ಲಾಕ್ ಡೌನ್ ಅವಧಿಯಲ್ಲಿ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ಧಿ


Team Udayavani, Jun 5, 2021, 6:55 PM IST

ಲಾಕ್ ಡೌನ್ ಅವಧಿಯಲ್ಲಿ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ಧಿ

ಮಂಗಳೂರು : ಒಂದೆಡೆ ಕೋವಿಡ್ ಸೋಂಕಿನ ಕರಿನೆರಳು ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಮನೆ ಮಾಡಿದ್ದರೆ, ಇನ್ನೊಂದೆಡೆ ಪಿಲಿಕುಳದ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ದಿಯ ಖುಷಿಯ ವಿಚಾರವನ್ನು ಪಿಲಿಕುಳ ಜೈವಿಕ ಉದ್ಯಾವನದ ನಿರ್ದೇಶಕ ಹೆಚ್. ಜೆ. ಭಂಡಾರಿಯವರು ತಿಳಿಸಿದ್ದಾರೆ.
ಪಿಲಿಕುಳ ಮೃಗಾಲದಲ್ಲಿರುವ ರಾಣಿ ಹುಲಿ, ಕಾಡುಶ್ವಾನ ‘ದೋಳ್‌’ , ‘ರಿಯಾ’ ಪಕ್ಷಿ, ‘ಲಟಿಕ್ಯುಲೇಟಿಡ್‌’ ಹೆಬ್ಬಾವು, ಕಾಳಿಂಗ ಸರ್ಪ ಇವು ಸಂತಾನಾಭಿವೃದ್ದಿಯನ್ನು ನಡೆಸಿದ ಪ್ರಾಣಿಗಳು.

ರಾಣಿ ಹುಲಿ :
10 ವರ್ಷ ಪ್ರಾಯದ ‘ರಾಣಿ’ ಹುಲಿ ಮೂರು ಮರಿಗಳಿಗೆ ಜನ್ಮ ನೀಡಿದೆ. ಹಿಂದೆ 2019ರಲ್ಲಿ ರೇವಾ, ಸುಧಾ, ಜಯರಾಮ, ಸಂಜಯ ಮತ್ತು ವಿಜಯ ಎಂಬ 5 ಮರಿಗಳಿಗೆ ಜನ್ಮ ನೀಡಿದ್ದು, ಅದು ಈಗ ಬೆಳೆದು ದೊಡ್ಡದಾಗಿವೆ. ಈಗ ಜನಿಸಿದ ಮರಿಗಳು ಆರೋಗ್ಯವಾಗಿದ್ದು ಇನ್ನು 16 ದಿನಗಳಲ್ಲಿ ಕಣ್ಣು ತೆರೆಯಲಿವೆಯಂತೆ.

ರಾಣಿ ಹುಲಿಯನ್ನು ಪ್ರಾಣಿ ವಿನಿಮಯ ಕಾರ್ಯದಡಿ ಬನೇರುಘಟ್ಟ ಮೃಗಾಲಯಕ್ಕೆ ಪಿಲಿಕುಲದ ಒಂದು ಗಂಡು ಹುಲಿಯನ್ನು ನೀಡಿ ಬದಲಿಗೆ ರಾಣಿಯನ್ನು ಕರೆತರಲಾಗಿತ್ತು, ಸದ್ಯ ಈಗ ಪಿಲಿಕುಲದಲ್ಲಿ ಹುಲಿಗಳ ಸಂಖ್ಯೆ 13 ಕ್ಕೆ ಏರಿದೆ.

ಕಾಡುಶ್ವಾನ ‘ದೋಳ್‌’ :
ಆಂದ್ರ ಪ್ರದೇಶದ ವಿಶಾಖಪಟ್ಟಣಂ ಮೃಗಾಲಯದಿಂದ ತರಿಸಲಾದ ಅಳಿವಿನಂಚಿನಲ್ಲಿರುವ ಕಾಡು ಶ್ವಾನಗಳ ವರ್ಗಕ್ಕೆ ಸೇರಿದ ‘ದೋಳ್‌’ ಇತ್ತೀಚಿಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಇದೆ ‘ದೋಳ್‌” ಈ ಹಿಂದೆ 5 ಮರಿಗಳಿಗೆ ಜನ್ಮ ನೀಡಿತ್ತು. ಮೃಗಾಲಯದಲ್ಲಿರುವ ಇನ್ನೊಂದು ‘ದೋಳ್‌ ಹತ್ತು ಮರಿಗಳಿಗೆ ಜನ್ಮ ನೀಡಿತ್ತು. ಪಿಲಿಕುಲದಲ್ಲಿ “ದೋಳ್‌” ಕಾಡು ಶ್ವಾನಗಳ ಸಂಖ್ಯೆ 32ಕ್ಕೆ ಏರಿದೆ.

‘ರಿಯಾ’ ಪಕ್ಷಿಯ ಜನನ:
ಉಷ್ಟ್ರಪಕ್ಷೀಯ ವರ್ಗಕ್ಕೆ ಸೇರಿದ ಬಿಳಿ ರಿಯಾವು ಮೊಟ್ಟೆಗಳನಿಟ್ಟಿದು. ಅವುಗಳಿಗೆ ಪ್ರಯೋಗಾಲಯದಲ್ಲಿ ಕೃತಕ ಕಾವು ಕೊಡಲಾಗುತ್ತಿದ್ದು , ಅದರಲ್ಲಿ ಈಗಾಗಲೇ ಒಂದು ಬಿಳಿ ರಿಯಾ ಮರಿಯು ಜನ್ಮ ತಾಳಿದೆ.

‘ರೆಟಿಕ್ಯುಲೇಟಿಡ್‌’ ಹೆಬ್ಬಾವು:
ಅಪರೂಪದ ಅಳಿವಿನಂಚಿನಲಿರುವ ‘ರೆಟಿಕ್ಕುಲೇಟೆಡ್‌’ ಹೆಬ್ಬಾವು ಸುಮಾರು 20 ಮೊಟ್ಟೆಗಳನಿಟ್ಟು ಕಾವು ನೀಡುತ್ತಿದೆ. ಇದೇ ಹೆಬ್ಬಾವು ಕಳೆದ ಸಾಲಿನಲ್ಲಿ 17 ಮರಿಗಳಿಗೆ ಜನ್ಮ ನೀಡಿದೆ. ರೆಟಿಕ್ಯುಲೇಟೆಡ್‌ ಹೆಬ್ಬಾವು ನಿಕೊಬಾರ್‌ನಲ್ಲಿ ಕಾಣಸಿಗುವ ಹಾವುಗಳು.

ಕಾಳಿಂಗ ಸರ್ಪ:
ಕೆಲವು ವರ್ಷಗಳ ಹಿಂದೆ ದೇಶದಲ್ಲೇ ಪ್ರಥಮಬಾರಿ ವೈಜ್ಞಾನಿಕವಾಗಿ ಕಾಳಿಂಗಗಳ ಸಂತಾನಾಭಿವೃದಿ ಪಡಿಸಿದ ಕೀರ್ತಿ ಪಿಲಿಕುಳ ಮೃಗಾಲಯಕ್ಕೆ ಸಲ್ಲುತ್ತದೆ. ಈಗ ಕಾಳಿಂಗ ‘ನಾಗಮಣಿ’ ಯು ಆರು ಮೊಟ್ಟೆಗಳನ್ನು ಇಟ್ಟಿದ್ದು ಅವುಗಳಿಗೆ ಕೃತಕ ಕಾವು ಕೊಡಲಾಗುತ್ತಿವೆ. ಪಿಲಿಕುಳದಲ್ಲಿ ಒಟ್ಟು 19 ಕಾಳಿಂಗ ಸರ್ಪಗಳಿವೆ.

ಇನ್ನು “ಲಾಕ್‌ಡೌನ್ ಮುಗಿದ ಬಳಿಕ ಪ್ರಾಣಿ ವಿನಿಮಯದಲ್ಲಿ ಚೆನ್ನೈ ನ ವಂಡಲೂರು ಮೃಗಾಲಯದಿಂದ ಬಿಳಿ ಹುಲಿಯನ್ನು ತರಿಸಲಾಗುವುದು. ಒರಿಸ್ಸಾದ ನಂದನಕಾನನ್, ಸೂರತ್, ಮತ್ತು ಹೈದರಾಬಾದ್ ಮೃಗಾಲಯದಿಂದ ಕೆಲವು ಪ್ರಾಣಿ ಪಕ್ಷಿಗಳನ್ನು ತರುವ ಬಗ್ಗೆ ಯೋಜನೆ ಕೈಗೊಳ್ಳಲಾಗಿದೆ” ಎಂದು ಪಿಲಿಕುಲ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್. ಜೆ. ಭಂಡಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.