ಬಾಯಲ್ಲಿ ಇಟ್ಟರೆ ಬೆಣ್ಣೆ ತರ ಕರಗುವ ಮೃದುವಾದ ಪೈನಾಪಲ್ ಕೇಸರಿಬಾತ್ ರೆಸಿಪಿ…
ಶ್ರೀರಾಮ್ ನಾಯಕ್, Jan 27, 2023, 5:58 PM IST
ಅನಾನಸ್ ನೋಡಲು ಮುಳ್ಳು ಮುಳ್ಳಾಗಿದ್ದರೂ, ತಿನ್ನಲು ಬಲು ರುಚಿಯಾದ ಹಣ್ಣು. ತಿನ್ನಲಷ್ಟೇ ಅಲ್ಲ, ಸಿಹಿತಿಂಡಿಗಳ ತಯಾರಿಕೆಯಲ್ಲೂ ಅನಾನಸ್ ಅನ್ನು ಬಳಸುತ್ತಾರೆ. ಉದಾಃ ಜ್ಯೂಸ್, ಹೋಳಿಗೆ, ಜಾಮ್, ಸಾರು, ಸಲಾಡ್, ಕೇಸರಿ ಬಾತ್, ಐಸ್ಕ್ರೀಮ್ ಹೀಗೆ ನಾನಾ ರುಚಿಯ ಆಹಾರ ಮಾಡಿ ಸವಿಯಬಹುದು. ಈ ಹಣ್ಣು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.
ಇದರಲ್ಲಿ ವಿಟಮಿನ್ ಎ, ಬಿ, ಸಿ, ಪೊಟಾಷ್ಯಿಯಂ, ಹಾಗೂ ದೇಹಕ್ಕೆ ಅಗತ್ಯವಾದ ಇತರ ಖನಿಜಾಂಶಗಳಿದ್ದು ಇದನ್ನು ತಿನ್ನುವುದರಿಂದ ಅನೇಕ ಆರೋಗ್ಯಕರ ಗುಣಗಳನ್ನು ಪಡೆಯಬಹುದಾಗಿದೆ .
ಹಾಗಾದರೆ ನಾವಿಂದು ಅನಾನಸ್ ನಿಂದ ಕೇಸರಿ ಬಾತ್ ಮಾಡುವ ವಿಧಾನವನ್ನು ನಿಮಗಾಗಿ ಪ್ರಸ್ತುತಪಡಿಸುತ್ತೇವೆ. ನೀವೂ ಸಹ ಈ ರೆಸಿಪಿಯನ್ನು ಮನೆಯಲ್ಲಿ ಒಮ್ಮೆ ಟ್ರೈ ಮಾಡಿ ಸ್ವಾಧಿಷ್ಟವಾಗಿ ಸವಿಯಿರಿ.
ಬೇಕಾಗುವ ಸಾಮಗ್ರಿಗಳು
ಅನಾನಸ್ ಪ್ಯೂರಿ 1 ಕಪ್, ಸಕ್ಕರೆ 4 ಚಮಚ , ಹಾಲು 1 ಕಪ್, ಬಾಂಬೆ ರವೆ 1 ಕಪ್, ಏಲಕ್ಕಿ ಪುಡಿ – ಅರ್ಧ ಟೀಸ್ಪೂನ್, ತುಪ್ಪ- 4 ಚಮಚ, ಕೇಸರಿ- ಕೆಲವು ಎಸಳು(ಕೇಸರಿ ಬಣ್ಣ ಸ್ವಲ್ಪ), ದ್ರಾಕ್ಷಿ-ಗೋಡಂಬಿ-ಸ್ವಲ್ಪ.
ತಯಾರಿಸುವ ವಿಧಾನ
-ಮೊದಲಿಗೆ ಒಂದು ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಅನಾನಸ್ ಪ್ಯೂರಿ ಹಾಕಿ, ಸ್ವಲ್ಪ ಸಕ್ಕರೆ ಸೇರಿಸಿ ಕುದಿಸಿರಿ.
-ಇನ್ನೊಂದು ಬಾಣಲೆ ತೆಗೆದುಕೊಂಡು ಅದಕ್ಕೆ ತುಪ್ಪ ಹಾಕಿ, ನಂತರ ರವೆಯನ್ನು ಸೇರಿಸಿ ಗುಲಾಬಿ ಬಣ್ಣಕ್ಕೆ ತಿರುಗುವವರೆಗೆ ಕೈಯಾಡಿಸುತ್ತಾ ಹುರಿಯಿರಿ.
-ಈಗ ರವೆಗೆ ಹಾಲನ್ನು ಹಾಕಿ, ಅಗತ್ಯವಿದ್ದರೆ ನೀರನ್ನು ಸೇರಿಸಿ ಕಲಸಿಕೊಳ್ಳಿ.
-ಆ ಮೇಲೆ ಸಕ್ಕರೆ, ಕೇಸರಿ ಬಣ್ಣ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ.
-ನಂತರ ಅನಾನಸ್ ಪ್ಯೂರಿಯನ್ನು ಸೇರಿಸಿ, ಮಧ್ಯಮ ಉರಿಯಲ್ಲಿ ಬೇಯಿಸಿ.
-ತದ ನಂತರ ಒಂದು ಚಮಚ ತುಪ್ಪ ಸೇರಿಸಿ. ಏಲಕ್ಕಿ ಪುಡಿ ಮತ್ತು ದ್ರಾಕ್ಷಿ,ಗೋಡಂಬಿ ಸೇರಿಸಿ ಮಿಶ್ರ ಮಾಡಿ.
-ಕೇಸರಿ ಎಸಳಿನಿಂದ ಅಲಂಕರಿಸಿ . ರುಚಿಯಾದ ಅನಾನಸ್ ಕೇಸರಿಬಾತ್ ಸವಿಯಲು ಸಿದ್ಧವಾಗಿದೆ.
*ಶ್ರೀರಾಮ್ ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ಗುಲ್ ಮಾರ್ಗ್, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…
ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?
Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ
Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?
Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ