ಸಮರ್ಥ ವಿಪಕ್ಷವಾಗಿ ಕಾರ್ಯ ನಿರ್ವಹಣೆ: ಬೊಮ್ಮಾಯಿ
Team Udayavani, May 19, 2023, 7:24 AM IST
ಬೆಂಗಳೂರು: ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಆಯ್ಕೆ ಆಗಿ¨ªಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.
ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಮೇಲೆ ಜನ ಬಹಳಷ್ಟು ವಿಶ್ವಾಸ ಇಟ್ಟಿದ್ದಾರೆ. ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಅದನ್ನು ಅವರು ಪೂರೈಸಬೇಕಾಗಿದೆ. ಆಗ ರಾಜ್ಯದ ಆರ್ಥಿಕ ಸ್ವಾಸ್ಥ್ಯ ಹಾಳಾಗದಂತೆ ನೋಡಿಕೊಳ್ಳುವುದು ಕೂಡ ಅವರ ಜವಾಬ್ದಾರಿ. ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ತಿಳಿಸಿದರು.
ಶಾಸಕರ, ಪರಾಜಿತ ಅಭ್ಯರ್ಥಿಗಳ ಸಭೆ
ಸೋಲಿನ ಪರಾಮರ್ಶೆ ಬೇರೆ ಬೇರೆ ಹಂತದಲ್ಲಿ ನಡೆಯುತ್ತಿದೆ. 2-3 ದಿನಗಳಲ್ಲಿ ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಮಾಡುತ್ತೇವೆ. ಅದೇ ಸಭೆಯಲ್ಲಿ ವಿಪಕ್ಷ ನಾಯಕರ ತೀರ್ಮಾನ ಮಾಡುತ್ತೇವೆ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ರಾಜ್ಯ ಸರಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಾವು ಹಿಂದೆ ಬಿದ್ದಿದ್ದು, ಚುನಾವಣ ತಯಾರಿಯಲ್ಲಿ ಕಾಂಗ್ರೆಸ್ ಮುಂದಿದ್ದಿದ್ದು ಸೋಲಿಗೆ ಕಾರಣವಾಗಿದೆ. ನಾವು ಆತ್ಮ ಸ್ಥೈರ್ಯ ಕಳೆದುಕೊಂಡಿಲ್ಲ. ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ