ಕೇರಳ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ
ಎರಡನೇ ಬಾರಿಗೆ ಪಕ್ಷ ಅಧಿಕಾರಕ್ಕೇರಿದ್ದು ಕೇರಳ ರಾಜಕೀಯ ಇತಿಹಾಸದಲ್ಲಿ ಮೊದಲನೆಯದ್ದಾಗಿದೆ.
Team Udayavani, May 20, 2021, 5:46 PM IST
ತಿರುವನಂತಪುರಂ: ಕೋವಿಡ್ 19 ಸೋಂಕು ಬಿಕ್ಕಟ್ಟಿನ ನಡುವೆಯೇ ಪಿಣರಾಯಿ ವಿಜಯನ್ ಅವರು ಗುರುವಾರ(ಮೇ 20) ಎರಡನೇ ಬಾರಿಗೆ ಕೇರಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ:ಲಾಕ್ ಡೌನ್ ಮುಂದುವರಿಕೆ ಬಗ್ಗೆ ಮೇ.23ರಂದು ಸಿಎಂ ನಿರ್ಧಾರ: ಡಿಸಿಎಂ ಅಶ್ವಥ್ ನಾರಾಯಣ್
ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂ ಪ್ರದೇಶದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯದಲ್ಲಿ ಏಪ್ರಿಲ್ 6ರಂದು ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ಹಿರಿಯ ಮುಖಂಡ ಪಿಣರಾಯಿ ನೇತೃತ್ವದ ಎಲ್ ಡಿಎಫ್ ಪ್ರಚಂಡ ಜಯಭೇರಿ ಬಾರಿಸಿತ್ತು.
ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸರಳ ಸಮಾರಂಭದಲ್ಲಿ 76ವರ್ಷದ ಪಿಣರಾಯಿ ವಿಜಯನ್ ಅವರಿಗೆ ರಾಜ್ಯಪಾಲರಾದ ಅರೀಫ್ ಮೊಹಮ್ಮದ್ ಖಾನ್ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಸಂಪೂರ್ಣವಾಗಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಕೋವಿಡ್ 19 ಸೋಂಕು ಹರಡಬಹುದು ಎಂಬ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿರೋಧ ಪಕ್ಷವಾದ ಕಾಂಗ್ರೆಸ್, ಯುಡಿಎಫ್ ಮೈತ್ರಿಕೂಟದ ಮುಖಂಡರು ಪ್ರಮಾಣವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿದಿದ್ದರು.
ರಾಜ್ಯದಲ್ಲಿ ಮರು ಆಯ್ಕೆಗೊಂಡ ಮುಖ್ಯಮಂತ್ರಿಗಳಲ್ಲಿ ಪಿಣರಾಯಿ ವಿಜಯನ್ ಮೂರನೇಯವರಾಗಿದ್ದಾರೆ. ಅಷ್ಟೇ ಅಲ್ಲ ಎಲ್ ಡಿಎಫ್ ಮೊದಲ ಅವಧಿಯನ್ನು ಪೂರ್ಣಗೊಳಿಸಿ ಎರಡನೇ ಬಾರಿಗೆ ಪಕ್ಷ ಅಧಿಕಾರಕ್ಕೇರಿದ್ದು ಕೇರಳ ರಾಜಕೀಯ ಇತಿಹಾಸದಲ್ಲಿ ಮೊದಲನೆಯದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!