ತೋಟದಲ್ಲಿ ಪಿಕಪ್ ವಾಹನ ಪಲ್ಟಿ : ಮರಗಳ್ಳರು ಪರಾರಿ
ಬೀಟೆ ಮರದ ದಿಮ್ಮಿ ಸಾಗಾಟ ಪ್ರಯತ್ನ ವಿಫಲ
Team Udayavani, Jun 11, 2023, 5:36 AM IST
ಮಡಿಕೇರಿ: ಕಾಫಿ ತೋಟದಲ್ಲಿದ್ದ ಬೀಟೆ ಮರವನ್ನು ಅಕ್ರಮವಾಗಿ ಕಡಿದು ಅದರ ದಿಮ್ಮಿಗಳನ್ನು ಕದ್ದೊಯ್ಯುತ್ತಿದ್ದ ಸಂದರ್ಭ ವಾಹನ ಪಲ್ಟಿಯಾದ ಹಿನ್ನೆಲೆ ಮರಗಳ್ಳರು ಸ್ಥಳದಿಂದ ಪರಾರಿಯಾಗಿರುವ ಪ್ರಕರಣ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀಟೆ ಮರದ 7 ದಿಮ್ಮಿಗಳ ಸಹಿತ ಸಾಗಾಟಕ್ಕೆ ಬಳಸಿದ್ದ ಪಿಕಪ್ ವಾಹನವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದ ತೀತರಮಾಡ ಸುನೀಲ್ ಅವರ ಕಾಫಿ ತೋಟದಲ್ಲಿ ಬೀಟೆ ಮರಗಳಿದ್ದು, ವಾರದ ಹಿಂದೆ ಮರಗಳ್ಳರು 1 ಮರವನ್ನು ಕಡಿದು ಹಾಕಿದ್ದರು. ಈ ಕುರಿತು ತೋಟದ ಮಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿ ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಸ್ಥಳದಿಂದ ತೆರಳಿದ್ದರು. ಬೀಟೆ ಮರದ ದಿಮ್ಮಿಗಳನ್ನು ತೋಟದಲ್ಲೇ ಬಿಡಲಾಗಿತ್ತು.
ತೋಟದ ಮಾಲಕರು ಬೆಂಗಳೂರಿಗೆ ತೆರಳಿದ್ದ ಮಾಹಿತಿ ಅರಿತ ಚೋರರು ಶುಕ್ರವಾರ ರಾತ್ರಿ ಪಿಕಪ್ ವಾಹನದಲ್ಲಿ ದಿಮ್ಮಿಗಳನ್ನು ತುಂಬಿಸಿ ಕದ್ದೊಯ್ಯುವ ಪ್ರಯತ್ನ ಮಾಡಿದ್ದರು. ಈ ಸಂದರ್ಭ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ ಮರ ಕಳ್ಳರು ವಾಹನ ಸಹಿತ ಬೀಟೆ ಮರದ ದಿಮ್ಮಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ