ಜಾಗತಿಕ ಸನ್ನಿವೇಶ ಹೇಗಿದೆ…ದೇಶದಲ್ಲಿ ತೈಲ ಬೆಲೆ ಏರಿಕೆ ಬಗ್ಗೆ ಸಚಿವ ಪುರಿ ಸಮರ್ಥನೆ
ಕೋವಿಡ್ ಬಿಕ್ಕಟ್ಟು ಮತ್ತು ಯುದ್ಧದ ಪರಿಣಾಮ ಬೆಲೆ ಏರಿಕೆಗೆ ಕಾರಣವಾಗಿದೆ
Team Udayavani, Mar 24, 2022, 3:40 PM IST
ನವದೆಹಲಿ: ದೇಶದಲ್ಲಿ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಹೆಚ್ಚಳ ಮಾಡಿರುವುದನ್ನು ಲೋಕಸಭೆಯಲ್ಲಿ ಗುರುವಾರ (ಮಾರ್ಚ್ 24) ಸಮರ್ಥಿಸಿಕೊಂಡಿರುವ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾದ ಪರಿಣಾಮ ದರ ಏರಿಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ:ಮೃತ ಅಣ್ಣನ ಹೆಸರಲ್ಲಿ 24 ವರ್ಷ ಸರ್ಕಾರಿ ಶಿಕ್ಷಕನಾಗಿ ಕೆಲಸ ಮಾಡಿದ್ದ ನಕಲಿ ಶಿಕ್ಷಕ ಅಂದರ್
ತೈಲ ಬೆಲೆ ಹೆಚ್ಚಳದ ನಡುವೆಯೂ ಜನರಿಗೆ ಅಗ್ಗದ ದರದಲ್ಲಿ ತೈಲ ಲಭ್ಯವಾಗುವಂತೆ ಪ್ರಯತ್ನಿಸಲಾಗುವುದು ಎಂದು ಈ ಸಂದರ್ಭದಲ್ಲಿ ಪುರಿ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನೈಸರ್ಗಿಕ ಅನಿಲದ ಬೆಲೆ ಶೇ.37ಕ್ಕಿಂತಲೂ ಅಧಿಕವಾಗಿ ಹೆಚ್ಚಳವಾಗಿದೆ. ಕೋವಿಡ್ ಬಿಕ್ಕಟ್ಟು ಮತ್ತು ಯುದ್ಧದ ಪರಿಣಾಮ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದರು.
ಅದೇ ರೀತಿ ಎಲ್ ಪಿಜಿ ಬೆಲೆ ಕೂಡಾ ಸೌದಿ ಅರೇಬಿಯಾದ ಗುತ್ತಿಗೆ ದರ ಆಧಾರದ ಮೇಲೆ ಹೇಳುವುದಾದರೆ 2020ರ ಏಪ್ರಿಲ್ ನಿಂದ 2022ರ ಮಾರ್ಚ್ ವರೆಗೆ ಶೇ.285ರಷ್ಟು ಹೆಚ್ಚಳವಾಗಿದೆ. ನಾವು ಕಳೆದ ಆರು ತಿಂಗಳಿನಿಂದ ಶೇ.37ರಷ್ಟು ಮಾತ್ರ ಹೆಚ್ಚಳ ಮಾಡಿರುವುದಾಗಿ ಸಚಿವ ಪುರಿ ಮಾಹಿತಿ ನೀಡಿದ್ದಾರೆ.
ನಾನು ಈ ಅಂಕಿ ಅಂಶ ಯಾಕೆ ಹೇಳುತ್ತಿದ್ದೇನೆ ಅಂದರೆ ಸಂಸದರಿಗೆ ಈ ಸತ್ಯ ತಿಳಿಯಬೇಕಾಗಿದೆ. ಅಷ್ಟೇ ಅಲ್ಲ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿನ ಸನ್ನಿವೇಶ ಹೇಗಿದೆ ಎಂಬುದನ್ನು ಮನಗಾಣಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ