈಗಾಗಲೇ ಶಾಸಕರ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಇದರ ಕಾಮಗಾರಿ ನಡೆಯಲಿದೆ.
-ಸತೀಶ್ ಪೂಜಾರಿ, ಬೋಳ ಗ್ರಾ.ಪಂ. ಮಾಜಿ ಅಧ್ಯಕ್ಷ
ಶೀಘ್ರ ದುರಸ್ತಿಗೊಳಿಸಿ
ಸೇತುವೆ ನಿರ್ಮಾಣವಾದ ಬಳಿಕ ಇದುವರೆಗೂ ದುರಸ್ತಿ ನಡೆದಿಲ್ಲ. ಅಧಿ ಕಾರಿಗಳು ಎಚ್ಚೆತ್ತು ಕಿರು ಸೇತುವೆಯ ವಿಸ್ತರಣೆ ನಡೆಸಬೇಕಿದೆ..
-ಚಂದ್ರಹಾಸ್ ಪುತ್ರನ್, ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ